Sunday, May 17, 2026
Sunday, May 17, 2026

ಉರುಳು ಹಾಕಿ ಪ್ರಾಣಿ ಬಲಿ ಪಡೆಯುತ್ತಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಅರಣ್ಯ ಸಚಿವರು ಸೂಚನೆ

Date:

ಉರುಳು ಹಾಕಿ ಪ್ರಾಣಿ ಬಲಿ ಪಡೆಯುತ್ತಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ವನ್ಯಜೀವಿ ವಿಭಾಗಗಳಲ್ಲಿ ಕಳೆದ 7 ತಿಂಗಳುಗಳಲ್ಲಿ 11 ಕರಡಿ ಮತ್ತು 4 ಚಿರತೆಗಳು ಅಕ್ರಮವಾಗಿ ಅಳವಡಿಸಿದ್ದ ಉರುಳಿಗೆ ಸಿಲುಕಿ ಸಾವನಪ್ಪಿವೆ. ಈ ಪೈಕಿ 3 ಕರಡಿ ಹಾಗೂ 2 ಚಿರತೆಗಳು ಮೃತಪಟ್ಟಿರುವ ವಿಚಾರ ವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು
ಆನೆ ಕಂದಕಗಳ ಬಳಿ ಬೆಳೆದ ಹುಲ್ಲಿನ ನಡುವೆ ಉರುಳು ಅಳವಡಿಸಿ ಕಳ್ಳಬೇಟೆ ಪ್ರಯತ್ನ ನಡೆಯುತ್ತಿದ್ದು ಇದರಿಂದ ವನ್ಯಜೀವಿಗಳು ಸಂಕಷ್ಟಕ್ಕೆ ಸಿಲುಕುತ್ತಿವೆ ಎಂಬ ಮಾಹಿತಿ ಲಭ್ಯವಾಗಿದೆ. ಇದರ ಜೊತೆಗೆ ಭದ್ರಾವತಿ, ಚಿಕ್ಕಮಗಳೂರು ಭಾಗದಲ್ಲೂ ಈ ರೀತಿಯ ಸಮಸ್ಯೆ ಇರುವ ಬಗ್ಗೆ ದೂರುಗಳು ಬಂದಿವೆ. ಉರುಳು ಮತ್ತು ತಂತಿ ಬೇಲಿಗೆ ಅಕ್ರಮವಾಗಿ ಹರಿಸುವ ವಿದ್ಯುತ್‌ ಸ್ಪರ್ಶದಿಂದ ವನ್ಯಜೀವಿಗಳು ಸಾವಿಗೀಡಾಗುತ್ತಿರುವ ವಿಭಾಗಗಳಲ್ಲಿ ಒಂದು ವಿಶೇಷ ತಂಡ ರಚಿಸಿ ಕಾಡಿನಂಚಿನ ಗ್ರಾಮದ ಜನರಿಗೆ ಜಾಗೃತಿ ಮೂಡಿಸಿ, ಉರುಳುಗಳನ್ನು ತೆರವು ಮಾಡಿಸಲು. ಗಸ್ತು ಹೆಚ್ಚಿಸಿ ಉರುಳು ಮತ್ತು ತಂತಿ ಬೇಲಿಗೆ ಅಕ್ರಮ ವಿದ್ಯುತ್ ಸಂಪರ್ಕ ಅಳವಡಿಕೆಯ ಬಗ್ಗೆ ಪರಿಶೀಲನೆ ನಡೆಸಲು ಹಾಗೂ ವನ್ಯಜೀವಿಗಳ ಸಾವಿಗೆ ಕಾರಣರಾದವರ ವಿರುದ್ಧ ಪ್ರಕರಣ ದಾಖಲಿಸುಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...