CM Siddharamaiah ರಾಜ್ಯದಲ್ಲಿ ಜೂನ್ ಒಂದರಿಂದ ಈ ವರೆಗೆ ಮಳೆ ಹಾನಿಯಿಂದಾಗಿ 52 ಮಂದಿ ಮರಣ ಹೊಂದಿದ್ದಾರೆ. ಸೆಪ್ಟೆಂಬರ್ 28 ರವರೆಗಿನ ಎಲ್ಲಾ ಸಾವುಗಳಿಗೂ ವಾರಸುದಾರರಿಗೆ ಪರಿಹಾರ ನೀಡಲಾಗಿದೆ.
ರಾಜ್ಯದಲ್ಲಿ ಒಟ್ಟು 422 ಜಾನುವಾರುಗಳು ಮರಣ ಹೊಂದಿವೆ. ಇದರಲ್ಲಿ ಯಾದಗಿರಿ ಜಿಲ್ಲೆ ಒಂದರಲ್ಲೇ 245 ಜಾನುವಾರುಗಳು ಮರಣ ಹೊಂದಿವೆ. ಕಲಬುರಗಿ ಜಿಲ್ಲೆಯಲ್ಲಿ 27, ವಿಜಯಪುರದಲ್ಲಿ 3, ಬೀದರ್ ಜಿಲ್ಲೆಯಲ್ಲಿ 38 ಜಾನುವಾರುಗಳು ಮರಣ ಹೊಂದಿವೆ. ಈ ಪೈಕಿ 407 ಜಾನುವಾರುಗಳ ಮಾಲೀಕರಿಗೆ ಪರಿಹಾರ ವಿತರಿಸಲಾಗಿದೆ.
ಎಂದು
ಕಲ್ಯಾಣ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
547 ಮನೆಗಳು ಪೂರ್ಣ ಪ್ರಮಾಣದಲ್ಲಿ ಹಾನಿಗೊಳಗಾಗಿವೆ. ಇವುಗಳಿಗೆ ತಲಾ 1.20 ಲಕ್ಷ ರೂ. ಪರಿಹಾರ ನೀಡಲಾಗಿದೆ. ಅನಧಿಕೃತವಾಗಿ ನಿರ್ಮಿಸಿದ್ದ 62 ಮನೆಗಳಿಗೆ ತಲಾ ಒಂದು ಲಕ್ಷ ರೂ. ಪರಿಹಾರ ನೀಡಲಾಗಿದೆ.
CM Siddharamaiah ಭಾಗಶಃ ಹಾನಿಯಾದ ಮನೆಗಳು (ಶೇ.50 ರಿಂದ 75) ಇವುಗಳಿಗೆ ತಲಾ 50 ಸಾವಿರ ರೂ.ಗಳ ಪರಿಹಾರ ವಿತರಿಸಲಾಗಿದೆ.
