Tuesday, December 16, 2025
Tuesday, December 16, 2025

B.Y. Raghavendra ಕೇಂದ್ರ ಶಿಕ್ಷಣ ಸಚಿವರನ್ನ ಭೇಟಿ ಮಾಡಿದ ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ

Date:

B.Y. Raghavendra ಕೇಂದ್ರ ಶಿಕ್ಷಣ ಸಚಿವರಾದ ಮಾನ್ಯ ಶ್ರೀ ಧರ್ಮೇಂದ್ರ ಪ್ರಧಾನ ಜೀ ಅವರನ್ನುಶಿವಮೊಗ್ಗ ಸಂಸದರಾದ ಬಿ ವೈ ರಾಘವೇಂದ್ರ ಅವರು ಭೇಟಿ ಮಾಡಿ , ಶಿವಮೊಗ್ಗ ಮತ್ತು ರಾಜ್ಯದ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚಿಸಿದರು.

ಕುವೆಂಪು ವಿಶ್ವವಿದ್ಯಾಲಯದ ಸುಮಾರು 3,000 ಗ್ರಾಮೀಣ ಮತ್ತು ಓಬಿಸಿ ವಿದ್ಯಾರ್ಥಿಗಳಿಗೆ ಗಂಭೀರ ವಸತಿ ಸಮಸ್ಯೆ ಎದುರಾಗುತ್ತಿರುವುದರಿಂದ, ಓಬಿಸಿ ವಿದ್ಯಾರ್ಥಿಗಳ ವಸತಿ ಗೃಹ ನಿರ್ಮಾಣಕ್ಕೆ ಯುಜಿಸಿ ವಿಶೇಷ ಅನುದಾನ ಮಂಜೂರು ಮಾಡುವಂತೆ ವಿನಂತಿಸಿದರು.

ಶಿವಮೊಗ್ಗದ ಕೇಂದ್ರ ವಿದ್ಯಾಲಯದಲ್ಲಿ ಎಲ್ಲಾ ತರಗತಿಗಳಿಗೆ ಎರಡು ಹೆಚ್ಚುವರಿ ಸೆಕ್ಷನ್‌ಗಳನ್ನು ಅನುಮೋದಿಸಲಾಗಿದೆ; ಇದಕ್ಕಾಗಿ ಶಾಶ್ವತ ಕಟ್ಟಡಗಳು ಮತ್ತು ಹೊಸ ಮೂಲಸೌಕರ್ಯ ಒದಗಿಸಲು ಸಹಕಾರ ಕೋರಿ ಮನವಿ ಮಾಡಿದರು.

ಕರ್ನಾಟಕದ ಏಕೈಕ ಸಂಸ್ಕೃತ ಭಾಷಾಭಿಮಾನಿ ಗ್ರಾಮವಾದ ಮತ್ತೂರು–ಹೊಸಳ್ಳಿಯಲ್ಲಿ ರಾಷ್ಟ್ರೀಯ ಆದರ್ಶ ವೇದ ವಿದ್ಯಾಲಯ ಸ್ಥಾಪನೆಗೆ ದೀರ್ಘಕಾಲದಿಂದ ಬಾಕಿ ಉಳಿದಿರುವ ಪ್ರಸ್ತಾವನೆಯನ್ನು ಅನುಮೋದಿಸಲು ಬೇಡಿಕೆ ಇಟ್ಟು, 2009 ರ ಪೂರ್ವದಲ್ಲಿ ಎಂ.ಫಿಲ್ ಪದವಿ ಪಡೆದ, 10–25 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ Guest Lecturers‌ರ ಪದವಿಯನ್ನು NET ಸಮಾನವಾಗಿ ಪರಿಗಣಿಸಲು, ಮಹಾರಾಷ್ಟ್ರ ಸರ್ಕಾರದ ಉದಾಹರಣೆಯನ್ನು ಅನುಸರಿಸಿ ಮಾನ್ಯತೆ ನೀಡುವಂತೆ ಕೇಳಿದರು.

