Sri Adichunchanagiri Mutt ಶಿವಮೊಗ್ಗ ಶ್ರೀ ಆದಿಚುಂಚನಗಿರಿ ಶಾಖಾ ಮಠದ 35 ನೇ ವಾರ್ಷಿಕೋತ್ಸವ ಸಮಾರಂಭವನ್ನು ಅತ್ಯಂತ ವಿಭಿನ್ನ,ವಿಶೇಷವಾಗಿ ಆಚರಿಸಲು ಶ್ರೀ ಆದಿಚುಂಚನಗಿರಿ ಮಠ ತೀರ್ಮಾನಿಸಿದೆ.
ಇದೇ ಮೊದಲ ಬಾರಿಗೆ ದಾಸವರೇಣ್ಯ ಪುರಂದದಾಸರ ಕೀರ್ತನೋತ್ಸವ ಸಮಾರಂಭವನ್ನು ಮಾಜಿ ಸಚಿವ ಆರಗಜ್ಞಾನೇಂದ್ರ ಅವರ ಹುಟ್ಟೂರಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ.
ಶಿವಮೊಗ್ಗದ ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ನವೆಂಬರ್ 4 ಮತ್ತು 5 ರಂದು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ನವಂಬರ್ 4 ರಂದು ಬೆಳಗ್ಗೆ 10ರಿಂದ ತೀರ್ಥಹಳ್ಳಿ ತಾಲ್ಲೂಕಿನ ಆರಗದಲ್ಲಿರುವ ಸಹಕಾರ ಸಂಘ ಸಭಾ ಭವನದಲ್ಲಿ ದಾಸವರೇಣ್ಯ ಪುರಂದರದಾಸರ ಕೀರ್ತನೋತ್ಸವ ಕಾರ್ಯಕ್ರಮ ನಡೆಯಲಿದ್ದು, ದಿವ್ಯ ಸಾನಿಧ್ಯವನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ 72ನೇ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಹಾಗೂ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಜರುಗಲಿದ್ದು, ಕಾರ್ಯಕ್ರಮದಲ್ಲಿ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ನ.5ರ ಬೆಳಗ್ಗೆ 10 ಗಂಟೆಗೆ ಶ್ರೀ ಮಠದ 35 ನೇ ವಾರ್ಷಿಕೋತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಹಾಗೂ ಕೃಷಿ ವಿಜ್ಞಾನ ಕ್ಷೇತ್ರದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದ ನಮ್ಮ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳಿಗೆ ಪೂಜ್ಯರಿಂದ ಸನ್ಮಾನಿಸುವ ಕಾರ್ಯಕ್ರಮ ನಡೆಯುವುದು.
ನವೆಂಬರ್ 5ರಂದು ಬೆಳಿಗ್ಗೆ 7 ಗಂಟೆಗೆ ಶರಾವತಿ ನಗರದ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯದಲ್ಲಿ ಪೂಜ್ಯ ಶ್ರೀಗಳ ಸಾನ್ನಿಧ್ಯದಲ್ಲಿ ಹೋಮ – ಹವನ ಮತ್ತು ವಿಶೇಷ ಪೂಜಾ ಕೈಂಕರ್ಯಗಳನ್ನು ನಡೆಸಲಾಗುವುದು.
ಶ್ರೀ ಮಠದ ಶಾಖೆಯ ಶ್ರೀಗಳು, ಜನಪ್ರತಿನಿಧಿಗಳು ಭಾಗವಹಿಸಲಿದ್ದು,
ಕಾರ್ಯಕ್ರಮಕ್ಕೆ ಸರ್ವರನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾಮಠ ಸ್ವಾಗತಿಸಿ, ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವಿಶೇಷ ಕಾರ್ಯಕ್ರಮ:
Sri Adichunchanagiri Mutt ತೀರ್ಥಹಳ್ಳಿ ತಾಲೂಕಿನ ಆರಗದಲ್ಲಿ ನ. 4ರಂದು ನಡೆಯಲಿರುವ ವಿಶೇಷ, ವಿಭಿನ್ನವಾದ ದಾಸವರೇಣ್ಯ ಪುರಂದರ ದಾಸರ ಕೀರ್ತನೋತ್ಸವ ಸಮಾರಂಭದಲ್ಲಿ ನಾಡಿನ ಖ್ಯಾತ ಗಾಯಕರು ಆಗಮಿಸಿ ವಿವಿಧ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
ಮೊದಲ ಅವಧಿಯಲ್ಲಿ: ವಿದ್ವಾನ್ ಪಣೀಂದ್ರ ಬೆಂಗಳೂರು ಮತ್ತು ಸಂಗಡಿಗರಿಂದ ಹಾಡುಗಾರಿಕೆಯನ್ನು ನಡೆಸಿಕೊಡಲಿದ್ದಾರೆ.
