Thursday, March 19, 2026
Thursday, March 19, 2026

Guarantee Scheme ಮಿಳ್ಳಘಟ್ಟದಲ್ಲಿ ಅತಿ ಕ್ರಮ ವಾಣಿಜ್ಯ ಸಂಕೀರ್ಣ ನಿರ್ಮಿಸಲಾಗುತ್ತಿದೆ, ತಡೆಕ್ರಮ ಕೈಗೊಳ್ಳಲು ಮಹಾನಗರ ಪಾಲಿಕೆಗೆ ಮನವಿ

Date:

Guarantee Scheme ಕಾನೂನು ಉಲ್ಲಂಘಿಸಿ ಶಿವಮೊಗ್ಗ ನಗರದ ಮಿಳ್ಳಘಟ್ಟ ಮುಖ್ಯ ರಸ್ತೆ ಅಣ್ಣ ನಗರದ ನಾಲ್ಕನೇ ತಿರುವು ಬಲ ಭಾಗದಲ್ಲಿ ವಾಣಿಜ್ಯ ಕಟ್ಟಡ ನಿರ್ಮಿಸಲಾಗುತ್ತಿದೆ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನದ ಪ್ರಾಧಿಕಾರ ಜಿಲ್ಲಾ ಸದಸ್ಯೆ ಬಿ.ಎ.ಅರ್ಚನಾ ನಿರಂಜನ್ ಆರೋಪಿಸಿದರು.

ರಾಜಕಾಲುವೆ ಒಡೆದು ಹಾಕಿರುವ ಪರಿಣಾಮ ಕಸ ಕಡ್ಡಿ ಗಲೀಜು ತುಂಬಿಕೊಂಡು ಸಾಂಕ್ರಾಮಿಕ ಕಾಯಿಲೆಗೆ ಅಹ್ವಾನವಾಗಿದೆ. ಹಾಗಾಗಿ ಇದರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಂಡು ಸ್ಥಳೀಯ ನಿವಾಸಿಗಳಿಗೆ ಅನುಕೂಲ ಮಾಡಿಕೊಡುವಂತೆ ಆಯಕ್ತರಿಗೆ ಮನವಿ ಮೂಲಕ ಒತ್ತಾಯಿಸಿದರು.

ವಾಣಿಜ್ಯ ಕಟ್ಟಡವು ನೀಲಿ ನಕ್ಷೆಯಲ್ಲಿ ತೋರಿಸಿರುವಂತೆ ನಿರ್ಮಾಣ ಮಾಡದೇ, ಅಕ್ಕ-ಪಕ್ಕ ಒತ್ತವರಿ ಮಾಡಿಕೊಂಡು, ಯಾವುದೇ ರೀತಿ ಪಾರ್ಕಿಂಗ್ ಸ್ಥಳಾವಕಾಶ ಬಿಡದೆ ನಿರ್ಮಿಸಲಾಗುತ್ತಿದೆ, ರಸ್ತೆಯಲ್ಲಿ ಮರಳು, ಜಲ್ಲಿ ಕಲ್ಲು ಹಾಗೂ ಸಿಮೆಂಟ್ ಬ್ರಿಕ್ಸ್‌ನ್ನು ಎಲ್ಲೆಂದರಲ್ಲಿ ಹಾಕಿರುವುದರಿಂದ ವಾಹನ ಸವಾರರಿಗೆ ಹಾಗೂ ಸ್ಥಳೀಯರಿಗೆ ಓಡಾಡಲು ತೊಂದ್ರೆಯಾಗುತ್ತಿದೆ ಎಂದು ದೂರಿದರು.

Guarantee Scheme ಶಿವಮೊಗ್ಗ ಮಹಾನಗರಪಾಲಿಕೆ ಆಯುಕ್ತರಿಗೆ ಗ್ಯಾರಂಟಿ ಯೋಜನೆ ಅನುಷ್ಠಾನದ ಜಿಲ್ಲಾ ಸದಸ್ಯರಾದ ಅರ್ಚನಾ ನಿರಂಜನ್ ನೇತೃತ್ವದಲ್ಲಿ ಮನವಿ ಸಲ್ಲಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...