PM POSHAN ಯೋಜನೆಯ ಅಡಿಯಲ್ಲಿ ಕೆಲಸ ಮಾಡುವ 25 ಲಕ್ಷಕ್ಕೂ ಹೆಚ್ಚು ಕುಕ್-ಕಮ್-ಹೆಲ್ಪರ್ಸ್‌ಗಳಿಗೆ 2009 ರಿಂದ ಬದಲಾಗದ ಕೇವಲ 600 ರೂ ಕೇಂದ್ರದ ಹಂಚಿಕೆ ದೊರೆಯುತ್ತಿರುವುದರಿಂದ, ಸಂಭಾವನೆ ಹೆಚ್ಚಿಸುವುದು, ಆರೋಗ್ಯ ವಿಮೆ, ಸಾಮಾಜಿಕ ಭದ್ರತೆ ಮತ್ತು ಕಾನೂನುಬದ್ಧ ಹುದ್ದೆ ನೀಡುವಂತೆ ವಿನಂತಿಸಿದರು.

B.Y. Raghavendra ಇತ್ತೀಚಿನ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಸೇವೆಯಲ್ಲಿ ಇದ್ದ ಶಿಕ್ಷಕರಿಗೆ TET ಕಡ್ಡಾಯವಾಗಿರುವುದರಿಂದ ಉಂಟಾದ ಆತಂಕಕ್ಕೆ ಪರಿಹಾರವಾಗಿ, TET ನಿಯಮ ಜಾರಿಗಿಂತ ಮೊದಲೇ ನೇಮಕಗೊಂಡ ಶಿಕ್ಷಕರಿಗೆ ವಿನಾಯಿತಿ ನೀಡುವಂತೆ ಮನವಿ ಮಾಡಿದರು..

ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಶಿಕ್ಷಣ ಸಂಸ್ಥೆಗಳ ಹಿತಕ್ಕಾಗಿ ತಿಳಿಸಿದ ಎಲ್ಲಾ ವಿಷಯಗಳನ್ನು ಸಂವೇದನಾಶೀಲವಾಗಿ ಆಲಿಸಿ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ ಮಾನ್ಯ ಧರ್ಮೇಂದ್ರ ಪ್ರಧಾನ ಜೀ ಅವರಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 16 & 17 ಶಿವಮೊಗ್ಗದ ರವೀಂದ್ರನಗರಕ್ಕೆ ವಿದ್ಯುತ್ ಸರಬರಾಜು ಇಲ್ಲ, ಮೆಸ್ಕಾಂ ಪ್ರಕಟಣೆ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್...

Shamanur Shivashankarappa ವಿಧಾನ ಸಭಾ ಕಲಾಪ: ಅಗಲಿದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

Shamanur Shivashankarappa ಎಲ್ಲ ರಾಜಕಾರಣಿಗಳೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಶಾಮನೂರು ಶಿವಶಂಕರಪ್ಪ...

Dr. G.S. Shivarudrappa ರಾಷ್ಟ್ರಕವಿ ಜಿ.ಎಸ್.ಎಸ್. ರಚಿತ ಕವನಗಳ ಆನ್ ಲೈನ್ ಗಾಯನ ಸ್ಪರ್ಧೆ

Dr. G.S. Shivarudrappa ಶಿವಮೊಗ್ಗದಲ್ಲಿ ರಾಷ್ಟ್ರಕವಿ ಡಾ. ಜಿ.ಎಸ್ . ಶಿವರುದ್ರಪ್ಪ...

ಸಿಗಂದೂರು ಸೇತುವೆ: ಆತ್ಮಹತ್ಯೆಗೆ ಯತ್ನಿಸಿದಾತನ ಜೀವವುಳಿಸಿದ ಇಂಜಿನಿಯರ್ ಮಾತಿನ ಕೌಶಲ

ಮೈಸೂರಿನ ವ್ಯಕ್ತಿಯೊಬ್ಬರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂಜಿನಿಯರ್ ಒಬ್ಬರ...