B.Y.Raghavendra ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ಪ್ರೇರಣಾ ಸಭಾಂಗಣದಲ್ಲಿ ಮಲೆನಾಡು ಅಡಿಕೆ ಮಾರಾಟ ಸಹಕಾರ ಸಂಘ ನಿಯಮಿತ(MAMCOS) ಹಮ್ಮಿಕೊಂಡಿದ್ದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಸಮಾರಂಭದಲ್ಲಿ ಪಾಲ್ಗೊಂಡು ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದರು.
ನಮ್ಮ ಮಲೆನಾಡು ಭಾಗ ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಬೆಳೆ ಬೆಳೆದು ಅತಿ ಹೆಚ್ಚಿನ ಅಡಿಕೆ ಬೆಳೆಯುವ ಪ್ರದೇಶ ಎಂದು ದೇಶದಲ್ಲಿ ಗುರುತಿಸಿಕೊಂಡಿದೆ. ಈ ಮೂಲಕ ರಾಜ್ಯದ ಮತ್ತು ದೇಶದ ಆರ್ಥಿಕತೆಗೆ ತನ್ನದೇ ಅತ್ಯಮೂಲ್ಯ ಕೊಡುಗೆ ನೀಡುತ್ತಿದೆ.
ಇದಕ್ಕೆ ಪೂರಕವಾಗಿ ಸಹಕಾರ ಕ್ಷೇತ್ರವು ಅಡಿಕೆ ಬೆಳೆಯುವ ಸಣ್ಣ ವರ್ಗದ ರೈತರಿಗೆ ಸಂದರ್ಭಕ್ಕೆ ಅನುಗುಣವಾಗಿ ಅಗತ್ಯ ಆರ್ಥಿಕ ನೆರವು ನೀಡುತ್ತಾ ಸ್ವಾವಲಂಬಿ ಜೀವನ ನಡೆಸಲು ಬೆಂಬಲವಾಗಿ ನಿಂತಿದೆ. ಕೊಳೆ ರೋಗ ಸೇರಿದಂತೆ ಇನ್ನಿತರ ಕಷ್ಟಕರ ಸಂದರ್ಭದಲ್ಲಿ ಕೂಡ ರೈತರಿಗೆ ಬೆಂಬಲವಾಗಿ ನಿಂತಿರುವುದು ಮಾದರಿಯಾಗಿದೆ.
ಕೇಂದ್ರ ಸರ್ಕಾರ ಕೂಡ ಅಡಿಕೆ ಬೆಳೆಯುವ ರೈತರಿಗೆ ಉತ್ತೇಜಿಸುವಂತ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸಿ ಈಗಾಗಲೇ ಅಗತ್ಯ ಬೆಂಬಲ ನೀಡುತ್ತಿದೆ. ಅಡಿಕೆ ಮೇಲಿನ ಹೊಸ ರೀತಿಯ ಸಂಶೋಧನೆಗಳಿಗೆ ಸೂಕ್ತ ಅನುದಾನ ನೀಡುತ್ತಿದೆ. ಬೆಳೆ ನಷ್ಟ ಸಂದರ್ಭದಲ್ಲಿ ಕೂಡ ಪರಿಹಾರ ನೀಡಿ ರೈತರಿಗೆ ಆತ್ಮಸ್ಥೈರ್ಯ ತುಂಬುತ್ತಿದೆ.
B.Y.Raghavendra ಇಷ್ಟೆ ಅಲ್ಲದೆ ಅಡಿಕೆ ಕೇವಲ ಒಂದು ಬೆಳೆಯಾಗಿ ನಮ್ಮ ನಡುವೆ ಉಳಿದಿಲ್ಲ. ಬದಲಾಗಿ ಹಿಂದೂ ಧಾರ್ಮಿಕ ಆಚರಣೆಗಳ ಪದ್ಧತಿಯಲ್ಲಿ ಅಡಿಕೆಗೆ ವಿಶೇಷ ಸ್ಥಾನಮಾನವಿದೆ. ಅಡಿಕೆ ಬೆಳೆ ಒಂದು ವಾಣಿಜ್ಯ ಬೆಳೆಯು ಹೌದು, ಧಾರ್ಮಿಕ ಸಂಕೇತವು ಹೌದು ಎಂದು ಹೇಳಲು ಹೆಮ್ಮೆಯಾಗುತ್ತದೆ. ಮುಂದಿನ ದಿನಗಳಲ್ಲಿ ಸಚಿವಾಲಯದೊಂದಿಗೆ ನಿರಂತರ ಸಂಪರ್ಕ ಸಾಧಿಸಿ ರೈತರಿಗೆ ಇನ್ನಷ್ಟು ಅಗತ್ಯ ಅನುಕೂಲ ಮಾಡಿಕೊಡುವ ಭರವಸೆಯನ್ನು ಸಂಸದ ರಾಘವೇಂದ್ರ ಅವರು ತಮ್ಮ ಭಾಷಣದಲ್ಲಿ ನೀಡಿದರು
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಶ್ರೀ ಗುರುದತ್ತ ಹೆಗಡೆ ಅವರು, ಪ್ರಮುಖರಾದ ಶ್ರೀ ಮಹೇಶ್ ಅವರು, ಶ್ರೀ ಕೀರ್ತಿಗೌಡ ಅವರು, ಶ್ರೀ ವಿರೂಪಾಕ್ಷಪ್ಪ ಅವರು ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
