Sunday, August 23, 2026
Sunday, August 23, 2026

District Child Protection Units ಬೇಡವಾದ ನವಜಾತ ಶಿಶು ಕಂಡುಬಂದಲ್ಲಿ ಸರ್ಕಾರಿ ವಿಶೇಷ ದತ್ತು ಸಂಸ್ಥೆಗೆ ಒಪ್ಪಿಸಿ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ

Date:

District Child Protection Units ಬೇಡವಾದ ಮತ್ತು ಸಾರ್ವಜನಿಕ ಸ್ಥಳದಲ್ಲಿ ನವಜಾತ ಶಿಶು ಕಂಡುಬಂದಲ್ಲಿ ಅಂತಹ ಮಕ್ಕಳನ್ನು ಸರ್ಕಾರಿ ವಿಶೇಷ ದತ್ತು ಸಂಸ್ಥೆಗೆ ಒಪ್ಪಿಸಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.
ಸಾರ್ವಜನಿಕರು ಯಾವುದೇ ಕಾರಣದಿಂದ ತಮಗೆ ಜನಿಸಿದ ನವಜಾತ ಶಿಶುಗಳು, ಅನಾಥ, ಪರಿತ್ಯಕ್ತ ಮಗುವು ತಮಗೆ ಬೇಡವಾದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಗೆ ಕರೆ ಮಾಡಿ ಮಾಹಿತಿ ನೀಡಿದರೆ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಅಥವಾ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಮಗುವನ್ನು ಸ್ವೀಕರಿಸಿ, ಸರ್ಕಾರಿ ವಿಶೇಷ ದತ್ತು ಸಂಸ್ಥೆಗೆ ದಾಖಲು ಮಾಡುತ್ತಾರೆ.
District Child Protection Units ಇಲ್ಲವೇ ಬಳ್ಳಾರಿ ನಗರದ ಕಂಟೋನ್ ಮೆಂಟ್ ಪ್ರದೇಶದ ಶಾಂತಿಧಾಮ ಆವರಣದ ಸರ್ಕಾರಿ ವಿಶೇಷ ದತ್ತು ಸಂಸ್ಥೆ, ಇಲ್ಲಿಗೆ ಒಪ್ಪಿಸಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.
ಈ ಪ್ರಕ್ರಿಯೆಯಲ್ಲಿ ನವಜಾತ ಮಗುವಿನ ತಾಯಿ/ಪೋಷಕರಿಗೆ ಯಾವುದೇ ವಿಚಾರಣೆಗೆ ಒಳಪಡಿಸಲಾಗುವುದಿಲ್ಲ. ಈ ಬಗ್ಗೆ ಸಾರ್ವಜನಿಕರು ಸಹ ಯಾವುದೇ ಭಯ ಆತಂಕವಿಲ್ಲದೇ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಗೆ ಕರೆ ಮಾಡಿ ಬೇಡವಾದ ಮಕ್ಕಳನ್ನು ಒಪ್ಪಿಸಬೇಕು. ಸಾರ್ವಜನಿಕರು ಯಾವುದೇ ಕಾರಣಕ್ಕೂ ಮಕ್ಕಳನ್ನು ಕಸದ ಬುಟ್ಟಿಯಲ್ಲಿ, ರಸ್ತೆ ಬದಿಯಲ್ಲಿ, ತಿಪ್ಪೆ ಗುಂಡಿಯಲ್ಲಿ ಹಾಕುವುದರ ಮೂಲಕ ಮಕ್ಕಳ ಸಾವಿಗೆ ಕಾರಣರಾಗಬಾರದು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಮುಂದಿನ ಎರಡುವರ್ಷಗಳಲ್ಲಿ 500 ಕೆಪಿಎಸ್ ಶಾಲೆಗಳ ನಿರ್ಮಾಣದ ಉದ್ದೇಶವಿದೆ- ಮಧು ಬಂಗಾರಪ್ಪ.

Madhu Bangarappa ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪಡೆಯುತ್ತಿರುವ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ...

Breaking News ತೀರ್ಥಹಳ್ಳಿಯ ಘಂಟೆಹಕ್ಲು ಬಳಿ ಬಸ್ ಮತ್ತು ಗೂಡ್ಸ್ ವಾಹನ ಢಿಕ್ಕಿ:ಚಾಲಕ ಗಾಯಾಳು

Breaking News ತೀರ್ಥಹಳ್ಳಿ - ಉಡುಪಿ ಮಾರ್ಗ ಮಧ್ಯೆಯ ಘಂಟೆಹಕ್ಲು...

B.Y. Raghavendra ಶಿವಮೊಗ್ಗ ಗ್ರಾಮಾಂತರ ರೈತರ ನೀರಿನ ಬವಣೆಗೆ ದೀರ್ಘಕಾಲೀನ ಪರಿಹಾರ ಕಲ್ಪಿಸಿ- ಬಿ.ವೈ.ರಾಘವೇಂದ್ರ.

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ.ರಾಘವೇಂದ್ರ ಅವರ ನೇತೃತ್ವದ...