Nidhi Aapke Nikat ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಸೆ. 29 ರಂದು ಆಯೋಜಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಎಹೆಚ್ಪಿ (ಶಾಹಿ ಎಕ್ಸ್ಪೋರ್ಟ್), ಅಪರಲ್ ಪ್ರೆöÊವೇಟ್ ಲಿ., ನಂ.34,35 & 37, ನಂದಿಹಳ್ಳಿ ಗ್ರಾಮ, ಕುಮದ್ವತಿ ಕಾಲೇಜು ಹತ್ತಿರ, ಎಸ್.ಎಸ್.ರಸ್ತೆ, ಶಿಕಾರಿಪುರ, ಶಿವಮೊಗ್ಗ ಜಿಲ್ಲೆ ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ತೋಷನಿ ಅರ್ಬನ್ , #48/1, ಎವಿಕೆ ಕಾಲೇಜು ರಸ್ತೆ, ಪಿ.ಜೆ ಎಕ್ಸೆಟೆನ್ಷನ್, ತೋಷನಿ ಎಂಪೋರಿಯಾ ಇಲ್ಲಿ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದೆ. ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ಹಾಗೂ ಪಿಂಚಣಿದಾರರಿಗೆ ಮಧ್ಯಾಹ್ನ 2.30 ರಿಂದ ಸಂಜೆ 4 ಗಂಟೆವರೆಗೆ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದ್ದು, ಉದ್ಯೋಗದಾತರು ಮತ್ತು ಉದ್ಯೋಗಿಗಳು ಮತ್ತು ಪಿಂಚಣಿದಾರರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಾದೇಶಿಕ ಕಚೇರಿಯ ಸಹಾಯಕ ಭವಿಷ್ಯ ನಿಧಿ ಆಯುಕ್ತರು ತಿಳಿಸಿದ್ದಾರೆ.
Nidhi Aapke Nikat ಸೆ.29 ರಂದು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ‘ನಿಧಿ ಆಪ್ಕೆ ನಿಕಟ್’ ಕಾರ್ಯಕ್ರಮ
Date:
