Friday, December 5, 2025
Friday, December 5, 2025

shahi ಶಾಹಿ ಎಕ್ಸ್ಪೋರ್ಟ್ಸ್ ನಿಂದ ವಿವಿಧ ಸಾಮಾಜಿಕ ಸೇವಾ ಚಟುವಟಿಕೆ

Date:

shahi ಶಾಹಿ ಎಕ್ಸ್ಪೋರ್ಟ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಶಿಕಾರಿಪುರ ಸಾರ್ವಜನಿಕ ತಾಲ್ಲೂಕು ಆಸ್ಪತ್ರೆಗೆ ಇಪ್ಪತ್ತು ಲಕ್ಷ ರೂ. ಮೌಲ್ಯದ ಸಿ ಬಿ ನ್ಯಾಟ್ ಯಂತ್ರ ಕೊಡುವ ಮೂಲಕ ಸಾರ್ವಜನಿಕ ಸೇವೆಗೆ ಕೊಡುಗೆ ನೀಡಿದೆ.
ಶಾಹಿ ಎಕ್ಸ್ಪೋರ್ಟ್ ಪ್ರೈವೇಟ್ ಲಿಮಿಟೆಡ್ ಅವರ ಸಿ ಎಸ್ ಆರ್ ಯೋಜನೆಯಡಿ ಈ ಕೊಡುಗೆ ನೀಡಲಾಗಿದೆ.
ಪ್ರದಾನ ಮಂತ್ರಿ ಅವರ ಟಿ ಬಿ ಮುಕ್ತ ಭಾರತ ಎಂಬ ಹೆಗ್ಗಳಿಕೆಗೆ ಪೂರಕವಾಗಿ, ಶಾಹಿ ಎಕ್ಸ್ಪೋರ್ಟ್ ಪ್ರೈವೇಟ್ ಲಿಮಿಟೆಡ್ ಅವರ ಸಿ ಎಸ್ ಎಸ್ ಯೋಜನೆ ಅಡಿಯಲ್ಲಿ 20ಲಕ್ಷ ರೂಪಾಯಿ ಮೌಲ್ಯ ದ ಸಿ ಬಿ ನ್ಯಾಟ್ ಯಂತ್ರ ವನ್ನು ಹಸ್ತಾಂತರ ಮಾಡಲಾಯಿತು. ಈ ಯಂತ್ರವು ಅಲ್ಪ ಅವಧಿ ಯಲ್ಲಿ ನಿರ್ದಿಷ್ಟವಾದ ಫಲಿತಾಂಶದೊಂದಿಗೆ, ಏಕಕಾಲಕ್ಕೆ 4 ಜನರ ಸ್ಯಾಂಪಲ್ ಪರೀಕ್ಷೆ ಮಾಡಬಹುದಾಗಿದೆ. ಕಡಿಮೆ ಸಮಯದಲ್ಲಿ ಪರೀಕ್ಷೆಯ ಮೂಲಕ, ರೋಗದ ಹರಡುವಿಕೆಯನ್ನು ತಡೆಯಬಹುದಾಗಿದೆ.
ಹಸ್ತಾಂತರ ಸಮಾರಂಭ ಉದ್ಘಾಟಿಸಿದ ಸಂಸದರಾದ ಬಿ.ವೈ. ರಾಘವೇಂದ್ರ ಅವರು ಶಾಹೀ ಸೇವಾ ಕಾರ್ಯವನ್ನು ಪ್ರಶಂಸಿಸಿದರು.
ಶಾಹಿಯ ಆಡಳಿತ ವಿಭಾಗದ ಜಿ.ಎಂ. ಲಕ್ಷಣ ಧರ್ಮಟ್ಟಿ, ಮಾನವ ಸಂಪನ್ಮೂಲ ವಿಭಾಗದ ಜಿ.ಎಂ. ಬೀನೇಶ್ ಕುಮಾರ, ಮಾನವ ಸಂಪನ್ಮೂಲ ವಿಭಾಗದ ಎಜಿಎಂ ಪ್ರಶಾಂತ್ ಎಂ ಆರ್. ವಿಭಾಗ, ಹಾಗೂ ಸಿ ಎಸ್ ಆರ್ ತಂಡದ ನಾಗಯ್ಯ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು, ಡಿಟಿಓ ಶ್ರೀ ನಟರಾಜು, ಎಎಂ. ಓ ಅರುಣ್ ಕುಮಾರ್ ಹಾಜರಿದ್ದರು.

