Saturday, December 6, 2025
Saturday, December 6, 2025

CM Siddharamaiah ಸರ್ಕಾರ ಆರ್.ಎಸ್.ಎಸ್. ನಿಷೇಧ ಮಾಡಿಲ್ಲ- ಸಿದ್ಧರಾಮಯ್ಯ ಸ್ಪಷ್ಟನೆ

Date:

CM Siddharamaiah ಸರ್ಕಾರ ಆರ್.ಎಸ್.ಎಸ್ ನಿಷೇಧ ಮಾಡಿಲ್ಲ. ಶಾಲಾ – ಕಾಲೇಜು ಆವರಣದಲ್ಲಿ ಸಂಘ ಸಂಸ್ಥೆಗಳು ಅನುಮತಿ ಪಡೆಯಬೇಕೆಂದು ಹೊರಡಿಸಿರುವ ಆದೇಶದಲ್ಲಿ ಆರ್.ಎಸ್.ಎಸ್ ಎಂದು ಎಲ್ಲಿಯೂ ಉಲ್ಲೇಖವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸ್ಪಷ್ಟಪಡಿಸಿದ್ದಾರೆ.

ಆದೇಶದಲ್ಲಿ ಯಾವುದೇ ನಿರ್ದಿಷ್ಟ ಸಂಘ ಅಥವಾ ಸಂಸ್ಥೆ ಎಂದು ಇಲ್ಲ. ಬಿಜೆಪಿ ಸರ್ಕಾರ ಆದೇಶ ಮಾಡಿದ್ದನ್ನೇ ನಾವು ಪುನರುಚ್ಚರಿಸಿದ್ದೇವೆ. ಅವರು ಮಾಡಬಹುದು, ನಾವು ಮಾಡಬಾರದೇ?

2013ರಲ್ಲಿ ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿಗಳಿದ್ದ ಸಂದರ್ಭದಲ್ಲಿ ಸಂಘ ಸಂಸ್ಥೆಗಳು ಶಾಲಾ ಕಾಲೇಜು ಆವರಣದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದನ್ನು ನಿಷೇಧಿಸಿದ್ದರು. ಜಗದೇಶ ಶೆಟ್ಟರ್ ಅವರು ಶಿಕ್ಷಣ ಇಲಾಖೆ ಆದೇಶ ಮಾಡಿತ್ತು ನಾನಲ್ಲ ಎಂದಿದ್ದಾರೆ. ಇವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೇ ಆದೇಶ ಹೊರಡಿಸಿದ್ದಾರೆ.

CM Siddharamaiah ಸಂಘ ಸಂಸ್ಥೆಗಳಿಗೆ ಅನುಮತಿ ಕೊಡಲೇಬೇಕು ಎಂದು ಏನಿಲ್ಲ. ಶಾಂತಿ ಸುವ್ಯವಸ್ಥೆ ಮೇಲೆ ಬೀರುವ ಪರಿಣಾಮವನ್ನು ಯೋಚಿಸಿ ಅನುಮತಿ ನೀಡುವುದು, ಬಿಡುವುದು ಅವಲಂಬಿತವಾಗಿದೆ.
ಎಂದು ಪುತ್ತೂರಿನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಾಧ್ಯಮ ಹೇಳಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...