Wednesday, August 12, 2026
Wednesday, August 12, 2026

D. K. Shivakumar ಮಹದಾಯಿ ಯೋಜನೆ ಬಗ್ಗೆ ಐತೀರ್ಪು ಬೆಂಬಲವಿದೆ.ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಖಂಡನೀಯ- ಡೀಸಿಎಂ ಡಿ.ಕೆ.ಶಿವಕುಮಾರ್

Date:

D. K. Shivakumar ಮಹದಾಯಿ ಕೇವಲ ನದಿಯಲ್ಲ, ಅವಳು ನಮ್ಮ ಮಹಾತಾಯಿ. ಕೇಂದ್ರವು ಮಹದಾಯಿ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂಬ ಗೋವಾ ಸಿಎಂ ಪ್ರಮೋದ್ ಸಾವಂತ್ ಅವರ ಹೇಳಿಕೆ ನಿಜಕ್ಕೂ ಆಘಾತಕಾರಿ. 2018ರಲ್ಲಿ ಮಹದಾಯಿ ಜಲವಿವಾದ ನ್ಯಾಯಮಂಡಳಿ 13.42 ಟಿಎಂಸಿ ನೀರನ್ನು ನಮ್ಮ ರಾಜ್ಯಕ್ಕೆ ನಿಗದಿಪಡಿಸಿ ಐತೀರ್ಪು ನೀಡಿದ್ದರೂ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿರುವುದು ಖಂಡನೀಯ.
ಮಹದಾಯಿ ಯೋಜನೆಯು ಬೆಳಗಾವಿ, ಧಾರವಾಡ, ಗದಗ ಮತ್ತು ಬಾಗಲಕೋಟೆಯ ಸುಮಾರು 40 ಲಕ್ಷಕ್ಕೂ ಹೆಚ್ಚು ಜನರಿಗೆ ನೀರು ಒದಗಿಸಲಿದೆ. ಉತ್ತರ ಕರ್ನಾಟಕದ ಜನರ ಮತ್ತು ರೈತರ ಹಿತಾಸಕ್ತಿ ಪರಿಗಣಿಸಿ, ಕೇಂದ್ರ ಸರ್ಕಾರವು ತಕ್ಷಣವೇ ಈ ಯೋಜನೆಗೆ ಅನುಮೋದನೆ ನೀಡಬೇಕು. ನಾನು ಇತ್ತೀಚೆಗೆ ದೆಹಲಿಗೆ ತೆರಳಿದ ಸಂದರ್ಭದಲ್ಲಿ ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅವರನ್ನು ವೈಯಕ್ತಿಕವಾಗಿ ಭೇಟಿ ಮಾಡಿ, ತಕ್ಷಣವೇ ಮಹದಾಯಿ ಯೋಜನೆಗೆ ಅನುಮತಿ ನೀಡುವಂತೆ ಒತ್ತಾಯಿಸಿದ್ದೇನೆ.

D. K. Shivakumar ಮಹದಾಯಿಗಾಗಿ ನಮ್ಮದು ನ್ಯಾಯಯುತವಾದ ಹೋರಾಟ. ನಮ್ಮ ಪಾಲಿನ ನೀರು ಸಿಗುವವರೆಗೂ ಈ ಹೋರಾಟ ನಿರಂತರ.
ನಮ್ಮ ನೀರು. ನಮ್ಮ ಹಕ್ಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಮಹದಾಯಿ ಯೋಜನೆ ಕುರಿತು ಸ್ಪಷ್ಟ ಅಭಿಪ್ರಾಯ ಹಂಚಿಕೊಂಡಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...