CM Siddharamaiah ಹಿರಿಯ ನಾಯಕರು, ಮಾಜಿ ಸಚಿವರು, ಜನಪ್ರಿಯ ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರು, ಅತ್ಯಂತ ಆತ್ಮೀಯರೂ ಆಗಿದ್ದ ಶ್ರೀ ಶಾಮನೂರು ಶಿವಶಂಕರಪ್ಪನವರ ನಿಧನ ಸುದ್ದಿ ಕೇಳಿ ಅತೀವ ದುಃಖವಾಗಿದೆ ಎಂದು ಸಿಎಂ ಸಿದ್ದರಾಮಯ್ಯನವರು ಸಂತಾಪ ಸೂಚಿಸಿದ್ದಾರೆ.
ಅವರ ನಿಧನದಿಂದ ನಾಡು ಒಬ್ಬ ಹಿರಿಯ ರಾಜಕಾರಣಿಯನ್ನು ಕಳೆದುಕೊಂಡಿದೆ. ವಿಶೇಷವಾಗಿ ವೀರಶೈವ ಲಿಂಗಾಯತ ಸಮಾಜದ ಹಿರಿಯ ನಾಯಕನ ಯುಗಾಂತ್ಯವಾಗಿದೆ ಎಂದಿದ್ದಾರೆ.
ಶಿಕ್ಷಣ, ಅರೋಗ್ಯ ಮತ್ತು ಸಮಾಜ ಸೇವೆಯ ಮೂಲಕ ಲಕ್ಷಾಂತರ ಜನರ ಬದುಕನ್ನು ಬೆಳಗಿದ್ದ, ಶಾಮನೂರು ಶಿವಶಂಕರಪ್ಪನವರ ದಶಕಗಳ ಸುದೀರ್ಘ ಸೇವೆ, ಜನಪರ ಕಾಳಜಿ ಮತ್ತು ಸಾಧನೆಗಳು ಮಾದರಿಯಾಗಿದೆ. ಅವರ ಅಗಲಿಕೆಯಿಂದ ರಾಜ್ಯ ರಾಜಕಾರಣಕ್ಕೆ, ಅದರಲ್ಲೂ ವಿಶೇಷವಾಗಿ ದಾವಣಗೆರೆ ಜಿಲ್ಲೆಗೆ ಮತ್ತು ವೀರಶೈವ ಲಿಂಗಾಯತ ಮಹಾಸಭೆಗೆ ತುಂಬಲಾರದ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.
CM Siddharamaiah ಅವರೊಂದಿಗಿನ ದಶಕಗಳ ಒಡನಾಟ, ಸಮಾಜದ ಒಗ್ಗಟ್ಟಿಗಾಗಿ ಅವರ ತುಡಿತ, ಅವರ ನಿರಂತರ ಪ್ರಯತ್ನಗಳನ್ನು ಹತ್ತಿರದಿಂದ ಕಂಡಿದ್ದೇನೆ. ವೈಯಕ್ತಿಕವಾಗಿ ಒಬ್ಬ ಆತ್ಮೀಯ ಹಿರಿಯಣ್ಣನನ್ನು ಕಳೆದುಕೊಂಡಿದ್ದೇನೆ. ಭಗವಂತನು ಅವರ ಆತ್ಮಕ್ಕೆ ಸದ್ಗತಿ ನೀಡಲಿ, ಅವರ ಕುಟುಂಬ ಸದಸ್ಯರಿಗೆ, ಅಪಾರ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಓಂ ಶಾಂತಿ ಎಂದಿದ್ದಾರೆ.
