Monday, March 30, 2026
Monday, March 30, 2026

Shivamogga Jail ಶಿವಮೊಗ್ಗ ಜೈಲಿನಲ್ಲಿ ಕೈದಿಗಳ ನಡುವೆ ಮಾರಾಮಾರಿ, ಎಫ್ ಐ ಆರ್ ದಾಖಲು

Date:

Shivamogga Jail ಶಿವಮೊಗ್ಗ ಜೈಲಿನಲ್ಲಿ ವಿಚಾರಣ ಬಂದಿ ಕೈದಿಯಿಂದ ಶಿಕ್ಷಾ ಬಂದಿಗೆ ಹಲ್ಲೆ ನಡೆದಿದ್ದು ವಿಚಾರಣಾ ಬಂದಿ ಬಳಿ ನಿಷೇಧಿತಾ ವಸ್ತುಗಳಾದ ಬ್ಲೇಡ್ ಪತ್ತೆಯಾಗಿರುವ ಘಟನೆ ವರದಿಯಾಗಿದೆ.

ವಿಚಾರಣಾ ಬಂದಿ ಎಂದರೆ ನ್ಯಾಯಾಲಯದಲ್ಲಿ ಇವರ ಪ್ರಕರಣ ವಿಚಾರಣ ಹಂತದಲ್ಲಿದ್ದು, ಇವರಿನ್ನೂ ಆರೋಪಿಗಳಾಗಿರುತ್ತಾರೆ. ಶಿಕ್ಷಾ ಬಂಧಿ ಎಂದರೆ ನ್ಯಾಯಾಲಯ ಇವರನ್ನ ಶಿಕ್ಷೆಗೆ ಒಳಪಡಿಸಿರುವುದರಿಂದ ಇವರನ್ನ ಶಿಕ್ಷಾ ಬಂದಿ ಅಥವಾ ಸಜಾಬಂದಿ ಎಂದು ಗುರುತಿಸಲಾಗಿರುತ್ತದೆ.

ಕುಮಧ್ವತಿ ವಾರ್ಡ್ ನ 20,21 ಹಾಗೂ 35 ನೇ ಕೊಠಡಿಯಲ್ಲಿದ್ದ ವಿಚಾರಣಾ ಬಂದಿ ನಿರಂಜನ್ ನಾಯ್ಕ್ ಯಾನೆ ನಿರಂಜನ್, ರುದ್ರೇಶ್ ನಾಯ್ಕ್ ಹಾಗೂ ರಾಜೇಶ್ ಎಂಬವರು ಅ.19 ರಂದು ಶನಿವಾರ ಮಧ್ಯಾಹ್ನದ ಊಟ ಬಡಿಸುವಾಗ ಭದ್ರಾ ವಿಭಾಗದ ಕೊಠಡಿ ಸಂಖ್ಯೆ 28 ರಲ್ಲಿದ್ದ ಶಿಕ್ಷಾ ಬಂಧಿ ಮಾರಪ್ಪ ಎಂಬುವನ ಮೇಲೆ ದಾಳಿ ನಡೆಸಿ ಹರಿತವಾದ ಆಯುಧದಿಂದ ಎಡಗಣ್ಣಿನ ಮೇಲೆ ದಾಳಿ ನಡೆಸಿದ್ದಾರೆ. Shivamogga Jail ಮಾರಪ್ಪನಿಗೆ ಜೈಲಿನಲ್ಲೇ ಇರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ನಂತರ ಆರೋಪಿಗಳಾದ ಮೂವರನ್ನ ತಪಾಸಣೆಗೊಳಪಡಿದಿದಾಗ ನಿರಂಜನ ನಾಯ್ಕನ ಬಳಿ ಬ್ಲೇಡ್ ಪತ್ತೆಯಾಗಿದೆ. ಜೈಲಿನಲ್ಲಿ ಈ ವಸ್ತುಗಳು ನಿಷೇಧವಾದುದರಿಂದ ಆತನ ಮೇಲೆ ಜೈಲ್ ಸೂಪರಿಂಟೆಂಡೆಂಟ್ ರಂಗನಾಥ ದೂರು ದಾಖಲಿಸಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಶಿಕ್ಷಾ ಬಂದಿ ಮಾರಪ್ಪನ ಮೇಲೆ ಹಲ್ಲೆ ನಡೆಸಿರುವುದಾಗಿ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಎಲ್ಲರೂ ಸಹಬಾಳ್ವೆ,ಸಹಕಾರ ಸೇವಾ ಮನೋಭಾವನೆಯಿಂದ ಬಾಳಬೇಕೆಂಬುದೇ ಮಹಾವೀರರ ಸಂದೇಶ- ಕೆ. ರಂಗನಾಥ್

ನಮ್ಮೂರ ಬಳಗದ ವತಿಯಿಂದ ಭಾರತೀಯ ಧಾರ್ಮಿಕ ಸುಧಾರಕರು ಮತ್ತು ಆಧ್ಯಾತ್ಮಿಕ ನಾಯಕರು...

Adichunchabagiri Education Trust ದೇಹ ಆರೋಗ್ಯವಾಗಿದ್ದರೆ, ದೇಶವೂ ಆರೋಗ್ಯ- ಶ್ರೀನಾದಮಾಯಾನಂದನಾಥಶ್ರೀ

ದೇಹದ ಆರೋಗ್ಯ ಉತ್ತಮವಾಗಿದ್ದರೆ, ದೇಶದ ಆರೋಗ್ಯವೂ ಚೆನ್ನಾಗಿರುತ್ತದೆ ಎಂದು ಶ್ರೀ ಆದಿ...

Klive Special Article ಮರೆಯಲಾಗದ ಮಾನವೀಯ ಸಂದೇಶ ಸಾರಿದ ಶ್ರೀಮಹಾವೀರ. ...

Klive Special Article ಜನ ಸಂಸ್ಕೃತಿಗಳು ನಿಂತ ನೀರಾದಾಗಲೆಲ್ಲಾ ಅದನ್ನು...