Monday, May 4, 2026
Monday, May 4, 2026

S.N.Chennabasappa ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಅಂಬಾರಿ ಹೊರಲು ಗಜಪಡೆಗಳಿಗೆ ಆಹ್ವಾನವಿತ್ತ ಶಾಸಕ‌ ಚನ್ನಬಸಪ್ಪ

Date:

S.N.Chennabasappa ಶಿವಮೊಗ್ಗ ದಸರಾ ಮಹೋತ್ಸವದ ವೈಭವವನ್ನು ಹೆಚ್ಚಿಸಲಿರುವ ಗಜಪಡೆಗಳಿಗೆ ಇಂದು ಸಕ್ರೆಬೈಲ್‌ನಲ್ಲಿ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಆಹ್ವಾನ ನೀಡಿದರು. ದಸರಾ ಸಂಭ್ರಮದ ಪ್ರಮುಖ ಆಕರ್ಷಣೆಯಾಗಿರುವ ಶ್ರೀ ತಾಯಿ ಚಾಮುಂಡೇಶ್ವರಿ ದೇವಿಯ ಅದ್ದೂರಿ ಅಂಬಾರಿ ಉತ್ಸವಕ್ಕೆ ಗಜಪಡೆಗಳ ಆಗಮನವು ನಗರವಾಸಿಗಳಲ್ಲಿ ಹಬ್ಬದ ಹರ್ಷೋಲ್ಲಾಸವನ್ನು ಹೆಚ್ಚಿಸಲಿದೆ.

ಅಂಬಾರಿ ಉತ್ಸವದಲ್ಲಿ ಪಾಲ್ಗೊಳ್ಳಲಿರುವ ಸಾಗರ್, ಬಾಲಣ್ಣ ಮತ್ತು ಬಹದ್ದೂರ್ ಆನೆಗಳನ್ನು ಶಿವಮೊಗ್ಗಕ್ಕೆ ತರಲು ಈಗಾಗಲೇ ಅಗತ್ಯವಾದ ಎಲ್ಲಾ ಅನುಮತಿಗಳನ್ನು ಸಂಬಂಧಿತ ಇಲಾಖೆಯಿಂದ ಪಡೆಯಲಾಗಿದೆ, ಸಂಬಂಧಿತ ಸಿಬ್ಬಂದಿ ಹಾಗೂ ತಂಡದ ಸಿದ್ಧತೆಯನ್ನು ಸಂಪೂರ್ಣವಾಗಿ ಖಚಿತಪಡಿಸಲಾಗಿದೆ. ಶೀಘ್ರದಲ್ಲೇ ನಗರದಲ್ಲಿ ತಾಲೀಮು ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದ್ದು, ಭಾಗವಹಿಸುವವರಿಗೆ ಸಮಗ್ರ ಮಾರ್ಗದರ್ಶನ ಮತ್ತು ಕಾರ್ಯಪಟು ತರಬೇತಿಯನ್ನು ಒದಗಿಸಲು ಎಲ್ಲಾ ವ್ಯವಸ್ಥೆಗಳನ್ನು ಪೂರ್ಣಗೊಂಡಿವೆ. ಈ ಮೂಲಕ ಕಾರ್ಯಕ್ರಮವು ಸುರಕ್ಷಿತ, ಸಮರ್ಥ ಮತ್ತು ಪರಿಣಾಮಕಾರಿಯಾಗಿ ನಡೆಸುವ ನಿಟ್ಟಿನಲ್ಲಿ ಸಂಪೂರ್ಣ ತಯಾರಿ ಮಾಡಲಾಗಿದೆ.

S.N.Chennabasappa ಭೇಟಿಯ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಆಯುಕ್ತರಾದ ಮಾಯಣ್ಣ ಗೌಡ, ಮಹಾನಗರ ಪಾಲಿಕೆಯ ಮಾಜಿ ಸದಸ್ಯರುಗಳು, ಪಾಲಿಕೆಯ ಅಧಿಕಾರಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...