Monday, May 4, 2026
Monday, May 4, 2026

International Innerwheel ಇನ್ನರ್ ವ್ಹೀಲ್ ಸಂಸ್ಥೆ ಮಾನವೀಯ ಸೇವೆಗಳನ್ನು ಮಾಡುವುದರ ಮುಖಾಂತರ ಪ್ರಪಂಚದಲ್ಲಿ ತನ್ನದೇ ಆದ ಹೆಜ್ಜೆ ಗುರುತುಗಳನ್ನು ಮೂಡಿಸಿದೆ – ಶಬರಿ ಕಡಿದಾಳ್

Date:

International Innerwheel ಅಂತರಾಷ್ಟ್ರೀಯ ಇನ್ನರ್‌ವ್ಹೀಲ್ ಜಿಲ್ಲಾ ಚೇರ್ಮನ್ ಆಗಿ ಅಧಿಕಾರ ವಹಿಸಿಕೊಂಡ ಶಬರಿ ಕಡಿದಾಳ್ ಅವರನ್ನು ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಸನ್ಮಾನಿಸಲಾಯಿತು.

ಸಹ್ಯಾದ್ರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಶಬರಿ ಕಡಿದಾಳ್, ನನ್ನ ತಾಯಿ ಶೋಭಾ ಕಡಿದಾಳ್ ಅವರು ಶಿವಮೊಗ್ಗದಲ್ಲಿ ಪ್ರಾರಂಭ ಹಂತದಲ್ಲಿ ಇನ್ನರ್‌ವ್ಹೀಲ್ ಅಧ್ಯಕ್ಷರಾಗಿ ಹಲವಾರು ಹೊಸ ಕ್ಲಬ್‌ಗಳ ಸ್ಥಾಪನೆಗೆ ಶ್ರಮಿಸಿದ್ದರು. ಅವರ ಇಚ್ಛೆಯಂತೆ ನಾನು ಇಂದು ದೊಡ್ಡ ಜವಾಬ್ದಾರಿ ಸ್ವೀಕರಿಸಿದ್ದೇನೆ ಎಂದು ಹೇಳಿದರು.

ಇನ್ನರ್ ವ್ಹೀಲ್ ಸಂಸ್ಥೆ ಮಾನವೀಯ ಸೇವೆಗಳನ್ನು ಮಾಡುವುದರ ಮುಖಾಂತರ ಪ್ರಪಂಚದಲ್ಲಿ ತನ್ನದೇ ಆದ ಹೆಜ್ಜೆ ಗುರುತುಗಳನ್ನು ಮೂಡಿಸಿದೆ. ಇನ್ನರ್‌ವ್ಹೀಲ್ ಜಿಲ್ಲೆಯಲ್ಲಿ 56 ಕ್ಲಬ್ ಇದ್ದು, ಎಂಟು ರೆವೆನ್ಯೂ ಜಿಲ್ಲೆಗಳನ್ನು ಒಳಗೊಂಡಿದೆ. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಇನ್ನರ್‌ವ್ಹೀಲ್ ಸಂಸ್ಥೆಯನ್ನು ಸೇರುವುದರ ಮುಖಾಂತರ ಸಮಾಜಮುಖಿ ಕಾರ್ಯಗಳಲ್ಲಿ ಕೈಜೋಡಿಸೋಣ ಎಂದು ತಿಳಿಸಿದರು.

ರೋಟರಿ ಶಿವಮೊಗ್ಗ ಪೂರ್ವದ ಅಧ್ಯಕ್ಷ ನೆಪ್ಚೂನ್ ಕಿಶೋರ್ ಮಾತನಾಡಿ, ಶಬರಿ ಕಡಿದಾಳ್ ಅವರ ಚೇರ್ಮನ್ ಅವಧಿಯಲ್ಲಿ ಒಳ್ಳೆ ಒಳ್ಳೆಯ ಮಾನವೀಯ ಸೇವೆಗಳು ಹಾಗೂ ರೋಟರಿ ಜಿಲ್ಲೆ ಅತಿ ಹೆಚ್ಚು ಕಾರ್ಯಕ್ರಮಗಳನ್ನು ಮಾಡಬೇಕು ಎಂದರು.

International Innerwheel ಇನ್ನರ್‌ವ್ಹೀಲ್ ಶಿವಮೊಗ್ಗ ಪೂರ್ವ ಅಧ್ಯಕ್ಷೆ ವೀಣಾ ಸುರೇಶ್, ಕಾರ್ಯದರ್ಶಿ ಶಿಲ್ಪಾ ಗೋಪಿನಾಥ್, ಮಾಜಿ ಅಧ್ಯಕ್ಷೆ ಬಿಂದು ವಿಜಯ ಕುಮಾರ್, ಡಾ. ಕಡಿದಾಳ್ ಗೋಪಾಲ್, ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಡಾ. ಧನಂಜಯ ರಾಂಪುರ, ಆಡಳಿತಾಧಿಕಾರಿ ಟಿ.ಪಿ.ನಾಗರಾಜ್, ಮಲೆನಾಡು ಕ್ಲಬ್ ಮಾಜಿ ಅಧ್ಯಕ್ಷ ಮುಸ್ತಕ್ ಆಲಿ, ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಗುರುಮೂರ್ತಿ ಗೌಡ, ಮುಖ್ಯಶಿಕ್ಷಕಿ ಸಲ್ಮಾ ಬೇಗಂ, ಕೋಳಿಗೆ ವಾಸಪ್ಪಗೌಡ, ಟಿ.ಡಿ.ಶ್ರೀಕಂಠ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...