Thursday, June 18, 2026
Thursday, June 18, 2026

B.Y. Raghavendra ವಾತಾವರಣ ಆಧಾರಿತ ಬೆಳೆವಿಮೆ ಹಣ ನೀಡಲು ಮತ್ತು ಅಡಿಕೆಗೆ ಬಂದಿರುವ ಎಲೆ ಚುಕ್ಕೆ ರೋಗ ಸಮಸ್ಯೆ ಬಗ್ಗೆ ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಬಿ.ವೈ.ರಾಘವೇಂದ್ರ

Date:

B.Y. Raghavendra ಸಂಸತ್ತಿನಲ್ಲಿ ಶೂನ್ಯ ಕಾಲ ಉಲ್ಲೇಖದ ಮೂಲಕ ಮಲೆನಾಡು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಅಡಿಕೆ ರೈತರು ಎದುರಿಸುತ್ತಿರುವ ಗಂಭೀರ ಸಂಕಷ್ಟವನ್ನು ಸಂಸದರಾದ ಬಿ.ವೈ.ರಾಘವೇಂದ್ರ ಅವರು ಪ್ರಸ್ತಾಪಿಸಿದ್ದಾರೆ.

ಹಳದಿ ಎಲೆ ರೋಗ (YLD) ಹಾಗೂ ಎಲೆ ಚುಕ್ಕೆ ರೋಗ (LSD) ಎಂಬ ಭೀಕರ ರೋಗಗಳು, ಜೊತೆಗೆ ಸತತವಾಗಿ ನಾಲ್ಕು ತಿಂಗಳು ಸುರಿದ ಭಾರೀ ಮಳೆಯಿಂದಾಗಿ ಅಡಿಕೆ ತೋಟಗಳಲ್ಲಿ ಭಾರೀ ನಷ್ಟವಾಗಿದೆ. ಪರಿಣಾಮವಾಗಿ, ಅನೇಕ ರೈತರು ಈ ವರ್ಷ ನಿರೀಕ್ಷಿಸಿದ್ದ ಫಸಲಿನ ಕೇವಲ ನಾಲ್ಕನೇ ಭಾಗವಷ್ಟೇ ದೊರೆಯುವ ಸ್ಥಿತಿ ಎದುರಿಸುತ್ತಿದ್ದಾರೆ.
ಅದೇ ವೇಳೆ, ಬೆಳೆ ವಿಮೆ ಯೋಜನೆಯಾದ WBCIS ಅನುಷ್ಠಾನದಲ್ಲಿ ಕಂಡುಬರುವ ಗಂಭೀರ ತೊಂದರೆಗಳನ್ನು ಸಹ ನಾನು ಉಲ್ಲೇಖಿಸಿದೆ. ಅನೇಕ ಮಳೆಮಾಪನ ಕೇಂದ್ರಗಳು ಕಾರ್ಯನಿರ್ವಹಿಸದೇ ಇರುವುದು, ಮೂರು ವರ್ಷಕ್ಕೊಮ್ಮೆ ಮಾತ್ರ ಪರಿಷ್ಕಾರಗೊಳ್ಳುವ ತಾಂತ್ರಿಕ ಮಾನದಂಡಗಳು, ಮತ್ತು 20 ರಿಂದ 45 ಕಿಮೀ ದೂರದಲ್ಲಿರುವ ಬ್ಯಾಕಪ್ ಮಳೆಮಾಪನ ಕೇಂದ್ರಗಳ ತಡವಾದ ಅಧಿಸೂಚನೆ–ಇವುಗಳ ಪರಿಣಾಮವಾಗಿ ಹಲವಾರು ಅರ್ಹ ರೈತರು ಯೋಗ್ಯ ಪರಿಹಾರವನ್ನೇ ಪಡೆಯದ ಸ್ಥಿತಿ ಉಂಟಾಗಿದೆ ಎಂದಿದ್ದಾರೆ.

B.Y. Raghavendra ಈ ಹಿನ್ನೆಲೆಯಲ್ಲಿ, ಸಮೀಪದ ಹಾಗೂ ಹವಾಮಾನಕ್ಕೆ ತಕ್ಕಂತೆ ನಿಖರ ಮಾಹಿತಿಯನ್ನು ಹೊಂದಿರುವ ಕೇಂದ್ರಗಳ ಆಧಾರದ ಮೇಲೆ ರೈತರಿಗೆ 2024–25ರ ಪರಿಹಾರವನ್ನು ಮರು ಲೆಕ್ಕ ಹಾಕುವಂತೆ, ಮಳೆ SMS ಸೇವೆಯನ್ನು ಪುನರ್‌ಸ್ಥಾಪಿಸುವಂತೆ, ರೋಗ ನಿಯಂತ್ರಣಕ್ಕೆ ತಕ್ಷಣದ ಕ್ರಮ ಕೈಗೊಳ್ಳುವಂತೆ ಹಾಗೂ ಅಡಿಕೆ ಬೆಳೆ ನಷ್ಟಕ್ಕೆ ವಿಶೇಷ ಪರಿಹಾರ ಪ್ಯಾಕೇಜ್‌ ನೀಡುವ ಸಾಧ್ಯತೆಯನ್ನು ಪರಿಶೀಲಿಸುವಂತೆ ಕೇಂದ್ರ ಸರ್ಕಾರವನ್ನು ನಾನು ಮನವಿ ಮಾಡಿದ್ದೇನೆ. ನಮ್ಮ ಅನ್ನದಾತರಿಗೆ ನ್ಯಾಯ, ರಕ್ಷಣೆ ಮತ್ತು ಸಮಯೋಚಿತ ಸಹಾಯ ದೊರೆಯುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...