ಶಿವಮೊಗ್ಗ ತಾಲ್ಲೂಕು ಮತ್ತು ಶಿವಮೊಗ್ಗ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ವತಿಯಿಂದ ವೇದಿಕೆಯ 1 ವರ್ಷ ಅವಧಿ ಪೂರ್ಣಗೊಂಡಿರುವ ನಿಮಿತ್ತ ಹಾಗೂ ರಚನೆಯಾಗಿ 25 ವರ್ಷ ಪೂರ್ಣಗೊಂಡಿರುವ ಸವಿನೆನಪಿಗಾಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಸಿ ನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಸಿ ನೆಡಲಾಯಿತು.
ಈ ವೇಳೆ ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ, ಡಿ.ಎಸ್ ಅರುಣ್ ಅವರು, ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಶ್ರೀ ಗುರುದತ್ತ ಹೆಗಡೆ ಅವರು, ಶಿವಮೊಗ್ಗ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
