Monday, February 2, 2026
Monday, February 2, 2026

Rangayana Shivamogga ಡಿಸೆಂಬರ್ 5, ಶಿವಮೊಗ್ಗದ ರಂಗಾಯಣದಲ್ಲಿ “ನಮ್ಮೊಳಗೊಬ್ಬ ಗಾಂಧಿ” ನಾಟಕ ಪ್ರದರ್ಶನ

Date:

Rangayana Shivamogga ರಂಗಾಯಣ, ಶಿವಮೊಗ್ಗ ರೆಪರ್ಟರಿ ಕಲಾವಿದರ ಪ್ರಸ್ತುತಿಯಲ್ಲಿ ಡಿ.5 ರಂದು ಶಿವಮೊಗ್ಗದ ಅಶೋಕನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ಸಂಜೆ 6.30ಕ್ಕೆ ಡಾ.ಡಿ.ಎಸ್.ಚೌಗಲೆ ರಚನೆಯ ಶ್ರೀ ಚಿದಂಬರ ರಾವ್ ಜಂಬೆ ನಿರ್ದೇಶನದ ‘ನಮ್ಮೊಳಗೊಬ್ಬ ಗಾಂಧಿ’ ನಾಟಕ ಪ್ರದರ್ಶನವನ್ನು ಆಯೋಜಿಸಲಾಗಿದೆ.
ಈ ನಾಟಕವನ್ನು ಸಂಸ್ಕೃತಿ ಚಿಂತಕರಾದ ಪ್ರೊ. ರಾಜೇಂದ್ರ ಚೆನ್ನಿ, ಶಿವಮೊಗ್ಗ ಇವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಮೊಗ್ಗದ ರಂಗಾಯಣದ ನಿರ್ದೇಶಕರಾದ ಶ್ರೀ ಪ್ರಸನ್ನ ಡಿ ಸಾಗರ ಇವರು ವಹಿಸಲಿದ್ದಾರೆ. 2025 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶಿವಮೊಗ್ಗ ಜಿಲ್ಲೆಯ ಕೋಣಂದೂರು ಲಿಂಗಪ್ಪ, ಪ್ರೊ. ರಾಜೇಂದ್ರ ಚೆನ್ನಿ ಮತ್ತು ಶ್ರೀ ಟಾಕಪ್ಪ ಇವರನ್ನು ರಂಗಾಯಣದಿಂದ ಗೌರವಿಸಲಾಗುವುದು. Rangayana Shivamogga ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಡಾ.ಡಿ.ಎಸ್. ಚೌಗಲೆ ನಾಟಕಕಾರರು, ಬೆಳಗಾವಿ ಮತ್ತು ಶ್ರೀ. ಡಿಂಗ್ರಿ ನರೇಶ್, ರಂಗಕರ್ಮಿಗಳು ಮತ್ತು ಸದಸ್ಯರು, ರಂಗಸಮಾಜ ಇವರು ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಶಿವಮೊಗ್ಗ ರಂಗಾಯಣ ಆಡಳಿತಾಧಿಕಾರಿಗಳಾದ ಡಾ. ಶೈಲಜಾ ಎ.ಸಿ. ಇವರು ಉಪಸ್ಥಿತರಿರುವರು.
ಈ ನಾಟಕಕ್ಕೆ ಪ್ರವೇಶ ಉಚಿತವಾಗಿದ್ದು, ರಂಗಾಸಕ್ತರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬಂದು ವೀಕ್ಷಿಸಬೇಕೆಂದು ಶಿವಮೊಗ್ಗ ರಂಗಾಯಣದ ನಿರ್ದೇಶಕರಾದ ಪ್ರಸನ್ನ ಡಿ. ಸಾಗರ ಮತ್ತು ಆಡಳಿತಾಧಿಕಾರಿಗಳಾದ ಡಾ.ಶೈಲಜಾ ಎ.ಸಿ. ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...