Friday, December 5, 2025
Friday, December 5, 2025

CM Siddharamaiah ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ಅಧಿಕಾರಿಗಳಿಗೆ ಸೀಎಂ ಸಿದ್ಧರಾಮಯ್ಯ ಅವರಿಂದ ಖಡಕ್ ಸೂಚನೆ

Date:

CM Siddharamaiah ಬೆಂಗಳೂರು ನಗರ ರಸ್ತೆಗಳ ಸುಧಾರಣೆ ಹಾಗೂ ಸಂಚಾರ ವ್ಯವಸ್ಥೆ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದ ಮುಖ್ಯಮಂತ್ತಿ ಸಿದ್ಧರಾಮಯ್ಯನವರು
ಖಡಕ್ ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಿದ್ದಾರೆ
ಸಭೆಯ ಮುಖ್ಯಾಂಶಗಳು ಹೀಗಿವೆ:

  • ರಸ್ತೆ ಗುಂಡಿಗಳಿಂದ ವಾಹನ ಸವಾರರು ನಿತ್ಯ ಸಮಸ್ಯೆ ಎದುರಿಸುತ್ತಿದ್ದಾರೆ, ಈ ಬಗ್ಗೆ ಆಕ್ರೋಶ ಕೇಳಿಬರುತ್ತಿದ್ದರೂ ಈ ವರೆಗೆ ಗುಂಡಿ ಮುಚ್ಚದೆ ಇರುವುದು ಅಕ್ಷಮ್ಯ.
  • ಪ್ರತಿ ವಾರ್ಡ್ ನ ಎಂಜಿನಿಯರ್ ಗಳು, ಮುಖ್ಯ ಎಂಜಿನಿಯರ್ ಗಳು ಈಗಾಗಲೇ ಕ್ರಮ ವಹಿಸಬೇಕಿತ್ತು. ಇನ್ನು ಒಂದು ತಿಂಗಳ ಕಾಲಾವಕಾಶ ನೀಡುತ್ತೇವೆ. ರಸ್ತೆ ಗುಂಡಿಗಳನ್ನು ಮುಚ್ಚಲು ಕಟ್ಟುನಿಟ್ಟಿನ ಕ್ರಮ ವಹಿಸಲೇಬೇಕು ಮತ್ತು ರಸ್ತೆಗಳನ್ನು ಸಂಚಾರ ಯೋಗ್ಯ ಮಾಡಲೇಬೇಕು.
  • ರಸ್ತೆ ನಿರ್ವಹಣೆಗೆ ಸೂಕ್ತ ಕ್ರಮ ವಹಿಸದ ಅಧಿಕಾರಿಗಳ ಮೇಲೆ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು.
  • ಗುತ್ತಿಗೆದಾರರೊಂದಿಗೆ ಶಾಮೀಲಾಗದೆ ಒದಗಿಸಿರುವ ಅನುದಾನಕ್ಕೆ ಉತ್ತಮ ಗುಣಮಟ್ಟದ ಕಾಮಗಾರಿಗಳನ್ನು,
    ವೈಜ್ಞಾನಿಕವಾದ ಕಾಮಗಾರಿಗಳನ್ನು ಪೂರೈಸಲು ಕ್ರಮ ವಹಿಸಬೇಕು.
  • ಮಳೆಗಾಲಕ್ಕೆ ಮುನ್ನವೇ ರಸ್ತೆ ಕಾಮಗಾರಿಗಳನ್ನು ಯಾಕೆ ಮಾಡುತ್ತಿಲ್ಲ, ಮಳೆಗಾಲದಲ್ಲಿಯೇ ಏಕೆ ಪ್ರಾರಂಭಿಸುವಿರಿ? ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ನೂತನವಾಗಿ ನೇಮಕಗೊಂಡಿರುವ ಆಯುಕ್ತರು ಫೀಲ್ಡ್ ವರ್ಕ್ ಮಾಡಿ, ನಿಗಾ ಇರಿಸಬೇಕು.
  • ಬಿಡಿಎ, ಬಿಎಂಆರ್‌ಸಿಎಲ್, ಜಲಮಂಡಳಿ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು.
  • ರಸ್ತೆ ಗುಂಡಿಗಳನ್ನು ಮುಚ್ಚಲು ಹಾಗೂ ಎಲ್ಲಾ ರಸ್ತೆಗಳನ್ನು ಸಂಚಾರ ಯೋಗ್ಯ ಮಾಡಲು ಒಂದು ತಿಂಗಳ ಗಡುವು ನೀಡಲಾಗುವುದು, ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು.
  • ಮುಖ್ಯ ಆಯುಕ್ತರು ಪ್ರತಿ ವಾರ ಐದೂ ವಲಯಗಳ ಆಯುಕ್ತರೊಂದಿಗೆ ಸಭೆ ನಡೆಸಿ, ನಿರಂತರ ಸಂಪರ್ಕದಲ್ಲಿರಬೇಕು.
  • ಹಣದ ಕೊರತೆಯಿದ್ದರೆ ಆರ್ಥಿಕ ಇಲಾಖೆಯಿಂದ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳುತ್ತೇವೆ.
