Sunday, August 2, 2026
Sunday, August 2, 2026

CM Siddharamaiah ಎನ್ ಡಿ ಆರ್ ಎಫ್ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸುತ್ತಿಲ್ಲ- ಸಿದ್ಧರಾಮಯ್ಯ

Date:

CM Siddharamaiah ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರನ್ನು ಆತಂಕಗೊಳಿಸಿದೆ. ನಮ್ಮ ಸರ್ಕಾರವು ನುಡಿದಂತೆ ನಡೆದು ಗ್ಯಾರಂಟಿಗಳನ್ನು ರಾಜ್ಯದ ಜನರಿಗೆ ನೀಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯನವರು ತಿಳಿಸಿದ್ದಾರೆ .

ಎನ್‌ಡಿಆರ್‌ಎಫ್ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸುತ್ತಿಲ್ಲ. ಬಿಜೆಪಿಯವರು ಕಾಮಾಲೆಕಣ್ಣಿನಿಂದ ಎಲ್ಲವನ್ನೂ ನೋಡುತ್ತಿದ್ದು, ಗ್ಯಾರಂಟಿ ಯೋಜನೆಗಳ ಯಶಸ್ಸು ಅವರಲ್ಲಿ ಆತಂಕವನ್ನುಂಟು ಮಾಡಿದೆ. ನಮ್ಮ ಗ್ಯಾರಂಟಿಗಳನ್ನು ಬಿಹಾರ, ದೆಹಲಿ, ಮಹಾರಾಷ್ಟ್ರ, ಮಧ್ಯಪ್ರದೇಶ, ಹರಿಯಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಅನುಕರಿಸಿದ್ದಾರೆ. ಪ್ರಧಾನಿ ಮೋದಿಯವರು ಗ್ಯಾರಂಟಿಗಳ ಅನುಷ್ಠಾನ ಸಾಧ್ಯವೇ ಇಲ್ಲ ಎಂದಿದ್ದರು. ಆದರೆ ನಮ್ಮ ಸರ್ಕಾರ ನುಡಿದಂತೆ ನಡೆದು ತೋರಿಸಿದೆ ಎಂದು ಹೇಳಿದ್ದಾರೆ.

ಇಂದು ಬೆಳಗಾವಿಯ ಬಿಮ್ಸ್ ನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು 2017 ರಲ್ಲಿ ನಾನೇ ಶಂಕುಸ್ಥಾಪನೆ ನೆರವೇರಿಸಿದ್ದೆ, ಇಂದು ನಾನೆ ಉದ್ಘಾಟನೆ ನೆರವೇರಿಸಿರುವುದು ಸಂತಸ ತಂದಿದೆ. ಬಿಜೆಪಿಯ ಅವಧಿಯಲ್ಲಿ ಈ ಯೋಜನೆ ಕಾರ್ಯಗತವಾಗಿರಲಿಲ್ಲ. ನಾವು ಕಾಮಗಾರಿಗೆ ವೇಗ ನೀಡಿ ಪೂರ್ಣಗೊಳಿಸಿದ್ದೇವೆ. ಆಸ್ಪತ್ರೆಯ ನಿರ್ವಹಣೆಯನ್ನು ಯಾವುದೇ ಖಾಸಗಿ ಸಂಸ್ಥೆಗೆ ನೀಡಿಲ್ಲ ಎಂದರು.

CM Siddharamaiah ಮುಖ್ಯಮಂತ್ರಿ ಹುದ್ದೆ ವಿಷಯ ನಮ್ಮ ಪಕ್ಷದ ಆಂತರಿಕ ವಿಚಾರವಾಗಿದ್ದು, ಇದಕ್ಕೆ ಬಿಜೆಪಿ ತಲೆಕೆಡಿಸಿಕೊಳ್ಳುವುದು ಬೇಕಿಲ್ಲ. ಅವರು ತಮ್ಮ ಪಕ್ಷದ ಬಗ್ಗೆ ತಲೆಕೆಡಿಸಿಕೊಂಡರೆ ಸಾಕು ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...