2024ರ ಅಕ್ಟೋಬರ್ 22 ರಂದು ಶಿವಮೊಗ್ಗ -ಭದ್ರಾವತಿ ಮಾರ್ಗದ ಬಸ್ನಲ್ಲಿ ಪಯಣಿಸುತ್ತಿದ್ದ ಭದ್ರಾವತಿ ತಾಲೂಕು ಬೈಪಾಸ್ ರಸ್ತೆ, ಹಳೇ ಭಂಡಾರಹಳ್ಳಿ ಗ್ರಾಮ ವಾಸಿ ಕು. ಹೇಮಾವತಿ ಬಿನ್ ರಮೇಶ್ ಎಂಬ 19 ವರ್ಷದ ಯುವತಿಯು ಬಸ್ನಿಂದ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.
ನ. 10 ರಂದು ಹೇಮಾವತಿ ತಂದೆ ರಮೇಶ್ ಎಂಬುವವರಿಗೆ ಅಪಘಾತ ಪರಿಹಾರ ನಿಧಿಯಿಂದ ರೂ. 10 ಲಕ್ಷಗಳ ಚೆಕ್ನ್ನು ಕ.ರಾ.ರ.ಸಾ.ನಿಗಮದ ಶಿವಮೊಗ್ಗ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ನವೀನ್ ಟಿ.ಆರ್. ಇವರು ಹಸ್ತಾಂತರ ಮಾಡಿದ್ದಾರೆ ಎಂದು ಕರಾರಾಸಾನಿಗಮದ ಪ್ರಕಟಣೆ ತಿಳಿಸಿದೆ.
ಬಸ್ ನಿಂದ ಬಿದ್ದು ಸಾವನಪ್ಪಿದ ಹೇಮಾವತಿ ಕುಟುಂಬಸ್ಥರಿಗೆ ಸಾರಿಗೆ ಸಂಸ್ಥೆ ವತಿಯಿಂದ ಪರಿಹಾರ ಚೆಕ್ ವಿತರಣೆ
Date:
