Monday, February 2, 2026
Monday, February 2, 2026

Department of Railway ದೀಪಾವಳಿ ಪ್ರಯುಕ್ತ ಬೆಂಗಳೂರು ಮತ್ತು ಶಿವಮೊಗ್ಗ ನಡುವೆ ವಿಶೇಷ ರೈಲು ಸೇವೆ

Date:

Department of Railway ಹಬ್ಬದ ಪ್ರಯುಕ್ತ ಪ್ರಯಾಣಿಕರ ನಿರೀಕ್ಷಿತ ದಟ್ಟಣೆಯನ್ನು ನಿರ್ವಹಿಸಲು, ನೈಋತ್ಯ ರೈಲ್ವೆಯು ಕೆಎಸ್ಆರ್ ಬೆಂಗಳೂರು-ಶಿವಮೊಗ್ಗ ಟೌನ್ ನಡುವೆ ಹಾಗೂ ಬೆಂಗಳೂರು ಕಂಟೋನ್ಮೆಂಟ್-ಶಿವಮೊಗ್ಗ ಟೌನ್ ನಡುವೆ ತಲಾ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಈ ವಿಶೇಷ ರೈಲುಗಳ ವಿವರಗಳು ಹೀಗಿವೆ:

  1. ರೈಲು ಸಂಖ್ಯೆ 06225/06226 ಕೆಎಸ್ಆರ್ ಬೆಂಗಳೂರು-ಶಿವಮೊಗ್ಗ ಟೌನ್-ಕೆಎಸ್ಆರ್ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ (ಒಂದು ಟ್ರಿಪ್):

ರೈಲು ಸಂಖ್ಯೆ 06225 ಅಕ್ಟೋಬರ್ 22, 2025 ರಂದು ಬೆಳಿಗ್ಗೆ 08:05 ಗಂಟೆಗೆ ಕೆಎಸ್ಆರ್ ಬೆಂಗಳೂರು ನಿಲ್ದಾಣದಿಂದ ಹೊರಟು, ಅದೇ ದಿನ ಮಧ್ಯಾಹ್ನ 01:00 ಗಂಟೆಗೆ ಶಿವಮೊಗ್ಗ ಟೌನ್ ತಲುಪಲಿದೆ. ಮರಳಿ ರೈಲು ಸಂಖ್ಯೆ 06226 ಅಕ್ಟೋಬರ್ 22, 2025 ರಂದು ಸಂಜೆ 05:15 ಗಂಟೆಗೆ ಶಿವಮೊಗ್ಗ ಟೌನ್‌ನಿಂದ ಹೊರಟು, ಅದೇ ದಿನ ರಾತ್ರಿ 10:45 ಗಂಟೆಗೆ ಕೆಎಸ್ಆರ್ ಬೆಂಗಳೂರು ತಲುಪಲಿದೆ.

ಈ ರೈಲು ಯಶವಂತಪುರ, ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ತರೀಕೆರೆ, ಭದ್ರಾವತಿ ಮತ್ತು ಶಿವಮೊಗ್ಗ ಹಾಲ್ಟ್ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ. ಈ ರೈಲು ಒಂದು ಎಸಿ 2- ಟೈರ್, ಒಂದು ಎಸಿ 3- ಟೈರ್, ಹನ್ನೊಂದು ಸ್ಲೀಪರ್ ಕ್ಲಾಸ್, ನಾಲ್ಕು ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಮತ್ತು ಎರಡು ಎಸ್‌ಎಲ್‌ಆರ್/ಡಿ ಬೋಗಿಗಳನ್ನು ಒಳಗೊಂಡಿರುತ್ತದೆ.

  1. ರೈಲು ಸಂಖ್ಯೆ 06215/06216ಬೆಂಗಳೂರು ಕಂಟೋನ್ಮೆಂಟ್–ಶಿವಮೊಗ್ಗ ಟೌನ್–ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್‌ಪ್ರೆಸ್ (ಒಂದು ಟ್ರಿಪ್):

ರೈಲು ಸಂಖ್ಯೆ 06215 ಅಕ್ಟೋಬರ್ 22, 2025 ರಂದು ಬೆಳಿಗ್ಗೆ 10:45 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್‌ನಿಂದ ಹೊರಟು, ಅದೇ ದಿನ ಸಂಜೆ 06:00 ಗಂಟೆಗೆ ಶಿವಮೊಗ್ಗ ಟೌನ್ ತಲುಪಲಿದೆ. ಮರಳಿ, ರೈಲು ಸಂಖ್ಯೆ 06216 ಅಕ್ಟೋಬರ್ 22, 2025 ರಂದು ರಾತ್ರಿ 11:55 ಗಂಟೆಗೆ ಶಿವಮೊಗ್ಗ ಟೌನ್‌ನಿಂದ ಹೊರಟು, ಮರುದಿನ ಬೆಳಿಗ್ಗೆ 07:00 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ.

Department of Railway ಈ ರೈಲು ಎಸ್ಎಂಟಿವಿ ಬೆಂಗಳೂರು, ಚಿಕ್ಕಬಾಣಾವರ, ತುಮಕೂರು, ಬಾಣಸಂದ್ರ, ತಿಪಟೂರು, ಅರಸೀಕೆರೆ, ಕಡೂರು, ಬೀರೂರು, ತರೀಕೆರೆ, ಭದ್ರಾವತಿ ಮತ್ತು ಶಿವಮೊಗ್ಗ ಹಾಲ್ಟ್ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ. ಈ ರೈಲಿನಲ್ಲಿ ಒಂದು ಎಸಿ 2- ಟೈರ್, ಎರಡು ಎಸಿ 3- ಟೈರ್, ಹನ್ನೊಂದು ಸ್ಲೀಪರ್ ಕ್ಲಾಸ್, ನಾಲ್ಕು ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಮತ್ತು ಎರಡು ಎಸ್‌ಎಲ್‌ಆರ್/ಡಿ ಬೋಗಿಗಳು ಇರಲಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...