ಕೇಂದ್ರ ಕಾರಾಗೃಹದಲ್ಲಿ ಹೊಲಿಗೆ ತರಬೇತಿ:

shahi ಶಾಹಿ ಎಕ್ಸ್ ಪೋರ್ಟ್ ಸಂಸ್ಥೆ ವತಿಯಿಂದ ಶಿವಮೊಗ್ಗದಲ್ಲಿರುವ ಕೇಂದ್ರ ಕಾರಾಗೃಹದ ಬಂಧಿ ನಿವಾಸಿಗಳಿಗೆ ಹೊಲಿಗೆ ತರಬೇತಿ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸಮಾರೋಪ ಸಮಾರಂಭ ಹಾಗೂ ಅರ್ಹತಾ ಪ್ರಮಾಣ ಪತ್ರ ವಿತರಣಾ ಸಮಾರಂಭ ನಡೆಯಿತು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಎಂ.ಎಸ್. ಅವರು ಕೌಶಲ್ಯದ ಕಲಿಕೆ ಸಾವಲಂಬನೆಗೆ ದಾರಿದೀಪವಾಗಲಿದೆ ಎಂದರು.
ಪ್ರಮಾಣ ಪತ್ರ ವಿತರಿಸಿದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಬಂಧಿ ನಿವಾಸಿಗಳಿಗೆ ಶುಭ ಕೋರಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಬಲ್ಕಿಶ್ ಭಾನು, ಶಾಹಿ ಸಂಸ್ಥೆಯ ಸೀನಿಯರ್ ಮ್ಯಾನೇಜರ್ ಕವಿತಾ ಪ್ರಸಾದ್, ಆಡಳಿತ ವಿಭಾಗದ ಜಿಎಂ ಲಕ್ಷ್ಮಣ ಧರ್ಮಟ್ಟಿ, ಕೇಂದ್ರ ಕಾರಾಗೃಹದ ಮುಖ್ಯ ಅಧ್ಯಕ್ಷಕ ಡಾ. ಬಿ ರಂಗನಾಥ್, ಶಿವಮೊಗ್ಗ ಡಿವೈಎಸ್ಪಿ ಅಂಜನಪ್ಪ ಕಾರಾಗೃಹದ ಸಹಾಯಕ ಅಧೀಕ್ಷಕಿ ಪ್ರೀತಿ ಉಪಸ್ಥಿತರಿದ್ದರು
ಈ ಸಂದರ್ಭದಲ್ಲಿ ತರಬೇತಿ ಅಧಿಕಾರಿಗಳಾದ ನಾಗರಾಜ್ ಕಿರಣ್ ಅವರನ್ನು ಅಭಿನಂಧಿಸಲಾಯಿತು. ತಿಮ್ಮಪ್ಪ ಪ್ರಾರ್ಥಿಸಿದರು, ತಿಪ್ಪೇಸ್ವಾಮಿ ಹಾಗೂ ಶಿವಾನಾಯ್ಕ ಅವರು ತರಬೇತಿ ಅವಧಿಯ ಅನುಭವಗಳನ್ನು ಹಂಚಿಕೊಂಡರು. ಸಂಸ್ಥೆ ಶಿಕ್ಷಕ ಗೋಪಾಲಕೃಷ್ಣ ಅವರು ಸ್ವಾಗತಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...