  • ಒಂದು ತಿಂಗಳ ನಂತರ ಮತ್ತೆ ಮೌಲ್ಯ ಮಾಪನ ನಡೆಸಲಾಗುವುದು
  • ಗ್ರೇಟರ್ ಬೆಂಗಳೂರು ಪ್ರಾಧಿಕಾರದ ರಸ್ತೆ ಜಾಲದಲ್ಲಿ
    1648.43 ಕಿ. ಮೀ ಉದ್ದದ ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆಗಳಿವೆ. 46.61ಕಿ.ಮೀ ಹೈಡೆನ್ಸಿಟಿ ಕಾರಿಡಾರ್ ರಸ್ತೆಗಳಿವೆ.
  • ಬೆಂಗಳೂರು ಕೇಂದ್ರ, ಬೆಂಗಳೂರು ಪೂರ್ವ, ಪಶ್ಚಿಮ ಉತ್ತರ ಮತ್ತು ದಕ್ಷಿಣ ನಗರ ಪಾಲಿಕೆ ಗಳಲ್ಲಿ ಒಟ್ಟು 14,795 ರಸ್ತೆ ಗುಂಡಿಗಳನ್ನು ಗುರುತಿಸಿಲಾಗಿದೆ. ಈಗಾಗಲೇ 6,749 ಗುಂಡಿಗಳನ್ನು ಮುಚ್ಚಲಾಗಿದ್ದು, 8,046 ಗುಂಡಿಗಳು ಮುಚ್ಚಲು ಬಾಕಿ ಇವೆ.
  • ಈಗಾಗಲೇ 108.20 ಕಿ.ಮೀ ಉದ್ದದ ರಸ್ತೆಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಪೂರ್ಣಗೊಂಡಿದೆ.‌143.68 ಕಿ.ಮೀ ಉದ್ದದ ರಸ್ತೆ ಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಪ್ರಗತಿಯಲ್ಲಿದೆ. ಒಟ್ಟಾರೆ 584.60 ಕಿ ಮೀ ಉದ್ದದ ರಸ್ತೆಗಳಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ.
  • ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆ ಗಳಲ್ಲಿ ಗುಂಡಿಗಳನ್ನು ಮುಚ್ಚಲು 2025-26 ರ ಆಯವ್ಯಯದಲ್ಲಿ 18 ಕೋಟಿ ರೂಪಾಯಿಗಳ ಅನುದಾನ ಒದಗಿಸಲಾಗಿದೆ.
  • ಎಲ್ಲಾ ನಗರ ಪಾಲಿಕೆಗಳಿಗೂ ತುರ್ತು ಕಾಮಗಾರಿಗಳನ್ನು ಕೈಗೊಳ್ಳಲು ರೂ. 25 ಕೋಟಿಗಳ ಹಣವನ್ನು ಬಿಡುಗಡೆ ಮಾಡಲಾಗಿದ್ದು, ಪಾಲಿಕೆಗಳಿಂದ ರಸ್ತೆ ಗುಂಡಿಗಳನ್ನು ಮುಚ್ಚಲು ಕ್ರಮ ವಹಿಸಲಾಗಿದೆ.
  • CM Siddharamaiah ನೂತನ ತಂತ್ರಜ್ಞಾನ JETPATCHER ಬಳಸಿಕೊಳ್ಳಲು ರೂ. 2.50 ಕೋಟಿಗಳ ಮೊತ್ತದ ಟೆಂಡರ್ ಚಾಲ್ತಿಯಲ್ಲಿದ್ದು ಸದರಿ ತಂತ್ರಜ್ಞಾನದಿಂದ ತೇವಾಂಶವಿರುವ ಸಮಯದಲ್ಲಿಯೂ ಗುಂಡಿಗಳನ್ನು ಮುಚ್ಚಬಹುದಾಗಿದೆ.
  • ಐದೂ ಪಾಲಿಕೆಗಳೊಂದಿಗೆ ಸಮನ್ವಯ ಸಾಧಿಸಲು ಒಬ್ಬ ತಾಂತ್ರಿಕ ಸಮನ್ವಯಾಧಿಕಾರಿ ನೇಮಿಸಲು ಕ್ರಮ ಕೈಗೊಳ್ಳಬೇಕು.
  • ಇಬ್ಬಲೂರು ಜಂಕ್ಷನ್, ಅಗರ, ವೀರಣ್ಣನ ಪಾಳ್ಯ, ನಾಗವಾರ ಮತ್ತು ಹೆಬ್ಬಾಳ ಜಂಕ್ಷನ್ ಗಳಲ್ಲಿ ಜಲಮಂಡಳಿ ಮತ್ತು ಮೆಟ್ರೋ ಕಾಮಗಾರಿಯಿಂದ ಜಂಕ್ಷನ್ ಹಾಳಾಗಿದ್ದು ರೂ.400 ಕೋಟಿಗಳ ಹೊರವರ್ತುಲ ರಸ್ತೆ ಅಭಿವೃದ್ಧಿ ಯೋಜನೆಯಡಿ ಸಮಗ್ರವಾಗಿ ಅಭಿವೃದ್ದಿ ಪಡಿಸಲು ಉದ್ದೇಶಿಸಲಾಗಿದೆ.
  • ಅಕ್ಟೋಬರ್ ಅಂತ್ಯ ವೇಳೆಗೆ ಎಲ್ಲಾ ಗುಂಡಿಗಳನ್ನು ಮುಚ್ಚಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಎಂದು ಸಭೆಯಲ್ಲಿ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...