Monday, February 2, 2026
Monday, February 2, 2026

Shivamogga Municipal Corporation ಜಿಲ್ಲೆಯ ಜನತೆಯ ಸಡಗರದ ದಸರಾ ಉತ್ಸವಕ್ಕೆ ಎಲ್ಲರೂ ಆಗಮಿಸಿ,ಪಾಲ್ಗೊಳ್ಳಿ- ಎಸ್.ಎನ್.ಚನ್ನಬಸಪ್ಪ

Date:

Shivamogga Municipal Corporation ಶಿವಮೊಗ್ಗ ಮಹಾನಗರ ಪಾಲಿಕೆಯ ವತಿಯಿಂದ ಸೆಪ್ಟೆಂಬರ್ 22ರಿಂದ ಅಕ್ಟೋಬರ್ 02ರವರೆಗೆ ಅದ್ದೂರಿಯಾಗಿ ನಡೆಯಲಿರುವ ನಮ್ಮೂರ ನಾಡಹಬ್ಬ ”ಶಿವಮೊಗ್ಗ ದಸರಾ – 2025”ಕ್ಕೆ ಸಂಬಂಧಿಸಿದಂತೆ ಇಂದು ಮಹಾನಗರ ಪಾಲಿಕೆಯಲ್ಲಿ ಆಯೋಜಿಸಲಾದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಲಾಯಿತು.

ಈ ಬಾರಿ ಒಟ್ಟು 11 ದಿನಗಳ ಕಾಲ ನಡೆಯಲಿರುವ ಈ ದಸರಾ ಮಹೋತ್ಸವವು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಅಂಶಗಳನ್ನು ಒಳಗೊಂಡ ಹಬ್ಬವಾಗಿದ್ದು, ನಾಗರೀಕರ ಉತ್ಸಾಹಪೂರ್ಣ ಭಾಗವಹಿಸುವಿಕೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಮಹಾನಗರ ಪಾಲಿಕೆಯು ಉತ್ಸವದ ಯಶಸ್ಸಿಗಾಗಿ ಅಗತ್ಯ ಕ್ರಮಗಳನ್ನೂ ಕೈಗೆತ್ತಿಕೊಂಡಿದೆ.

ವಿಶೇಷತೆಗಳು:

  • ಸೆಪ್ಟೆಂಬರ್ 22, 2025: ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯ ಪ್ರತಿಷ್ಠಾಪನೆಯ ಮೂಲಕ ದಸರಾ ಮಹೋತ್ಸವಕ್ಕೆ ವೈಭವಯುತವಾಗಿ ಚಾಲನೆ ನೀಡಲಾಗುವುದು.
  • ⁠ಈ ವರ್ಷದ ಶಿವಮೊಗ್ಗ ದಸರಾ ಕಾರ್ಯಕ್ರಮಗಳಿಗೆ ಪ್ರಸಿದ್ಧ ಚಲನಚಿತ್ರ ನಟ-ನಟಿಯರು ಹಾಗೂ ಧಾರ್ಮಿಕ,ಸಾಮಾಜಿಕ,ರಾಜಕೀಯ ಮತ್ತು ವಿವಿಧಕ್ಷೇತ್ರಗಳಲ್ಲಿನ ಸಾಧಕರು ಹಾಗೂ ಗಣ್ಯರು ಭಾಗವಹಿಸುವರು.
  • ಪ್ರತಿದಿನ ನಗರದ ವಿವಿಧ ವೇದಿಕೆಗಳಲ್ಲಿ ನಗರ, ಜಿಲ್ಲೆಯ ಹಾಗೂ ರಾಜ್ಯದ ಖ್ಯಾತ ಕಲಾವಿದರಿಂದ ಕಲೆ,ಸಾಹಿತ್ಯ,ಸಂಗೀತ, ನೃತ್ಯ, ನಾಟಕ ಮತ್ತು ಜನಪದ ಕಲೆಗಳ ಮನಮೋಹಕ ಪ್ರದರ್ಶನ.
  • ಅಕ್ಟೋಬರ್ 2, 2025: ಬೆಳ್ಳಿ ಮಂಟಪದಲ್ಲಿ “ಶ್ರೀ ಚಾಮುಂಡೇಶ್ವರಿ ದೇವಿಯ ಬೆಳ್ಳಿಯ ವಿಗ್ರಹದ ಅಂಬಾರಿ ಮೆರವಣಿಗೆಯೊಂದಿಗೆ” ಅಲ್ಲಮ ಪ್ರಭು ಮೈದಾನದಲ್ಲಿ ಬನ್ನಿ ಮುಡಿಯುವ ಕಾರ್ಯಕ್ರಮ ನೆರವೇರಲಿದೆ.

Shivamogga Municipal Corporation ಈ ಬಾರಿಯ “ಶಿವಮೊಗ್ಗ ದಸರಾ-2025” ರಲ್ಲಿ 15 ವಿವಿಧ ರೀತಿಯ ದಸರಾಗಳನ್ನು ಆಚರಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ! •ಕಲಾ ದಸರಾ •ಚಲನಚಿತ್ರ ದಸರಾ
•ಪರಿಸರ ದಸರಾ •ಜ್ಞಾನ ದಸರಾ •ಪೌರಕಾರ್ಮಿಕರ ದಸರಾ •ಪತ್ರಿಕಾ ದಸರಾ •ಮಹಿಳಾ ದಸರಾ •ಆಹಾರ ದಸರಾ •ರೈತ ದಸರಾ •ಮಕ್ಕಳ ದಸರಾ •ಗಮಕ ದಸರಾ •ರಂಗ ದಸರಾ •ಯೋಗ ದಸರಾ •ಯುವ ದಸರಾ •ಸಾಂಸ್ಕೃತಿಕ ದಸರಾ, ಹೀಗೆ ವಿಜೃಂಭಣೆಯಾಗಿ ನಗರದ ವಿವಿಧ ಭಾಗಗಳಲ್ಲಿ ದಸರಾ ಕಾರ್ಯಕ್ರಮಗಳನ್ನು ನಡೆಸಲುದ್ದೇಶಿಸಿದ್ದು, ಇದು ಕೇವಲ ನಗರದ ನಾಗರೀಕರಿಗೆ ಮಾತ್ರವಲ್ಲದೆ, ಸಂಪೂರ್ಣ ಜಿಲ್ಲೆಯ ಜನತೆಗೆ ಸಡಗರದ ಸಂಭ್ರಮವನ್ನು ನೀಡುವಂತಹ ನಾಡಹಬ್ಬವಾಗಲಿದೆ. ಎಲ್ಲರೂ ಆಗಮಿಸಿ ಹಬ್ಬದ ಸಡಗರದಲ್ಲಿ ಪಾಲ್ಗೊಳ್ಳಬೇಕೆಂದು ಪತ್ರಿಕಾಗೋಷ್ಠಿಯ ಮೂಲಕ ತಿಳಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...