S.N.Chennabasappa ಶಿವಮೊಗ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ಸಂಖ್ಯೆ 30ರ ಸೀಗೆಹಟ್ಟಿಯಲ್ಲಿನ ಕೆಂಚರಾಯನ ಬೀದಿಯಲ್ಲಿ ಯುಜಿಡಿ (Underground Drainage) ಕಾಮಗಾರಿಗೆ ಶಾಸಕರಾದ ಎಸ್. ಎನ್. ಚನ್ನಬಸಪ್ಪ ಅವರು ಗುದ್ದಲಿ ಪೂಜೆಯನ್ನು ನೆರವೇರಿಸಿದರು. ಈ ಯುಜಿಡಿ ಯೋಜನೆಯು ಪ್ರದೇಶದಲ್ಲಿನ ನೈರ್ಮಲ್ಯ ಮತ್ತು ಸಾರ್ವಜನಿಕ ಆರೋಗ್ಯವನ್ನು ಸುಧಾರಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆ.
S.N.Chennabasappa ಈ ಸಂದರ್ಭದಲ್ಲಿ, ಬಿಜೆಪಿ ನಗರ ಅಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಶ್ರೀ ಶಂಕರ್ ಗನ್ನಿ, ಬಿಜೆಪಿಯ ಸ್ಥಳೀಯ ಪ್ರಮುಖರು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಬಡಾವಣೆಯ ನಾಗರಿಕರು ಉಪಸ್ಥಿತರಿದ್ದರು.
