Sunday, August 2, 2026
Sunday, August 2, 2026

Rotary Club Shimoga ಪ್ಲಾಸ್ಟಿಕ್ ಹೆಚ್ಚಾದ ಬಳಕೆಯಿಂದ ಪರಿಸರಕ್ಕೆ ಹಾನಿಯಾಗುತ್ತಿದ್ದು, ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಬೇಕು: ಪ್ರೊ. ಚಂದ್ರಶೇಖರ್

Date:

Rotary Club Shimoga ಪ್ಲಾಸ್ಟಿಕ್ ಹೆಚ್ಚಾದ ಬಳಕೆಯಿಂದ ಪರಿಸರಕ್ಕೆ ಹಾನಿಯಾಗುತ್ತಿದ್ದು, ಪ್ರತಿಯೊಬ್ಬರೂ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಬೇಕು. ಅಗತ್ಯ ಕೆಲಸಗಳಿಗೆ ಬಟ್ಟೆ ಬ್ಯಾಗ್ ಬಳಸಬೇಕು ಎಂದು ಪ್ರೊ. ಚಂದ್ರಶೇಖರ್ ಹೇಳಿದರು.
ರೋಟರಿ ಕ್ಲಬ್ ಶಿವಮೊಗ್ಗ ಉತ್ತರ ಮತ್ತು ಇನ್ನರ್‌ವ್ಹೀಲ್ ಶಿವಮೊಗ್ಗ ಉತ್ತರದ ವತಿಯಿಂದ ವಿನೋಬನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಆಯೋಜಿಸಿದ್ದ ಪ್ಲಾಸ್ಟಿಕ್ ಕವರ್ ತ್ಯಜಿಸಿ, ಬಟ್ಟೆ ಬ್ಯಾಗ್ ಬಳಸಿ ಅಭಿಯಾನದಲ್ಲಿ ಮಾತನಾಡಿದರು.
ಈಗ ಎಲ್ಲರಲ್ಲೂ ಹೆಚ್ಚುತ್ತಿರುವ ಕ್ಯಾನ್ಸರ್ ರೋಗಕ್ಕೆ ನಾವು ಬಳಸುವ ಪ್ಲಾಸ್ಟಿಕ್ ಮೂಲ ಕಾರಣ. ಬಿಸಿ ಆಹಾರ ಪದಾರ್ಥಗಳನ್ನು ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಕವರ್‌ನಲ್ಲಿ ಹಾಕಬೇಡಿ, ನಾವು ಬೇಡದ ಆಹಾರ ತುಂಬಿ ಎಸೆದ ಪ್ಲಾಸ್ಟಿಕ್ ಕವರ್‌ಗಳನ್ನು ಅರಿವಿಲ್ಲದೆಯೇ ತಿನ್ನುವ ಹಸುಗಳು, ಎಮ್ಮೆ, ಕತ್ತೆ, ಕುದುರೆ ಮತ್ತು ಇತರ ಪ್ರಾಣಿಗಳ ಹೊಟ್ಟೆ ಸೇರಿ ಅವುಗಳ ಪ್ರಾಣಕ್ಕೆ ಸಂಚಕಾರ ತರುತ್ತದೆ. ಎಲ್ಲೆಂದರಲ್ಲಿ ಬೇಕಾಬಿಟ್ಟಿಯಾಗಿ ಎಸೆಯುವ ಪ್ಲಾಸ್ಟಿಕ್ ಕವರ್‌ಗಳು ಜಲಮೂಲಗಳನ್ನು ಸೇರಿ ಜಲಚರಗಳಿಗೂ ಹಾನಿಕಾರಕವಾಗಿದೆ. ನಾವು ಈಗಲಾದರೂ ಎಚ್ಚತ್ತುಕೊಂಡು ಪರಿಸರ ರಕ್ಷಿಸಬೇಕು ಎಂದು ತಿಳಿಸಿದರು.
ರೋಟರಿ ಕ್ಲಬ್ ಶಿವಮೊಗ್ಗ ಉತ್ತರ ಅಧ್ಯಕ್ಷ ಬಸವರಾಜಪ್ಪ ಮಾತನಾಡಿ, ಅಭಿಯಾನವನ್ನು ವರ್ಷಪೂರ್ತಿ ಹಮ್ಮಿಕೊಳ್ಳಲಾಗುವುದು. ಸಮಾಜಮುಖಿ ಕಾರ್ಯಗಳಲ್ಲಿ ನಿರಂತರ ತೊಡಗಿಸಿಕೊಳ್ಳಲಾಗುವುದು ಎಂದರು.
Rotary Club Shimoga ಅಭಿಯಾನದಲ್ಲಿ ರೋಟರಿ ಹಾಗೂ ಇನ್ನರ್‌ವ್ಹೀಲ್ ಲೋಗೋ ಇರುವ 500 ಬಟ್ಟೆ ಬ್ಯಾಗ್‌ಗಳನ್ನು ಪ್ರಥಮ ಹಂತದಲ್ಲಿ ವಿತರಿಸಲಾಯಿತು. ಪ್ಲಾಸ್ಟಿಕ್ ಕವರ್ ಬಳಸಬೇಡಿ, ಬಟ್ಟೆ ಬ್ಯಾಗ್ ಬಳಸಿ ಎಂದು ಜಾಗೃತಿ ಮೂಡಿಸಲಾಯಿತು.
ಇನ್ನರ್‌ವ್ಹೀಲ್ ಶಿವಮೊಗ್ಗ ಉತ್ತರ ಅಧ್ಯಕ್ಷೆ ಶಾರದಾ ಬಸವರಾಜ್ ಮಾತನಾಡಿ, ಸಾಮಾಜಿಕ ಕಳಕಳಿ ಕಾರ್ಯಕ್ಕೆ ಕೈಜೋಡಿಸುತ್ತೇವೆ ಎಂದರು. ಅಭಿಯಾನದಲ್ಲಿ ಶಿವಕುಮಾರ್, ಸರ್ಜಾ ಜಗದೀಶ್, ಶ್ರೀಧರ್, ರಮೇಶ್, ನಾಗರಾಜ್, ದತ್ತಾತ್ರಿ, ಸುಂದರ್, ಶರವಣ, ಜಿ.ವಿಜಯ ಕುಮಾರ್, ಭಾರತಿ, ವಾರಿಜಾ ಜಗದೀಶ್, ಸುಜಾತ, ಸುನೀತಾ, ಕಾವ್ಯ, ಕೋಮಲ, ಉಷಾ, ಬಿಂದು, ಸುಮ, ಪ್ರಜ್ಞಾ ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...