Sri Rameshwar Temple ತೀರ್ಥಹಳ್ಳಿ ಶ್ರೀರಾಮೇಶ್ವರ ದೇಗುಲದಲ್ಲಿ ಹುಂಡಿಹಣ ಕಳವು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಕಳ್ಳತನ ಆಗಿರುವ ಘಟನೆ ಬೆಳಕಿಗೆ ಬಂದಿದೆ.
ಅನ್ನದಾಸುಹ ಕೊಠಡಿಯಲ್ಲಿ ಹಾಗೂ ಸಣ್ಣದೊಂದು ಕಾಣಿಕೆ ಹುಂಡಿ ಸಹ ತೆಗೆದು ಅದರಲ್ಲಿದ್ದ ಹಣವನ್ನು ಕಳ್ಳನೊಬ್ಬ ದೋಚಿದ್ದಾರೆ.
ರಾಮೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ದೇವಸ್ಥಾನದ ಬಾಗಿಲು ಮುರಿದು ಕಳ್ಳತನ ಮಾಡಲು ಯತ್ನಿಸಲಾಗಿದೆ.
ಮೂವತ್ತು ಸಾವಿರಕ್ಕೂ ಅಧಿಕ ಹಣ ಕಳ್ಳತನವಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಮುಖಕ್ಕೆ ಟವೆಲ್ನಿಂದ ಸುತ್ತಿಕೊಂಡು ಕಳ್ಳನೊಬ್ಬ ಓಡಾಡಿರುವ ಚಲನವಲನಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸರಿಯಾಗಿವೆ. ತೀರ್ಥಹಳ್ಳಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.
