Friday, March 20, 2026
Friday, March 20, 2026

Kateel Ashok Pai Memorial Institute ಗಾಂಧೀಜಿಯವರ ಸತ್ಯ,ಸಹಕಾರ, ಸಹೋದರತ್ವ, ಸ್ವಾವಲಂಬನೆ ಬಿಂಬಿಸಿದ ಗಾಂಧಿ ಜಯಂತಿ.

Date:

Kateel Ashok Pai Memorial Institute ಮಾನಸ ಟ್ರಸ್ಟ್ನ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಅಕ್ಟೋಬರ್ 2ರಂದು ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಮಹಾತ್ಮ ಗಾಂಧಿಯವರ ಹಾಗೂ ಶಾಸ್ತ್ರೀಜಿಯವರ ಭಾವಚಿತ್ರಗಳಿಗೆ ಆಡಳಿತಾಧಿಕಾರಿಗಳಾದ ಪ್ರೊ ರಾಮಚಂದ್ರ ಬಾಳಿಗಾ ಅವರು ಪುಷ್ಪಾರ್ಚನೆಯನ್ನು ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಜೀವನ ಮೌಲ್ಯ ಹಾಗೂ ದೇಶ ಪ್ರೇಮದ ಕುರಿತು NSS ಕಾರ್ಯಕ್ರಮಾಧಿಕಾರಿಗಳಾದ ಶ್ರೀ ಮೋಹನ್ ಕುಮಾರ್ ಅವರು ಮಾತನಾಡಿದರು.

Kateel Ashok Pai Memorial Institute ಅಧ್ಯಕ್ಷತೆಯನ್ನು ವಹಿಸಿದ ಸಂಧ್ಯಾಕವೇರಿ ಅವರು “ಕರ್ನಾಟಕದಲ್ಲಿ ಗಾಂಧಿ” ಎಂಬ ಪುಸ್ತಕದಿಂದ ಗಾಂಧೀಜಿಯವರು ಭದ್ರಾವತಿಗೆ ಭೇಟಿ ನೀಡಿದ ಸಂಧರ್ಭದ ಕುರಿತ ಲೇಖನವನ್ನು ಓದಿ ಹೇಳಿದರು.

ವಿಧ್ಯಾರ್ಥಿಗಳು,ಉಪನ್ಯಾಸಕರು ಹಾಗೂ ಎಲ್ಲಾ ಸಿಬ್ಬಂದಿಗಳು ತನಮಯಿ ಹಾಗೂ ತಂಡದ ನೇತೃತ್ವದಲ್ಲಿ ಸುಶ್ರಾವ್ಯವಾಗಿ ಭಜನೆಗಳನ್ನು ಹಾಡಿದರು.
ತರುವಾಯ ಎಲ್ಲರೂ ಶ್ರಮದಾನ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಮಹಾತ್ಮಗಾಂಧಿಯವರ ಸತ್ಯ ,ಸಹಕಾರ,ಸಹೋದರತ್ವ, ಸ್ವಾವಲಂಬನೆ ಕುರಿತು ಅವಲೋಕನ ಹಾಗೂ ಅನುಭವ ಹೊಂದುವ ಕಾರ್ಯಕ್ರಮ ಇದಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...