Thursday, March 19, 2026
Thursday, March 19, 2026

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Date:

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ
ಸಂಘ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇವರ ಸಹಯೋಗದಲ್ಲಿ ಡಿ.೧೫ರಂದು ಸಂಜೆ
೫.೩೦ಕ್ಕೆ ಅಲ್ಲಮಪ್ರಭು ಬಯಲಿ (ಫ್ರೀಡಂ ಪಾರ್ಕ್)ನಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವದ
ಮೂಲಕ ನಮ್ಮ ಶ್ರೇಷ್ಟ ಪರಂಪರೆ ಮತ್ತು ಸಾಂಸ್ಕೃತಿಕ ಅನಾವರಣಗೊಳ್ಳಲಿದೆ.

ಆಳ್ವಾಸ್ ಸಾಂಸ್ಕೃತಿಕ ವೈಭವದಿಂದದು ನಮ್ಮ ದೇಶದ ಸಾಂಸ್ಕೃತಿಕ ಸೊಗಡನ್ನು
ಬಿಂಬಿಸುವ ಹಾಗೂ ಈ ಮೂಲಕ ಕಲೆ, ಸಂಗೀತ, ನೃತ್ಯ, ಯಕ್ಷಗಾನ ಸಂಸ್ಕೃತಿಯನ್ನು
ಯುವ ಪೀಳಿಗೆಗೆ ಪರಿಚಯಿಸುವ ಕಾರ್ಯಕ್ರಮವಾಗಿದ್ದು, ಸುಮಾg ೫೦೦ ವಿದ್ಯಾರ್ಥಿ-
ವಿದ್ಯಾರ್ಥಿನಿಯರು ಸತತ ಮೂರು ಗಂಟೆಗಳ ಕಾಲ ವೈವಿಧ್ಯಮಯ ಕಾರ್ಯಕ್ರಮಗಳನ್ನು
ನಡೆಸಿಕೊಡಲಿದ್ದಾರೆ.

Alvas Cultural Fest ಇದೊಂದು ಅಪರೂಪದ ಹಾಗೂ ಮಾಗಿಯ ಛಳಿಯಲ್ಲಿ ಬೆಚ್ಚಗಿನ ಕಾರ್ಯಕ್ರಮ.
ವಿಶೇಷವೆಂದರೆ, ಈ ಕಾರ್ಯಕ್ರಮಕ್ಕೆ ನಗರದ ಮೂವತ್ತಕ್ಕೂ ಹೆಚ್ಚು ಸಾಮಾಜಿಕ ಮತ್ತು ಸಂಸ್ಕೃತಿ ಸಂಘ ಸಂಸ್ಥೆಗಳು ಕೈ ಜೋಡಿಸಿವೆ.
ಈಗಾಗಲೇ ನಗರದ ಶಾಲಾ ಕಾಲೇಜುಗಳು, ಆಸ್ಪತ್ರೆಗಳು, ಸಂಘ
ಸಂಸ್ಥೆಗಳು, ವ್ಯಾಪಾರಸ್ಥರುಗಳಿಗೆ ವೈಯಕ್ತಿಕವಾಗಿ ಆಹ್ವಾನ ನೀಡಲಾಗಿದೆ. ಸರಿ ಸುಮಾರು
ಮೂವತ್ತು ಸಾವಿರಕ್ಕೂ ಹೆಚ್ಚು ಪ್ರೇಕ್ಷಕರು ಸೇರುವ ನಿರೀಕ್ಷೆಯಿದ್ದು, ಆಹ್ವಾನಿತ ಗಣ್ಯರಿಗೆ,
ಸಾರ್ವಜನಿಕರಿಗೆ
ಆಸನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ನಮ್ಮ ಪರಂಪರೆಯ ಶ್ರೇಷ್ಟ ಕಲಾ ಪ್ರಕಾರಗಳಾದ, ಶಾಸ್ತ್ರೀಯ ನೃತ್ಯ, ಬಡಗುತಿಟ್ಟು ಯಕ್ಷಗಾನ-ಶ್ರೀರಾಮ ಪಟ್ಟಾಭಿಷೇಕ, ಗುಜರಾತಿನ
ಗಾರ್ಭ ಮತ್ತು ದಾಂಡಿಯಾ, ಮಣಿಪುರಿ ಸ್ಟಿಕ್ ಡ್ಯಾನ್ಸ್, ಮಲ್ಲಕಂಬ ಹಾಗೂ ರೋಪ್
ಕಸರತ್ತು, ಸೃಜನಾತ್ಮಕ ನೃತ್ಯ, ಡೊಳ್ಳು ಕುಣಿತ ಕಥಕ್ ನೃತ್ಯ-ವರ್ಷಧಾರೆ, ಪುರುಲಿಯಾ
ತೆಂಕು ತಿಟ್ಟು ಯಕ್ಷಗಾನ-ಅಗ್ರಪೂಜೆ, ಬೊಂಬೆ ವಿನೋದಾವಳಿಗಳು ತೆರೆದುಕೊಳ್ಳಲಿದೆ.
ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಪ್ರವೇಶ ಉಚಿತವಾಗಿದ್ದು, ಕೇವಲ ಹತ್ತಿಪ್ಪತು ್ತ
ನಿಮಿಷಗಳ ಸಭಾ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ವೈಭವದ ಅನಾವರಣವಾಗಲಿದೆ.
ಕಾರ್ಯಕ್ರಮ ಸರಿಯಾಗಿ ೫.೩೦ಕ್ಕೆ ಆರಂಭವಾಗಲಿದ್ದು, ನಂತರ ೦೬ ಗಂಟೆಯಿAದ ೦೯
ಗಂಟೆಯವರೆಗೆ ನಿರಂತರವಾಗಿ ಸಾಂಸ್ಕೃತಿಕ ವೈಭವದ ಅನಾವರಣಗೊಳ್ಳಲಿದೆ.
ಸಾರ್ವಜನಿಕರು ೧೦ ನಿಮಿಷ ಮುಂಚಿತವಾಗಿಯೇ ಬಂದು ಆಸೀನರಾಗುವಂತೆ
ವಿನಂತಿಸಲಾಗಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ
ತಿಂಡಿ-ತಿನಿಸುಗಳ ಸ್ಪಾಲ್‌ಗಳನ್ನು ತೆರೆಯಲಾಗಿದೆ.
ಈಗಾಗಲೇ ಹಲವು ಬಾರಿ ನಗರದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮಗಳು
ನಡೆದಿವೆ. ಆದರೆ ಈಗಿನಷ್ಟು ಇಷ್ಟು ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿರುವುದು ಇದೇ ಮೊದಲು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...