Wednesday, September 16, 2026
Wednesday, September 16, 2026

B. Y. Raghavendra ಶಿವಮೊಗ್ಗದ ಅಕ್ಕಮಹಾದೇವಿ ವೃತ್ತ ಮೇಲ್ಸೇತುವೆ ಸನಿಹದ ಪ್ರದೇಶಗಳ ಅಭಿವೃದ್ಧಿ ಕಾಮಗಾರಿಗಳಿಗೆ ಸಂಸದರಿಂದ ಚಾಲನೆ

Date:

B. Y. Raghavendra ಶಿವಮೊಗ್ಗದ ಅಕ್ಕಮಹಾದೇವಿ ವೃತ್ತ (ಉಷಾ ನರ್ಸಿಂಗ್ ಹೋಮ್) ಫ್ಲೈಓವರ್ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ!!!

ಶಿವಮೊಗ್ಗದ ಅಕ್ಕಮಹಾದೇವಿ ವೃತ್ತ (ಉಷಾ ನರ್ಸಿಂಗ್ ಹೋಮ್) ಮೇಲ್ಸೇತುವೆ ಸುತ್ತಮುತ್ತಲಿನ ಪ್ರದೇಶಗಳ ಸಮಗ್ರ ಅಭಿವೃದ್ಧಿ ಮತ್ತು ಸುಧಾರಣಾ ಕಾಮಗಾರಿಗಳಿಗೆ ಇಂದು ಶಂಕುಸ್ಥಾಪನೆ ನೆರವೇರಿಸಲಾಯಿತು. ಈ ಕಾರ್ಯಕ್ರಮದ ಮೂಲಕ ನಗರ ಮೂಲಸೌಕರ್ಯ ವಿಕಾಸಕ್ಕೆ ಮತ್ತೊಂದು ಮಹತ್ವದ ಹೆಜ್ಜೆಯನ್ನಿಡಲಾಗಿದೆ.

ಈ ಯೋಜನೆ ಶಿವಮೊಗ್ಗ ಮಹಾನಗರ ಪಾಲಿಕೆ ಮತ್ತು ಭಾರತೀಯ ರೈಲ್ವೆ ಇಲಾಖೆಯ ಜಂಟಿ ಆಶ್ರಯದಲ್ಲಿ ಕೈಗೊಳ್ಳಲಾಗುತ್ತಿದ್ದು, ಪ್ರದೇಶದ ಸಂಚಾರ ವ್ಯವಸ್ಥೆ, ಸುರಕ್ಷತೆ ಮತ್ತು ಮೂಲಸೌಕರ್ಯ ಸುಧಾರಣೆಗೆ ಮಹತ್ತರ ಕೊಡುಗೆಯನ್ನು ನೀಡಲಿದೆ.

ಯೋಜನೆಯ ಪ್ರಮುಖ ಕಾರ್ಯಗಳು:

  • ರಸ್ತೆ ಬದಿಯ ಒಳಚರಂಡಿ ನಿರ್ಮಾಣ — ಮಳೆಗಾಲದ ನೀರು ನಿಲ್ಲದಂತೆ ಪರಿಣಾಮಕಾರಿ ವ್ಯವಸ್ಥೆ
  • ಚರಂಡಿಗಳ ಮೇಲೆ ಡೆಕ್ ಸ್ಲಾಬ್ ಅಳವಡಿಕೆ
  • ಸಾರ್ವಜನಿಕರ ರಕ್ಷಣೆಗೆ ಸುರಕ್ಷತಾ ತಡೆಗೋಡೆ ನಿರ್ಮಾಣ
  • ರಾತ್ರಿ ಸಂಚಾರ ಸುಗಮತೆಗೆ ಹೊಸ ಬೀದಿ ದೀಪಗಳ ಅಳವಡಿಕೆ
  • ರಸ್ತೆಗಳ ನವೀಕರಣ ಮತ್ತು ಸುಧಾರಣೆ

B. Y. Raghavendra ಈ ಕಾಮಗಾರಿಗಳು ಪೂರ್ಣಗೊಂಡ ಬಳಿಕ ಸಂಚಾರ ದಟ್ಟಣೆ ಕಡಿತ, ಮಳೆಗಾಲದಲ್ಲಿ ಜಲಾವೃತ ಸಮಸ್ಯೆಗೆ ಶಾಶ್ವತ ಪರಿಹಾರ ಮತ್ತು ಸಾರ್ವಜನಿಕರ ಸುರಕ್ಷತೆಗೆ ದೃಢ ಬಲ ನೀಡಲಿವೆ.

ಈ ಸಂದರ್ಭದಲ್ಲಿ ಶಿವಮೊಗ್ಗ ನಗರ ಶಾಸಕರಾದ ಶ್ರೀ ಎಸ್. ಎನ್. ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ್ ಸರ್ಜಿ, ಮಹಾನಗರ ಪಾಲಿಕೆ ಆಯುಕ್ತರಾದ ಶ್ರೀ ಮಾಯಣ್ಣ ಗೌಡ, ಮಾಜಿ ಸೂಡಾ ಅಧ್ಯಕ್ಷರಾದ ಶ್ರೀ ನಾಗರಾಜ್ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...