K.S.Eshwarappa ಶಿವಮೊಗ್ಗದಲ್ಲಿ ಧರ್ಮಸ್ಥಳ ಧರ್ಮಧರ್ಶಿ ವಿರೇಂದ್ರ ಹೆಗ್ಗಡೆ ಹಾಗೂ ಧರ್ಮಸ್ಥಳ ಕ್ಷೇತ್ರದ ಪರವಾಗಿ ಶ್ರೀ ಧರ್ಮಸ್ಥಳ ಭಕ್ತಾಭಿಮಾನಿ ಮೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಧರ್ಮಸ್ಥಳಕ್ಕೆ ಕೆಟ್ಟ ಹೆಸರು ತರಲು ಹುನ್ನಾರ ನಡೆದಿದೆ ಎಂದು ಆರೋಪಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಮಾಜಿ ಡಿಸಿಎಂ ಹಾಗೂ ರಾಷ್ಟ್ರಭಕ್ತರ ಬಳಗದ ಪ್ರಮುಖ ಕೆ ಎಸ್ ಈಶ್ವರಪ್ಪ ಭಾಗಿಯಾಗಿದ್ದರು.
ಧರ್ಮಸ್ಥಳ ವಿರೋಧಿಗಳನ್ನು ಬಂಧಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.
K.S.Eshwarappa ಹುಂಚದ ಶ್ರೀ ಹೊಂಬುಜ ಜೈನ ಮಠ ಹಾಗೂ ಜೈನ್ ಮಿಲನ್ ಶಿವಮೊಗ್ಗ , ದಿಗಬಂರ ಜೈನ ಸಂಘದವರು ಪ್ರತಿಭಟನೆಗೆ ಸಾಥ್ ನೀಡಿದರು.
