Tuesday, February 3, 2026
Tuesday, February 3, 2026

ದೈನಿಕ ಮುದ್ರಣಗೊಳ್ಳುವ ಪತ್ರಿಕಾ ಸಂಪಾದಕರ ಅಧ್ಯಕ್ಷರಾಗಿ “ತುಂಗಾತರಂಗ”ದ ಎಸ್.ಕೆ.ಗಜೇಂದ್ರ ಸ್ವಾಮಿ ಆಯ್ಕೆ

Date:

ದಿನನಿತ್ಯ ಪ್ರಕಟಗೊಳ್ಳುವ ದಿನ ಪತ್ರಿಕೆಗಳ ಸಂಪಾದಕರಗಳ ಒಕ್ಕೂಟವಾದ ಶಿವಮೊಗ್ಗ ಜಿಲ್ಲಾ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷರಾಗಿ ತುಂಗಾತರಂಗ ದಿನ ಪತ್ರಿಕೆಯ ಸಂಪಾದಕ ಎಸ್ ಕೆ ಗಜೇಂದ್ರ ಸ್ವಾಮಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸಹ್ಯಾದ್ರಿ ದಿನಪತ್ರಿಕೆಯ ಸಂಪಾದಕ ಮಂಜುನಾಥ್ ಅವರನ್ನು ನೇಮಕ ಮಾಡಲಾಗಿದ್ದು, ಖಜಾಂಚಿಯಾಗಿ ಹೊಸ ನಾವಿಕ ದಿನಪತ್ರಿಕೆಯ ಸಂಪಾದಕ ರಾಕೇಶ್ ಡಿಸೋಜಾ ಅವರನ್ನು ನೇಮಕ ಮಾಡಲಾಗಿದೆ.
ಹಿರಿಯ ಪತ್ರಿಕಾ ಸಂಪಾದಕರಾದ ಜಿ. ಪದ್ಮನಾಭ್ ಅವರ ಅಧ್ಯಕ್ಷತೆಯಲ್ಲಿ ಶಿವಮೊಗ್ಗ ಪತ್ರಿಕಾ ಭವನದಲ್ಲಿ ಇಂದು ಬೆಳಿಗ್ಗೆ ನಡೆದ ಸಭೆಯಲ್ಲಿ ಈ ಮೂವರನ್ನು ಆಯ್ಕೆ ಮಾಡಲಾಗಿದೆ.
ಸಂಘದ ಉಪಾಧ್ಯಕ್ಷರಾಗಿ ರಂಜಿತ್, ಭರತೇಶ್, ಹಿತಕರ್ ಜೈನ್, ಸುಭಾಷ್
ಕಾರ್ಯದರ್ಶಿಗಳಾಗಿ ನಾಗರಾಜ್ ಶೆಣೈ, ಲಿಯಾಕತ್, ರಾಘವೇಂದ್ರ, ಸಹ ಕಾರ್ಯದರ್ಶಿಗಳಾಗಿ ಜಿ. ಚಂದ್ರಶೇಖರ, ಹೆಚ್.ಎನ್. ಮಂಜುನಾಥ್ ಆಯ್ಕೆ ಯಾಗಿದ್ದಾರೆ.
ಈ ಸಂದರ್ಭದಲ್ಲಿ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಅಧ್ಯಕ್ಷ ಹಾಗೂ ಸಂಘದ ಹಿರಿಯ ನಿರ್ದೇಶಕರಾದ ಎನ್. ಮಂಜುನಾಥ್ ಕಾರ್ಯದರ್ಶಿ ನಾಗರಾಜ್ ನೇರಿಗೆ, ಖಜಾಂಚಿ ಜೇಸುದಾಸ್ ಅವರು ನೂತನ ಪದಾಧಿಕಾರಿಗಳಿಗೆ ಅಭಿನಂದಿಸಿ, ಸಂಘದ ಮೂಲಕ ಶಿವಮೊಗ್ಗ ಜಿಲ್ಲಾ ಪತ್ರಿಕೆಗಳ ಒಳಿತಿಗೆ ಕಾರ್ಯನಿರ್ವಹಿಸಲು ನಿರ್ವಹಿಸಲು ಕೋರಿದರು.
ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಪ್ರಕಟವಾಗುವ ದಿನಪತ್ರಿಕೆಗಳ 25ಕ್ಕೂ ಹೆಚ್ಚು ಸಂಪಾದಕರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...