DC Shivamogga ನಂದಿನಿ ಹಾಲು ಮಾರಾಟಗಾರರಿಗೆ ಜಿಎಸ್ಟಿಯಿಂದ ಆಗುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ನಂದಿನಿ ಹಾಲು ಅಧಿಕೃತ ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಿದರು.
ಬಹುತೇಕ ಡೀಲರ್ದಾರರು ಜಿಎಸ್ಟಿ ವ್ಯಾಪ್ತಿಯಲ್ಲಿ ಬರುವುದರಿಂದ ನಂದಿನಿ ಹಾಲಿನ ಡೀಲರ್ದಾರರಿಗೆ ತುಂಬಾ ತೊಂದರೆಯಾಗುತ್ತಿದೆ. ಜಿಎಸ್ಟಿ ವ್ಯಾಪ್ತಿಯಲ್ಲಿ ವಾರ್ಷಿಕ 1 ಕೋಟಿ ರೂ. ವಹಿವಾಟು ನಡೆಸಲು ಅವಕಾಶ ಮಾಡಿಕೊಡಬೇಕು. ನಮಗೆ ಶೇ. 3ರಿಂದ 4ರಷ್ಟು ಮಾರ್ಜಿನ್ ಇದ್ದು, ವಾರ್ಷಿಕ ಒಂದು ಲಕ್ಷ ರೂ.ನಿಂದ ಎರಡು ಲಕ್ಷ ರೂ. ವರೆಗೆ ಆದಾಯ ಇರುತ್ತದದೆ. ಮನೆ ಬಾಡಿಗೆ, ಮಕ್ಕಳ ಶಿಕ್ಷಣ, ಆರೋಗ್ಯ ಖರ್ಚು ಎಲ್ಲವನ್ನು ನಿರ್ವಹಣೆ ಮಾಡಬೇಕಿರುತ್ತದೆ. ಜಿಎಸ್ಟಿಯಲ್ಲಿ ಬರುವುದರಿಂದ ವೆಚ್ಚ ಭರಿಸುವುದು ಸೇರಿದಂತೆ ಇನ್ನಿತರ ಸಮಸ್ಯೆಗಳಾಗುತ್ತಿವೆ ಎಂದು ಮನವಿಯಲ್ಲಿ ತಿಳಿಸಿದರು.
DC Shivamogga ಈಗಾಗಲೇ ನಮ್ಮ ಬಿಪಿಎಲ್ ಕಾರ್ಡ್ ರದ್ದಾಗಿದ್ದು, ಆರೋಗ್ಯ ವಿಮೆ, ಸರ್ಕಾರಿ ಸೌಲಭ್ಯಗಳ ಮತ್ತು ಕಾರ್ಮಿಕ ಕಾರ್ಡ್ಗಳಿಂದಲೂ ವಂಚಿತರಾಗಿದ್ದೇವೆ. ಎಲ್ಲ ಸಮಸ್ಯೆಗಳನ್ನು ಗಮನಿಸಿ ಸೂಕ್ತ ಪರಿಹಾರ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದರು.
ಸಂಘದ ಅಧ್ಯಕ್ಷ ಯುಕೆ ಪ್ರಕಾಶ್, ಸಹ ಕಾರ್ಯದರ್ಶಿ ಮೋಹನ್, ಖಜಾಂಚಿ ಕೆ ಕೆ ಚಂದ್ರಶೇಖರ್, ಶಿವಮೊಗ್ಗ ಜಿಲ್ಲಾ ವಿತರಕರ ಸಂಘದ ಅಧ್ಯಕ್ಷ ದೇವರಾಜ್ ಎಂ ಸಿ, ನಾಗರಾಜ್, ಮಲ್ಲಿಕಾರ್ಜುನ್, ಜಲೀಲ್ ಸಾಬ್, ನವೀನ್, ರಾಘವೇಂದ್ರ ಇತರರಿದ್ದರು.
DC Shivamogga ಜಿಎಸ್ ಟಿಯಿಂದ ಆಗುತ್ತಿರುವ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿಗಳಿಗೆ ಮನವಿ
Date:
