Sunday, August 2, 2026
Sunday, August 2, 2026

Sahyadri Narayana Multispeciality Hospital ಜುಲೈ 28. ವಿಶ್ವ ಹೆಪಟೈಟಿಸ್ ದಿನ. ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ಉಚಿತ ತಪಾಸಣಾ ಶಿಬಿರ

Date:

Sahyadri Narayana Multispeciality Hospital ವಿಶ್ವ ಹೆಪಟೈಟಿಸ್ ದಿನದ ಪ್ರಯುಕ್ತ ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ
ಉಚಿತ ಹೆಪಟೈಟಿಸ್ ‘ಬಿ’ ತಪಾಸಣಾ ಶಿಬಿರ ನಡೆಯಲಿದೆ.

ಪ್ರತಿ ವರ್ಷ ಜುಲೈ ೨೮ರಂದು ವಿಶ್ವ ಹೆಪಟೈಟಿಸ್ ದಿನವನ್ನಾಗಿ ಆಚರಿಸಲಾಗುತ್ತಿದೆ. ಈ ಪ್ರಯುಕ್ತ ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜುಲೈ ೨೮ ರಿಂದ ಆಗಸ್ಟ್ ೨ನೇ ತಾರೀಖಿನವರೆಗೆ ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೨ ರವರೆಗೆ ಉಚಿತವಾಗಿ ಹೆಪಟೈಟಿಸ್ ‘ಬಿ’ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತರು ಉಚಿತವಾಗಿ ನೊಂದಣಿ ಮಾಡಿಸಿಕೊಂಡು ವೈದ್ಯರ ಸಲಹೆ ಮೇರೆಗೆ ಉಚಿತವಾಗಿ ಹೆಪಟೈಟಿಸ್‌ ʼಬಿʼ ಲಸಿಕೆ ಪಡೆಯಬಹುದು.

ಭಾರತ ದೇಶದಲ್ಲಿ ಹೆಪಟೈಟಿಸ್ ರೋಗಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಗಣನಿಯವಾಗಿ ಏರಿಕೆಯಾಗುತ್ತಿದೆ. ಹೆಪಟೈಟಿಸ್ ‘ಬಿ’ ರೋಗಕ್ಕೆ ಔಷದಿ ಹಾಗೂ ಲಸಿಕೆ ನೀಡದಿದ್ದರೆ ಅದು ಅಪಾಯಕಾರಿ ಮತ್ತು ಮರಣಕ್ಕೆ ಕಾರಣವಾಗಬಹುದು ಎಂದು ಆಸ್ಪತ್ರೆಯ ಯಕೃತ್‌ ಮತ್ತು ಗ್ಯಾಸ್ಟೊಎಂಟರಾಲಜಿ ವಿಭಾಗದ ವೈದ್ಯರಾದ ಡಾ. ಶಿವಕುಮಾರ್ ವಿ. ಹಾಗೂ ಡಾ. ಸುಮೇಶ್ ನಾಯರ್ ಎಸ್ ತಿಳಿಸಿದರು.

Sahyadri Narayana Multispeciality Hospital ಹೆಪಟೈಟಿಸ್ ‘ಬಿ’ ರೋಗವನ್ನು ತಡೆಗಟ್ಟಲು ಹೆಪಟೈಟಿಸ್ ‘ಬಿ’ ಲಸಿಕೆಯು ಹೇರಳವಾಗಿ ಲಭ್ಯವಿದ್ದು ಅದನ್ನು ಮುಂಚಿತವಾಗಿ ಹಾಕಿಸಿಕೊಂಡಲ್ಲಿ ಈ ರೋಗವನ್ನು ಸಂಪೂರ್ಣವಾಗಿ ತಡೆಗಟ್ಟಬಹುದಾಗಿದೆ. ಹೆಪಟೈಟಿಸ್ ‘ಸಿ’ ದೃಢಪಟ್ಟಲ್ಲಿ ಅಂತಹ ರೋಗಿಗಳಿಗೆ ಚಿಕಿತ್ಸೆಯು ಲಭ್ಯವಿರುತ್ತದೆ ಎಂದು ಆಸ್ಪತ್ರೆಯ ವೈವಸ್ಥಾಪಕ ನಿರ್ದೆಶಕರಾದ ಶ್ರೀಯುತ ವರ್ಗೀಸ್ ಪಿ ಜಾನ್ ರವರು ತಿಳಿಸಿದ್ದಾರೆ.
ಮುಂಗಡವಾಗಿ ನೋಂದಣಿ ಮಾಡಿಸಲು ಕರೆಮಾಡಿ – ೯೫೧೩೦೯೭೪೦೦
ದಿನಾಂಕ – ಜುಲೈ ೨೮ರಿಂದ ಆಗಸ್ಟ್ ೨ರವರೆಗೆ
ಸಮಯ – ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೨ ರವರೆಗೆ ಶಿಬಿರ ನಡೆಯಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...