Sunday, August 2, 2026
Sunday, August 2, 2026

E-Pauti ಇ-ಪೌತಿ ಆಂದೋಲನದ ಮೂಲಕ ಉಚಿತವಾಗಿ ಪಹಣಿ ಪಡೆಯಿರಿ- ತಹಶೀಲ್ದಾರ್ ವಿ.ಎಸ್.ರಾಜೀವ್

Date:

E-Pautiಕೃಷಿ ಜಮೀನುಗಳ ಮಾಲೀಕರು ಮೃತರಾದಲ್ಲಿ ಸದರಿ ಜಮೀನನ್ನು ವಾರಸುದಾರರು ತಮ್ಮ ಹೆಸರಿಗೆ ಹಕ್ಕು ಬದಲಾವಣೆ ಮಾಡಿಕೊಳ್ಳಬೇಕಾಗಿರುತ್ತದೆ. ಪ್ರಸ್ತುತ ಸರಕಾರದಿಂದ ಇ-ಪೌತಿ ಆಂದೋಲನದ ಮೂಲಕ ಶಿವಮೊಗ್ಗ ತಾಲ್ಲೂಕಿನ ಜಮೀನುಗಳನ್ನು ಉಚಿತವಾಗಿ ವಾರಸತ್ವದ ವಂಶಾವಳಿ ಪ್ರಕಾರ ಪಹಣಿ ಪತ್ರಿಕೆ ಮಾಡಿಕೊಡಲಾಗುತ್ತಿದೆ.
ಈ ರೀತಿಯ ಜಮೀನುಗಳನ್ನು ವಾರಸುದಾರರು ಕೂಡಲೇ ಮೃತರ ಮರಣ ಪ್ರಮಾಣ ಪತ್ರ, ವಂಶವೃಕ್ಷ, ವಾರಸುದಾರರ ಆಧಾರ್ ಕಾರ್ಡ್ ಇತ್ಯಾದಿ ಪೂರಕ ಎಲ್ಲಾ ದಾಖಲೆಗಳನ್ನು ತಮ್ಮ ಗ್ರಾಮಕ್ಕೆ ಸಂಬಂಧಿಸಿದ ಗ್ರಾಮ ಆಡಳಿತಾಧಿಕಾರಿಗಳ ಹತ್ತಿರ ಸಲ್ಲಿಸಿ ಭೂ ಮಾಲೀಕರು ಮೃತರಾಗಿರುವ ಜಮೀನುಗಳ ವಾರಸುದಾರರಿಗೆ ಖಾತೆಯನ್ನು ಉಚಿತವಾಗಿ ಇ-ಪೌತಿ ಆಂದೋಲನದ ಮೂಲಕ ಪಹಣಿ ಮಾಡಿಸಿಕೊಳ್ಳಬಹುದಾಗಿರುತ್ತದೆ.
E-Pauti ಸಾರ್ವಜನಿಕರು ಈ ಬಗ್ಗೆ ಮದ್ಯವರ್ತಿಗಳಿಗೆ ಅವಕಾಶ ಕೊಡದೇ ನೇರವಾಗಿ ಆಯಾ ಗ್ರಾಮದ ಗ್ರಾಮ ಆಡಳಿತಾಧಿಕಾರಿಗಳನ್ನು ಹಾಗೂ ರಾಜಸ್ವ ನಿರೀಕ್ಷಕರನ್ನು ಭೇಟಿ ಮಾಡಿ ಉಚಿತವಾಗಿ ನಿಮ್ಮ ಜಮೀನಿನ ಖಾತೆಯನ್ನು ಬದಲಾಯಿಸಿಕೊಳ್ಳಲು ತಿಳಿಸಿದೆ. ಇ-ಪೌತಿ ಆಂದೋಲನ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು ಶಿವಮೊಗ್ಗ ತಾಲ್ಲೂಕಿನ ಎಲ್ಲಾ ಗ್ರಾಮಗಳ ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಲು ಹಾಗೂ ಇ-ಪೌತಿ ಆಂದೋಲನವನ್ನು ಯಶಸ್ವಿಗೊಳಿಸುವಂತೆ ಶಿವಮೊಗ್ಗ ತಾಲ್ಲೂಕು ತಹಶೀಲ್ದಾರ್ ರಾಜೀವ್ ವಿ ಎಸ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...