Sunday, May 17, 2026
Sunday, May 17, 2026

CM Siddharamaiah ರೈತ ಮುಖಂಡರೊಡನೆ ಸರ್ಕಾರದ ಚರ್ಚೆ, ಕಬ್ಬು ಟನ್ ಒಂದಕ್ಕೆ ₹3300 ಘೋಷಣೆ

Date:

ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತಂತೆ ಸಂಬಂಧಪಟ್ಟ ರೈತ ಮುಖಂಡರುಗಳೊಂದಿಗೆ ಸಭೆ ನಡೆಯಿತು.

ರಾಜ್ಯ ಸರ್ಕಾರ ತನ್ನ ಬೊಕ್ಕಸದಿಂದ ಪ್ರತಿ ಟನ್ ಗೆ 50 ರೂ. ಹಾಗೂ ಸಕ್ಕರೆ ಕಾರ್ಖಾನೆಗಳಿಂದ ಹೆಚ್ಚುವರಿ ಯಾಗಿ 50 ರೂ. ಕೊಡಿಸುವ ಭರವಸೆಯೊಂದಿಗೆ ಹೋರಾಟ ಕೈಬಿಡುವಂತೆ ರೈತರಲ್ಲಿ ಮನವಿ ಮಾಡಿದೆ.

ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಬದ್ಧವಾಗಿದೆ. ಸಂಕಷ್ಟದಲ್ಲಿರುವ ರೈತರ ನೆರವಿಗೆ ಮುಂದಾಗಬೇಕೆಂದು ಎಲ್ಲಾ ಸಕ್ಕರೆ ಕಾರ್ಖಾನೆ ಮಾಲೀಕರನ್ನು ಕೋರಲಾಗಿದೆ. ರೈತರು ಪ್ರತಿಭಟನೆ ಹಿಂಪಡೆದು ಕಾನೂನು ವ್ಯವಸ್ಥೆ ಸುಗಮವಾಗಲು ಸಹಕರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ.

CM Siddharamaiah ಈ ಸಭೆಯಲ್ಲಿ, ಸಚಿವರಾದ ಎಚ್.ಕೆ ಪಾಟೀಲ, ಶಿವಾನಂದ ಪಾಟೀಲ, ಎಂ.ಬಿ. ಪಾಟೀಲ, ಸತೀಶ್ ಜಾರಕಿಹೊಳಿ, ಆರ್.ಬಿ. ತಿಮ್ಮಾಪುರ, ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ರೈ ಮುಖಂಡರುಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...