Monday, May 4, 2026
Monday, May 4, 2026

CM Siddharamaiah ಹಿರಿಯ ನಾಯಕನ ಯುಗಾಂತ್ಯ- ಮುಖ್ಯಮಂತ್ರಿ ಸಿದ್ಧರಾಮಯ್ಯ

Date:

CM Siddharamaiah ಹಿರಿಯ ನಾಯಕರು, ಮಾಜಿ ಸಚಿವರು, ಜನಪ್ರಿಯ ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರು, ಅತ್ಯಂತ ಆತ್ಮೀಯರೂ ಆಗಿದ್ದ ಶ್ರೀ ಶಾಮನೂರು ಶಿವಶಂಕರಪ್ಪನವರ ನಿಧನ ಸುದ್ದಿ ಕೇಳಿ ಅತೀವ ದುಃಖವಾಗಿದೆ ಎಂದು ಸಿಎಂ ಸಿದ್ದರಾಮಯ್ಯನವರು ಸಂತಾಪ ಸೂಚಿಸಿದ್ದಾರೆ.

ಅವರ ನಿಧನದಿಂದ ನಾಡು ಒಬ್ಬ ಹಿರಿಯ ರಾಜಕಾರಣಿಯನ್ನು ಕಳೆದುಕೊಂಡಿದೆ. ವಿಶೇಷವಾಗಿ ವೀರಶೈವ ಲಿಂಗಾಯತ ಸಮಾಜದ ಹಿರಿಯ ನಾಯಕನ ಯುಗಾಂತ್ಯವಾಗಿದೆ ಎಂದಿದ್ದಾರೆ.

ಶಿಕ್ಷಣ, ಅರೋಗ್ಯ ಮತ್ತು ಸಮಾಜ ಸೇವೆಯ ಮೂಲಕ ಲಕ್ಷಾಂತರ ಜನರ ಬದುಕನ್ನು ಬೆಳಗಿದ್ದ, ಶಾಮನೂರು ಶಿವಶಂಕರಪ್ಪನವರ ದಶಕಗಳ ಸುದೀರ್ಘ ಸೇವೆ, ಜನಪರ ಕಾಳಜಿ ಮತ್ತು ಸಾಧನೆಗಳು ಮಾದರಿಯಾಗಿದೆ. ಅವರ ಅಗಲಿಕೆಯಿಂದ ರಾಜ್ಯ ರಾಜಕಾರಣಕ್ಕೆ, ಅದರಲ್ಲೂ ವಿಶೇಷವಾಗಿ ದಾವಣಗೆರೆ ಜಿಲ್ಲೆಗೆ ಮತ್ತು ವೀರಶೈವ ಲಿಂಗಾಯತ ಮಹಾಸಭೆಗೆ ತುಂಬಲಾರದ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.

CM Siddharamaiah ಅವರೊಂದಿಗಿನ ದಶಕಗಳ ಒಡನಾಟ, ಸಮಾಜದ ಒಗ್ಗಟ್ಟಿಗಾಗಿ ಅವರ ತುಡಿತ, ಅವರ ನಿರಂತರ ಪ್ರಯತ್ನಗಳನ್ನು ಹತ್ತಿರದಿಂದ ಕಂಡಿದ್ದೇನೆ. ವೈಯಕ್ತಿಕವಾಗಿ ಒಬ್ಬ ಆತ್ಮೀಯ ಹಿರಿಯಣ್ಣನನ್ನು ಕಳೆದುಕೊಂಡಿದ್ದೇನೆ. ಭಗವಂತನು ಅವರ ಆತ್ಮಕ್ಕೆ ಸದ್ಗತಿ ನೀಡಲಿ, ಅವರ ಕುಟುಂಬ ಸದಸ್ಯರಿಗೆ, ಅಪಾರ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಓಂ ಶಾಂತಿ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...