Sunday, August 2, 2026
Sunday, August 2, 2026

Roller Skating ಶಿವಮೊಗ್ಗದ ಈರ್ವರು ರಾಷ್ಟ್ರಮಟ್ಟದ ಸ್ಕೇಟಿಂಗ್ ಪಂದ್ಯಾವಳಿಗೆ ಆಯ್ಕೆ

Date:

Roller Skating ಇಲ್ಲಿನ ನಮ್ಮ ಶಿವಮೊಗ್ಗ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ನ ಇಬ್ಬರು ಕ್ರೀಡಾಪಟುಗಳು ಕರ್ನಾಟಕ ಶಿಕ್ಷಣ ಇಲಾಖೆ ನಡೆಸಿದ ರಾಜ್ಯಮಟ್ಟದ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕ ಪಡೆಯುವ ಮೂಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು, ಜಿಲ್ಲೆಗೆ ಕೀರ್ತಿ ತಂದ ಕ್ರೀಡಾಪಟುಗಳನ್ನು ಸಂಸ್ಥೆ ಅಭಿನಂದಿಸಿದೆ.
ರಾಜ್ಯಮಟ್ಟದ ಸ್ಕೇಟಿಂಗ್ ಕ್ರೀಡಾ ಪಂದ್ಯಾವಳಿಯು ಬೆಂಗಳೂರಿನ ಗಿಡ್ಡೇನಹಳ್ಳಿ ಸಿಟಿ ಸ್ಟೇಟರ್ಸ್ ಅರೆನಾದಲ್ಲಿ ನಡೆದ ರಾಜ್ಯಮಟ್ಟದ ಪಂದ್ಯಾವಳಿಯಲ್ಲಿ 2000, 1000 ಹಾಗೂ 500 ಮೀಟರ್ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ನಮ್ಮ ಶಿವಮೊಗ್ಗ ಸಂಸ್ಥೆಯ ಕ್ರೀಡಾಪಟುಗಳು ಮೂರು ಚಿನ್ನದ ಪದಕ ಪಡೆದಿದ್ದು, ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಶಿವಮೊಗ್ಗದ ಜುಲ್ಪಿಕರ್ ಹಾಗೂ ನಾಜಿಮಾ ದಂಪತಿಗಳ ಮಗನಾಗಿರುವ ಪೈಸಲ್ ಸಾಧನೆಗೆ ಅಭಿನಂದನೆ ಸಲ್ಲಿಸಲಾಗಿದೆ.
ಅಂತೆಯೇ ಎರಡು ಬೆಳ್ಳಿ ಪದಕ ಪಡೆದ ನಿಖಿತಾ ಎನ್. ಉಪಾಧ್ಯ ಅವರು 500 ಮೀ ರೇಸ್ ಹಾಗೂ 3000 ಮೀಟರ್ ರೋಡ್ ರೇಸ್ ಸ್ಪರ್ದೆಯಲ್ಲಿ ದ್ವಿತೀಯ ಬಹುಮಾನ ಪಡೆದಿದ್ದಾರೆ. ಜಿ. ಆರ್. ನಾಗರಾಜ ಹಾಗು ಅಶ್ವಿನಿ ಹೆಚ್. ವಿ. ದಂಪತಿಗಳ ಪುತ್ರಿ ನಿಖಿತಾ ಸಾಧನೆಗೆ ಅಭಿನಂದಿಸಲಾಗಿದೆ.
Roller Skating ಈ ಇಬ್ಬರು ಕ್ರೀಡಾಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು, ಇವರು ನಮ್ಮ ಶಿವಮೊಗ್ಗ ಸ್ಕೇಟಿಂಗ್ ಸಂಸ್ಥೆಯ ವಿಶ್ವಾಸ ಹಾಗೂ ಅತೀಶ್ ಅವರ ಬಳಿ ತರಬೇತಿ ಪಡೆಯುತ್ತಿದ್ದರು.
ಜಿಲ್ಲೆಗೆ ಕೀರ್ತಿ ತಂದ ಕ್ರೀಡಾಪಟುಗಳನ್ನು ನಮ್ಮ ಶಿವಮೊಗ್ಗ ಸಂಸ್ಥೆಯ ಅಧ್ಯಕ್ಷ ಮೋಹನ್ ಕುಮಾರ್, ಪ್ರಧಾನ ಕಾರ್ಯದರ್ಶಿ ಎಂ ರವಿ ಹಾಗೂ ಸಂಸ್ಥೆಯ ಎಸ್ ಕೆ ಗಜೇಂದ್ರ ಸ್ವಾಮಿ, ಉಮಾ ರವಿ, ಯುವಜನ ಮತ್ತು ಕ್ರೀಡಾಧಿಕಾರಿ ರೇಖ್ಯಾನಾಯ್ಕ್ ಹಾಗೂ ಸಂಸ್ಥೆಯ ಪದಾಧಿಕಾರಿಗಳು, ಪೋಷಕರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...