Sunday, August 2, 2026
Sunday, August 2, 2026

CM Siddaramaiah ಮುಖ್ಯಮಂತ್ರಿಗಳ ಕಾರಿಗೆ ಸಂಚಾರಿ ನಿಯಮ ಉಲ್ಲಂಘನೆಗೆ ಏಳು ಬಾರಿ ದಂಡ. ಶೇ50 ರಿಯಾಯಿತಿಯಡಿ ದಂಡ ಪಾವತಿ

Date:

CM Siddaramaiah ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಶೇ.50ರಷ್ಟು ದಂಡ ಪಾವತಿಯ ಆಫರ್ ನೀಡಿದ ಹಿನ್ನೆಲೆಯಲ್ಲಿ ಸವಾರರು ದಂಡ ಕಟ್ಟುತ್ತಿದ್ದಾರೆ.
ಇದುವರೆಗೂ 40 ಕೋಟಿ ರೂ.ಗಿಂತಲೂ ಹೆಚ್ಚು ದಂಡ ಪಾವತಿಯಾಗಿದೆ ಎಂದು ತಿಳಿದು ಬಂದಿದೆ.

ಈ ಬೆನ್ನಲ್ಲೇ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರ ಕಾರು ಕೂಡ ಬರೊಬ್ಬರಿ 7 ಬಾರಿ ಸಂಚಾರ ನಿಯಮ ಉಲ್ಲಂಘಿಸಿದ ಕಾರಣ ದಂಡ ಹೇರಲಾಗಿದೆ.

ಸಿಎಂ ಸಿದ್ದರಾಮಯ್ಯ ಬಳಸುವ ಇನೋವಾ ಕ್ರಿಸ್ಟಾ ಕಾರು 2024ರಿಂದ ಈವರೆಗೂ ಏಳು ಬಾರಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿದೆ.

ಈ ಪೈಕಿ ಆರು ಪ್ರಕರಣಗಳು ಸಿಎಂ ಸೀಟು ಬೆಲ್ಟ್ ಧರಿಸದೇ ನಿಯಮ ಉಲ್ಲಂಘಿಸಿದ್ದಾಗಿದೆ. ಶೇ.50ರಷ್ಟು ರಿಯಾಯಿತಿಯ ಅನುಸಾರ ಅವರು 2,500 ರೂಪಾಯಿ ದಂಡ ಪಾವತಿಸಬೇಕಿತ್ತು. ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತು ವ್ಯಾಪಕ ಚರ್ಚೆ ನಡೆದ ಬಳಿಕ ಶದಂಡ ಪಾವತಿಯಾಗಿದೆ ಎಂದು ಸಂಚಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ .

CM Siddaramaiah ಆರು ಬಾರಿ ಸೀಟು ಬೆಲ್ಟ್ ಧರಿಸದಿದ್ದಕ್ಕಾಗಿ ಮತ್ತು ಒಂದು ಬಾರಿ ಅತಿವೇಗದಲ್ಲಿ ಚಲಿಸಿದ್ದಕ್ಕಾಗಿ ದಂಡ ವಿಧಿಸಲಾಗಿದ್ದು, ಸದ್ಯ ದಂಡದ ಮೊತ್ತವನ್ನು ಪಾವತಿಸಲಾಗಿದೆ ಎಂದು ಸಂಚಾರ ಪೊಲೀಸ್ ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...