Monday, March 30, 2026
Monday, March 30, 2026

District Chamber of Commerce and Industry ಡಿಸೆಂಬರ್ 15ಕ್ಕೆ ಆಳ್ವಾಸ್ ನುಡಿಸಿರಿ ಸಾಂಸ್ಕೃತಿಕ ವೈಭವ

Date:

District Chamber of Commerce and Industry ಆಳ್ವಾಸ್ ನುಡಿಸಿರಿ ಸಾಂಸ್ಕೃತಿಕ ವೈಭವ 2025ರ ಅದ್ಭುತ ಕಾರ್ಯಕ್ರಮದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಹೇಳಿದರು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿ, ಆಳ್ವಾಸ್ ನುಡಿಸಿರಿ ವಿರಾಸತ್ ಶಿವಮೊಗ್ಗ ಜಿಲ್ಲಾ ಘಟಕದಿಂದ ಆಯೋಜಿಸಿರುವ ಆಳ್ವಾಸ್ ನುಡಿಸಿರಿ ಸಾಂಸ್ಕೃತಿಕ ವೈಭವ 2025 ಕಾರ್ಯಕ್ರಮ ಯಶಸ್ವಿಗೊಳಿಸಲು ಎಲ್ಲರ ಸಹಕಾರ ಅಗತ್ಯ ಎಂದು ತಿಳಿಸಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಮಾತನಾಡಿ, ಡಿಸೆಂಬರ್ 15ರಂದು ಸಂಜೆ 5.30ರಿಂದ ಅಲ್ಲಮ ಪ್ರಭು ಬಯಲು ಫ್ರೀಡಂ ಪಾರ್ಕ್ ನಲ್ಲಿ ಕಲೆ, ಸಂಗೀತ, ನೃತ್ಯ, ಯಕ್ಷಗಾನ ಸಂಸ್ಕೃತಿ ಅನಾವರಣಗೊಳಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 300 ವಿದ್ಯಾರ್ಥಿ ಕಲಾವಿದರಿಂದ 3 ಗಂಟೆ ಆಳ್ವಾಸ್ ಸಾಂಸ್ಕೃತಿಕ ವೈಭವ ನಡೆಯಲಿದೆ ಎಂದು ಹೇಳಿದರು.
District Chamber of Commerce and Industry ಪದವೀಧರ ಸಹಕಾರ ಸಂಘದ ಅಧ್ಯಕ್ಷ ಎಸ್.ಪಿ.ದಿನೇಶ್, ರಾಜ್ಯ ಸರ್ಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್ ಕುಮಾರ್, ಶ್ರೀ ಬಸವೇಶ್ವರ ಸ್ವಾಮಿ ಪಟ್ಟಣ ಪತ್ತಿನ ಸಹಕಾರ ಸಂಘ ಅಧ್ಯಕ್ಷ ಬಳ್ಳೆಕೆರೆ ಸಂತೋಷ್, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯ್ ಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಸಹ ಕಾರ್ಯದರ್ಶಿ ಕೆ.ಎಸ್.ಸುಕುಮಾರ್, ಖಜಾಂಚಿ ಆರ್.ಮನೋಹರ್ ನಿರ್ದೇಶಕರಾದ ಡಾ. ಲಕ್ಷ್ಮೀದೇವಿ ಗೋಪಿನಾಥ್, ಬಿ.ಸುರೇಶ್ ಕುಮಾರ್, ಪ್ರದೀಪ್ ವಿ ಯೆಲಿ, ವಸಂತ್ ಹೋಬಳಿದಾರ್, ಗಣೇಶ್ ಎಂ ಅಂಗಡಿ, ಜಿ.ವಿ.ಕಿರಣ್ ಕುಮಾರ್, ರವಿಪ್ರಕಾಶ್ ಜೆನ್ನಿ, ಪಿ.ರುದ್ರೇಶ್, ಕೆ.ಬಿ.ಶಿವಕುಮಾರ್, ಕೆ.ಎನ್.ರಾಜಶೇಖರ್, ಸಿ.ಎ.ಶರತ್, ಎಸ್.ಎಸ್.ಉದಯ್ ಕುಮಾರ್, ವಿನೋದ್ ಕುಮಾರ್, ಎಸ್.ಪಿ.ಶಂಕರ್ ಹಾಗೂ ಮಾಜಿ ಅಧ್ಯಕ್ಷರಾದ ಎನ್.ಗೋಪಿನಾಥ್, ಅಶ್ವಥ್ ನಾರಾಯಣ್ ಶೆಟ್ಟಿ, ಜೆ.ಆರ್.ವಾಸುದೇವ್ ಹಾಗು ಸದಸ್ಯರಾದ ಮಧುಮಿತಾ ಇತರರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಎಲ್ಲರೂ ಸಹಬಾಳ್ವೆ,ಸಹಕಾರ ಸೇವಾ ಮನೋಭಾವನೆಯಿಂದ ಬಾಳಬೇಕೆಂಬುದೇ ಮಹಾವೀರರ ಸಂದೇಶ- ಕೆ. ರಂಗನಾಥ್

ನಮ್ಮೂರ ಬಳಗದ ವತಿಯಿಂದ ಭಾರತೀಯ ಧಾರ್ಮಿಕ ಸುಧಾರಕರು ಮತ್ತು ಆಧ್ಯಾತ್ಮಿಕ ನಾಯಕರು...

Adichunchabagiri Education Trust ದೇಹ ಆರೋಗ್ಯವಾಗಿದ್ದರೆ, ದೇಶವೂ ಆರೋಗ್ಯ- ಶ್ರೀನಾದಮಾಯಾನಂದನಾಥಶ್ರೀ

ದೇಹದ ಆರೋಗ್ಯ ಉತ್ತಮವಾಗಿದ್ದರೆ, ದೇಶದ ಆರೋಗ್ಯವೂ ಚೆನ್ನಾಗಿರುತ್ತದೆ ಎಂದು ಶ್ರೀ ಆದಿ...

Klive Special Article ಮರೆಯಲಾಗದ ಮಾನವೀಯ ಸಂದೇಶ ಸಾರಿದ ಶ್ರೀಮಹಾವೀರ. ...

Klive Special Article ಜನ ಸಂಸ್ಕೃತಿಗಳು ನಿಂತ ನೀರಾದಾಗಲೆಲ್ಲಾ ಅದನ್ನು...