Friday, March 20, 2026
Friday, March 20, 2026

ಸಾಮೂಹಿಕ ಮಾಧ್ಯಮಗಳು ಸಾಮಾಜಿಕ ಸುವ್ಯವಸ್ಥೆಗೂ ಸಾಧನವಾಗಬೇಕು- ಡಾ.ಹೆಚ್.ಬಿ.ಮಂಜುನಾಥ್.

Date:

ಸಮೂಹ ಮಾಧ್ಯಮಗಳು ಕೇವಲ ಮಾಹಿತಿ ಮನರಂಜನೆಗೆ ಬಳಕೆಯಾಗದೆ ಸಾಮಾಜಿಕ ಸುವ್ಯವಸ್ಥೆಗೆ ಸಾಧನವಾಗಬೇಕು ಎಂದು ಹಿರಿಯ ಪತ್ರಕರ್ತ ಡಾ. ಎಚ್ ಬಿ ಮಂಜುನಾಥ ಆಶಯ ವ್ಯಕ್ತಪಡಿಸಿದರು.

ದಾವಣಗೆರೆ ಜಿಲ್ಲೆಯ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಸಮಾಜಶಾಸ್ತ್ರ ಉಪನ್ಯಾಸಕರುಗಳಿಗಾಗಿ ಏರ್ಪಾಡಾಗಿದ್ದ ಪುನಶ್ಚೇತನ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ‘ಸಾಮಾಜಿಕ ವ್ಯವಸ್ಥೆಯಲ್ಲಿ ಸಮೂಹ ಮಾಧ್ಯಮಗಳ ಪಾತ್ರ’ ಎಂಬ ವಿಷಯವಾಗಿ ಮಾತನಾಡುತ್ತಾ ವ್ಯಕ್ತಿ ಗುಂಪು ಹಾಗೂ ಸಂಸ್ಥೆಗಳ ನಡುವಿನ ರಚನಾತ್ಮಕ ಸಂಬಂಧಗಳಿಂದ ಆಗುವ ಜಾಲಕ್ಕೆ ಸಮೂಹ ಮಾಧ್ಯಮಗಳು ಪೂರಕವಾಗಿ ಸ್ಪಂದಿಸಬೇಕಿದೆ, ಇದು ಸಮಾಜದ ಸುಸಂಘಟಿತ ಕಾರ್ಯನಿರ್ವಹಣೆಗೆ ಅವಶ್ಯ, ಈ ಪ್ರಕ್ರಿಯೆಯಲ್ಲಿ ಅನೂಚಾನವಾಗಿ ಬಂದ ನಂಬಿಕೆಗಳು ರೂಢಿಗಳಿಗೆ ಘಾಸಿಯಾಗದಂತೆ ನಾಗರೀಕತೆ ಸಂಸ್ಕೃತಿ ಹಾಗೂ ಸಂಸ್ಕಾರಗಳ ಮಹತ್ವವನ್ನು ಮನದಟ್ಟು ಮಾಡುವ ಮೂಲಕ ಕುಟುಂಬ ಸಮುದಾಯ ಊರು ಗ್ರಾಮ ನಗರ ದೇಶ ಪ್ರಪಂಚ ಹಂತದವರೆಗೂ ವ್ಯವಸ್ಥೆಯ ಸುಧಾರಣೆಯಲ್ಲಿ ಸಮೂಹ ಮಾಧ್ಯಮಗಳ ಬಳಕೆಯಾಗಬೇಕಿದೆ ಎಂಬುದನ್ನು ಅಂಕಿ ಅಂಶ ಹಾಗೂ ಉದಾಹರಣೆಗಳ ಸಹಿತ ವಿವರಿಸುತ್ತಾ ಈ ನಿಟ್ಟಿನಲ್ಲಿ ಸಮಾಜ ಶಾಸ್ತ್ರ ಉಪನ್ಯಾಸಕರುಗಳು ವಿಶೇಷವಾಗಿ ಸ್ವಯಂ ಸಿದ್ಧಗೊಂಡು ಪಠ್ಯೇತರವಾಗಿ ವಿದ್ಯಾರ್ಥಿಗಳಿಗೆ ತಿಳಿಸುವ ಕುರಿತಾಗಿಯೂ ವಿವರಿಸಿದರು.

ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಣ ಇಲಾಖೆ ವತಿಯಿಂದ ಏರ್ಪಾಡಾಗಿದ್ದ ಪುನಶ್ಚೇತನ ಕಾರ್ಯಾಗಾರದ ಸಂಚಾಲಕ ಜಿ ಎಂ ಸಂಗಮೇಶ್ವರಪ್ಪ ಉಪಸ್ಥಿತಿಯಲ್ಲಿ ಉಪನ್ಯಾಸಕ ಪಾಲಾಕ್ಷಿ ಸ್ವಾಗತ ಕೋರುತ್ತಾ ಪರಿಚಯ ಭಾಷಣ ಮಾಡಿದರು. ನಗರ ಹಾಗೂ ಜಿಲ್ಲೆಯ ಎಲ್ಲ ತಾಲೂಕುಗಳಿಂದ ಆಗಮಿಸಿದ್ದ ಸರ್ಕಾರಿ ಪದವಿಪೂರ್ವ ಕಾಲೇಜು ಸಮಾಜಶಾಸ್ತ್ರ ಉಪನ್ಯಾಸಕರುಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...