Thursday, March 19, 2026
Thursday, March 19, 2026

Eshwaravana Charitable Trust ಅನ್ನ ದಾಸೋಹ ಸೇವೆ ಮಾಡಬೇಕು: ಡಾ. ಧನಂಜಯ ಸರ್ಜಿ

Date:

Eshwaravana Charitable Trust ಮನುಷ್ಯ ಜೀವನದಲ್ಲಿ ಸದಾ ಚಿಂತೆಯಲ್ಲೇ ಮುಳುಗಿರುತ್ತಾನೆ. ಅದರಿಂದ ಹೊರಗೆ ಬರಬೇಕಾದರೆ ಅನ್ನದಾಸೋಹದಂತಹ ಸೇವೆಯನ್ನು ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಹೇಳಿದ್ದಾರೆ.

ಅವರು ಇಂದು ಮೆಗ್ಗಾನ್ ಬೋಧನಾ ಆಸ್ಪತ್ರೆಯ ಆವರಣದಲ್ಲಿ ನವ್ಯಶ್ರೀ ಈಶ್ವರವನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರೋಗಿಗಳು ಮತ್ತು ಸಂಬಂಧಿಕರಿಗೆ ವಾರದಲ್ಲಿ ಎರಡು ದಿನ ಅನ್ನದಾನ ಮಾಡುತ್ತಿದ್ದು, ಇಂದು ನವ್ಯಶ್ರೀ ಅನ್ನದಾನ-100ರ ಸಂಭ್ರಮ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.

ಅನ್ನವನ್ನು ಯಾರೂ ಕೂಡ ಚಲ್ಲಿಬಾರದು. ಪ್ರಪಂಚದಲ್ಲಿ ಏಳುಬಿಲಿಯನ್ ಜನರಿದ್ದು, 64 ಕೋಟಿ ಜನ ಹಸಿವಿನಿಂದ ಬಳಲುತ್ತಿದ್ದಾರೆ. ನಮ್ಮ ದೇಶದಲ್ಲಿ ಒಂದು ವರ್ಷಕ್ಕೆ ಒಂದು ಕೋಟಿಗೂ ಹೆಚ್ಚು ಸಮಾರಂಭಗಳು ನಡೆಯುತ್ತಿದ್ದು, ಸುಮಾರು ಶೇ.20ರಷ್ಟು ಆಹಾರ ವ್ಯರ್ಥವಾಗುತ್ತಿದೆ. 7.82 ಕೋಟಿ ಟನ್ ಆಹಾರ ಚಲ್ಲಲಾಗುತ್ತಿದೆ. ಅದರ ಮೌಲ್ಯ ಅಂದಾಜು 1 ಲಕ್ಷ ಕೋಟಿ ರೂ. ಆಗುತ್ತದೆ. ನಮ್ಮ ಸರ್ಕಾರದ ಬಜೆಟ್‌ನ 25ರಷ್ಟು ಆಹಾರ ಪೋಲಾಗುತ್ತಿದ್ದು, ಇದನ್ನು ಉಳಿಸಿದಲ್ಲಿ ಪ್ರತಿನಿತ್ಯ 26 ಕೋಟಿ ಜನರಿಗೆ ಅನ್ನದಾನ ಮಾಡಬಹುದಾಗಿದೆ. ಜೀವನದಲ್ಲಿ ಬೇಕು ಬೇಕು ಎನ್ನುವವರೇ ಬಹಳಮಂದಿ ಇದ್ದಾರೆ. ಬೇಡ ಬೇಡ ಎನ್ನುವವರು ನಮಗೆ ಬೇಕಾಗಿದ್ದಾರೆ. ಭಗವಂತನ ಅಕೌಂಟ್‌ನಲ್ಲಿ ನೀವು ಎಷ್ಟು ಸತ್ಕರ‍್ಯದ ಫಲಗಳನ್ನು ಠೇವಣಿ ಇಟ್ಟಿದ್ದೀರಿ ಎಂಬುದು ಮುಖ್ಯವಾಗುತ್ತದೆ. ಹಸಿದವರಿಗೆ ಅನ್ನ ಕೊಡುವುದರಲ್ಲಿ ಸಿಗುವ ಆತ್ಮತೃಪ್ತಿ ಬೇರೆ ಎಲ್ಲಿಯೂ ಸಿಗುವುದಿಲ್ಲ ಎಂದರು.