2ನೇ ಅವಧಿ : ವಿದ್ವಾನ್ ಹೊಸಳ್ಳಿ.ಕೆ.ವೆಂಕಟರಾಂ,ವಿದ್ವಾನ್ ಹೊಸಳ್ಳಿ ಕೆ. ಸುಬ್ಬರಾವ್, ವಿದ್ವಾನ್ ಹೊಸಳ್ಳಿ ವಿ.ರಘುರಾಂ ಮತ್ತು ಸಂಗಡಿಗರಿಂದ ಪಿಟೀಲು ವಾದನ ನಡೆಸಿಕೊಡುವರು.
3ನೇ ಅವಧಿ: ವಿದ್ವಾನ್ ಶೃಂಗೇರಿ ನಾಗರಾಜ್ ರವರ ಶಿಷ್ಯ ವೃಂದದವರಿಂದ ಮತ್ತು ಆರಗ ಗ್ರಾಮದ ಭಜನಾ ಮಂಡಳಿಯವರಿಂದ ಹಾಡುಗಾರಿಕೆ.
4ನೇ ಅವಧಿ : ವಿದ್ವಾನ್ ಹುಮಾಯುನ್ ಹರ್ಲಾಪುರ್, ವಿದ್ವಾನ್ ನವಶಾದ್ ಹರ್ಲಾಪುರ್, ವಿದ್ವಾನ್ ನಿಶಾದ್ ಹರ್ಲಾಪುರ್ ಮತ್ತು ಸಂಗಡಿಗರಿಂದ ಹಿಂದೂಸ್ತಾನಿ ಗಾಯನ.
5ನೇ ಅವಧಿ : ರಾಷ್ಟ್ರಪತಿ ಪ್ರಶಸ್ತಿ ವಿಜೇತ ವಿದ್ವಾನ್ ಮಾರುತಿ ಪ್ರಸಾದ್ ಬೆಂಗಳೂರು ಮತ್ತು ಸಂಗಡಿಗರಿಂದ ಹಾಡುಗಾರಿಕೆ.
6ನೇ ಅವಧಿ: ಪೂಜ್ಯ ಶ್ರೀ ಶ್ರೀ ಸಾಯಿ ಕೀರ್ತಿನಾಥ ಸ್ವಾಮೀಜಿ ಹಾಗೂ ವಿದ್ವಾನ್ ಮಾರುತಿ ಪ್ರಸಾದ್ ಅವರಿಂದ ಹಾರ್ಮೋನಿಯಂ, ಕೀಬೋರ್ಡ್,ಜುಗಲ್ ಬಂದಿ ಕಾರ್ಯಕ್ರಮ ನಡೆಯುವುದು.
ಖ್ಯಾತ ಸಂಗೀತಗಾರರಿಂದ ಸಾಮೂಹಿಕ ಗಾಯನ ಹಾಗೂ ಸತ್ಸಂಗ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಸಾರ್ವಜನಿಕರು, ಶ್ರೀಮಠದ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೆ ಸಹಕರಿಸಬೇಕಾಗಿ ಕಾರ್ಯಕ್ರಮದ ಆಯೋಜಕರು ಕೋರಿದ್ದಾರೆ.
Sri Adichunchanagiri Mutt ಶ್ರೀಆದಿಚುಂಚನಗಿರಿ ಶಾಖಾಮಠದ ವಾರ್ಷಿಕೋತ್ಸವ: ವಿಶೇಷ ಪುರಂದರ ಕೀರ್ತನೋತ್ಸವ ಆಯೋಜನೆ
Date:
