Saturday, April 4, 2026
Saturday, April 4, 2026

Minority Welfare Department ವಿಶೇಷ ಪ್ರೋತ್ಸಾಹ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Date:

Minority Welfare Department 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಬಿ.ಇಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ಯೋಜನೆಯಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ನ್ಯಾಷನಲ್ ಕೌನ್ಸಿಲ್ ಫಾರ್ ಟೀಚರ್ ಎಜುಕೇಷನ್ ನಿಂದ ಮಾನ್ಯತೆ ಪಡೆದಿರುವ ಸರ್ಕಾರಿ/ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿ ಬಿ.ಇಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) ವಿದ್ಯಾರ್ಥಿಗಳಿಗೆ ರೂ.25000/-ಗಳ ವಿಶೇಷ ಪ್ರೋತ್ಸಾಹಧನ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ವಿಶೇಷ ಪ್ರೋತ್ಸಾಹಧನವನ್ನು ಸಂಬಂಧಪಟ್ಟ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಡಿಬಿಟಿ ಮುಖಾಂತರ ಜಮಾ ಮಾಡಲಾಗುವುದು.
Minority Welfare Department ಅರ್ಜಿ ಸಲ್ಲಿಸಲು ದಿ: 31.12.2025 ಕಡೆಯ ದಿನಾಂಕವಾಗಿದ್ದು, ಅರ್ಜಿಯನ್ನು sevasindhu.karnataka.gov.in ಮೂಲಕ ಸಲ್ಲಿಸಿ ನಂತರ ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರ ಮೊಹರು ಮತ್ತು ಸಹಿ/ದೃಢೀಕರಣ ಪಡೆದು, ಅರ್ಜಿಯೊಂದಿಗೆ ನಿವಾಸಿ ದೃಢೀಕರಣ ಪತ್ರ. ಜಾತಿ ಮತ್ತು ಆದಾಯ ಪ್ರಮಾಣ ಪತ್ರ. ಹಿಂದಿನ ವರ್ಷದ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಶುಲ್ಕ ರಸೀದಿ, ಆಧಾರ್ ಕಾರ್ಡ್, ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಪಿ.ಯು.ಸಿ ಅಂಕಪಟ್ಟಿ, ವ್ಯಾಸಂಗ ದೃಢೀಕರಣ ಪತ್ರ, ಬ್ಯಾಂಕ್ ಪಾಸ್‌ಬುಕ್ ಜೆರಾಕ್ಸ್ ಪ್ರತಿಳಿಗೆ ಪ್ರಾಂಶುಪಾಲರಿಂದ ದೃಢೀಕರಿಸಿ ಜಿಲ್ಲಾ ಅಧಿಕಾರಿಗಳ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, 1ನೇ ಮಹಡಿ, ಸತ್ಯಶ್ರೀ ಆರ್ಕೆಡ್, 5ನೇ ಪ್ಯಾರಲಲ್ ರಸ್ತೆ, ದುರ್ಗಿಗುಡಿ, ಶಿವಮೊಗ್ಗ ಇಲ್ಲಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08182-220206 ಗೆ ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನಗರದ ಜನತೆಗೆ ಕುಡಿಯುವ ನೀರಿನ ಸೌಲಭ್ಯದಲ್ಲಿ ಯಾವುದೇ ವ್ಯತ್ಯಯವಾಗಬಾರದು- ಎಸ್.ಎನ್.ಚನ್ನಬಸಪ್ಪ

S.N. Channabasappa ಕುಡಿಯುವ ನೀರಿನ ಪಂಪ್ ಹೌಸ್‌ಗೆ ಶಾಸಕ ಎಸ್.ಎನ್. ಚನ್ನಬಸಪ್ಪ...

Klive Special Article ಶ್ರೀಬಿಷ್ಟಪ್ಪಯ್ಯನವರು

ಲೇ: ಪ್ರಸಾದ್ ಶ್ರೀವತ್ಸ. Klive Special Article ಭಾರತವೆಂದರೆ ಅದು ಕೇವಲ ದೇಶವಲ್ಲ ಅದೆಷ್ಟೋ...

B.Y. Vijayendra ದಾವಣಗೆರೆ ಚುನಾವಣೆ: ಬಿಜೆಪಿ ಅಭ್ಯರ್ಥಿಗೇ ಗೆಲುವು- ಬಿ.ವೈ.ವಿಜಯೇಂದ್ರ.

B.Y. Vijayendra  ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾಧ್ಯಮ ಮಿತ್ರರೊಂದಿಗೆ...

Drinking water supply ಗಮನಿಸಿ!.ಏಪ್ರಿಲ್ 4 & 5 ರಂದುಶಿವಮೊಗ್ಗ ನಗರದಲ್ಲಿ ಹಲವೆಡೆ ನೀರು ಸರಬರಾಜು ವ್ಯತ್ಯಯ.

Drinking water supply ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ಮಾಡುವ...