ಮೆಗ್ಗಾನ್ ಆವರಣದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮ ನಿರಂತರವಾಗಿ ನಡೆಯಲು ಮತ್ತು ರೋಗಿಗಳ ಸಂಬAಧಿಕರಿಗೆ ಉಳಿದುಕೊಳ್ಳಲು ಶೌಚಾಲಯ ಹಾಗೂ ಶಾಶ್ವತ ವಿಶ್ರಾಂತಿ ಹಾಲ್ ನಿರ್ಮಾಣಕ್ಕೆ ಎಲ್ಲಾ ಜನಪ್ರತಿನಿಧಿಗಳ ಒತ್ತಡದಿಂದಾಗಿ 5 ಕೋಟಿ ರೂ. ಅನುದಾನ ಸರ್ಕಾರದಿಂದ ಮಂಜೂರಾಗಿದ್ದು, 2 ಕೋಟಿ ರೂ. ಬಿಡುಗಡೆಯಾಗಿದೆ. ನವ್ಯಶ್ರೀ ಸಂಸ್ಥೆ ಹಸಿರು ಮತ್ತು ಹಸಿವು ಎರಡೂ ಸಿದ್ಧಾಂತಗಳೊAದಿಗೆ ಕಾರ್ಯಾಚರಿಸುತ್ತಿರುವುದು ಶ್ಲಾಘನೀಯ ಎಂದರು.

Eshwaravana Charitable Trust ಯೋಗ ಗುರು ರುದ್ರಾರಾಧ್ಯ ಮಾತನಾಡಿ, ವಿದ್ಯಾದಾನಕ್ಕಿಂತ ಅನ್ನದಾನವೇ ಶ್ರೇಷ್ಠ. ಶರೀರಕ್ಕೆ ಅನ್ನ ಸಿಕ್ಕಿದಾಗ ಮಾತ್ರ ಶಕ್ತಿ ಬರುತ್ತದೆ. ಶಕ್ತಿ ಇದ್ದಾಗ ಮಾತ್ರ ಜ್ಞಾನ ಪಡೆಯಲು ಸಾಧ್ಯ. ನಿವೃತ್ತ ಎಸ್ಪಿ ನಾಗರಾಜ್ ಅವರು 93ನೇ ಇಸವಿಯಲ್ಲಿ ನಮಗೆಲ್ಲರಿಗೂ ಪೊಲೀಸ್ ಕೆಲಸ ನೀಡಿದ್ದಕ್ಕೆ ಕೃತಜ್ಞತೆಯನ್ನು ವ್ಯಕ್ತಪಡಿಸುವ ಸಲುವಾಗಿ ನಿವೃತ್ತ ಪೊಲೀಸ್ ಅಧಿಕಾರಿಗಳೆಲ್ಲರೂ ಸೇರಿ ಇಂದಿನ ಅನ್ನದಾನದ ವ್ಯವಸ್ಥೆ ಮಾಡಿದ್ದಾರೆ. ನಿರಂತರವಾಗಿ ಅವರು ಕೈಜೋಡಿಸುತ್ತಿದ್ದಾರೆ. ಹಿರಿಯ ಅಧಿಕಾರಿಯೊಬ್ಬರ ಉಪಕಾರ ಸ್ಮರಣೆಗಾಗಿ ಈ ಕಾರ್ಯ ಹಮ್ಮಿಕೊಂಡಿದ್ದಾರೆ. ಇದು ಎಲ್ಲರಿಗೂ ಮಾದರಿಯಾಗಲಿ ಎಂದರು.

ಈ ಸಂದರ್ಭದಲ್ಲಿ ರೋಟರಿ ಗರ‍್ನರ್ ಕೆ.ಪಿ. ಶೆಟ್ಟಿ, ನವ್ಯಶ್ರೀ ನಾಗೇಶ್, ಶ್ರೀಕಾಂತ್, ಶರಣ್ಯ ಮಂಜುನಾಥ್, ರೋ.ವಿಜಯಕುಮಾರ್, ಆರ್‌ಎಸ್‌ಎಸ್ ಮುಖಂಡ ರಂಗನಾಥ್, ನಾಗರಾಜ್ ಶೆಟ್ಟರ್, ಸಂತೋಷ್ ಎಲಿಗಾರ್, ನವ್ಯಶ್ರೀ ಈಶ್ವರವನ ಚಾರಿಟೇಬಲ್ ಟ್ರಸ್ಟ್ನ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. ಸುಮಾರು 350ಕ್ಕೂ ಹೆಚ್ಚು ಜನರಿಗೆ ಅನ್ನದಾನ ವ್ಯವಸ್ಥೆ ಕಲ್ಪಿಸಲಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...