Saturday, December 6, 2025
Saturday, December 6, 2025

Karnataka Arya Vaishya Community Development Corporation ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಆರ್ಯವೈಶ್ಯ ನಿಗಮದಿಂದ ಅರ್ಜಿ ಆಹ್ವಾನ

Date:

Karnataka Arya Vaishya Community Development Corporation ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮವು 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಿ.ಇ.ಟಿ/ಎನ್.ಇ.ಇ.ಟಿ. ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿ. ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ವಾರ್ಷಿಕ ರೂ. 1.00 ಲಕ್ಷಗಳ ಸಾಲವನ್ನು ಶೇ. 2ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 4 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು. ಅರ್ಜಿದಾರರು 18 ದಿಂದ 35 ವರ್ಷ ವಯೋಮಿತಿಯೊಳಗಿದ್ದು, ಕುಟುಂಬದ ವಾರ್ಷಿಕ ವರಮಾನ ರೂ. 6.00 ಲಕ್ಷಗಳ ಮಿತಿಯೊಳಗಿರಬೇಕು.
ಆಸಕ್ತರು ವೆಬ್‌ಸೈಟ್ www.kacdc.karnataka.gov.in ರಲ್ಲಿ ದಿ: 31/10/2025 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ 08182-229634 ನ್ನು ಅಥವಾ ಹಾಗೂ ಕ್ಯೂಆರ್ ಕೋಡ್ ಬಳಸಿ ಅಥವಾ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ, ಭಾಗ್ಯನಿಲಯ, ಭಂಡಾರಿ ಗ್ಯಾಸ್ ಏಜೆನ್ಸಿ ಹತ್ತಿರ, 1ನೇ ಪ್ಯಾರಲಲ್ ರಸ್ತೆ, ಗಾಂಧಿನಗರ, ಶಿವಮೊಗ್ಗ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...