Tuesday, August 25, 2026
Tuesday, August 25, 2026

D. K. Shivakumar ಕೃಷ್ಣ ಮೇಲ್ದಂಡೆ ಯೋಜನೆಯ ಸಂತ್ರಸ್ತರ ವಾಸ್ತವ ಪರಿಸ್ಥಿತಿ ಅಧ್ಯಯನಕ್ಕೆ ಪ್ರತ್ಯೇಕ ಸಮಿತಿ ರಚನೆ: ಡಿಸಿಎಂ ಡಿ.ಕೆ.ಶಿವಕುಮಾರ

Date:

D. K. Shivakumar ಪ್ರತ್ಯೇಕವಾದ ಸಮಿತಿಯೊಂದನ್ನು ರಚಿಸಿ, ಕೃಷ್ಣ ಮೇಲ್ದಂಡೆ ಯೋಜನೆಯ ಸಂತ್ರಸ್ತರ ವಾಸ್ತವ ಪರಿಸ್ಥಿತಿಯ ಬಗ್ಗೆ ಅಧ್ಯಯನ ನಡೆಸಿ ಅವರಿಗೆ ಸಹಾಯಹಸ್ತ ಕಲ್ಪಿಸುವುದಾಗಿ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಅವರು ಹೇಳಿದರು.

ಕೃಷ್ಣ ಮೇಲ್ದಂಡೆ ಯೋಜನೆಯಡಿಯಲ್ಲಿ ವಸತಿ ಹಾಗೂ ಜಮೀನುಗಳನ್ನು ಕಳೆದುಕೊಂಡ ರೈತರಿಗೆ ಪುನರ್ ವಸತಿ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು ನಿಯಮ 330ರ ಮೇರೆಗೆ ಸದಸ್ಯರಾದ ನಿರಾಣಿ ಹಣಮಂತಪ್ಪ ರುದ್ರಪ್ಪ ಹಾಗೂ ಪಿ.ಹೆಚ್. ಪೂಜಾರ್ ಅವರು ಪರಿಷತ್ತಿನಲ್ಲಿ ಗುರುವಾರ ಮಂಡಿಸಿದ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿಗಳು, ರಾಜ್ಯ ಸರ್ಕಾರವು ಸಂತ್ರಸ್ಥರ ನೆರವಿಗೆ ಬದ್ಧವಾಗಿದೆ ಎಂದು ತಿಳಿಸಿದರು.

D. K. Shivakumar ಕೃಷ್ಣ ಮೇಲ್ದಂಡೆ ಯೋಜನೆಯ ಪ್ರದೇಶದ ಸಂತ್ರಸ್ತರಿಗೆ ಸಮಾಜದಲ್ಲಿ ಗೌರವ ಸಿಗುತ್ತಿಲ್ಲ. ಇಲ್ಲಿವರೆಗೆ ಈ ಭಾಗದಲ್ಲಿ ಶೇ.50ರಷ್ಡು ಮಾತ್ರ ನೀರಾವರಿಯಾಗಿದ್ದು, ಇದುವರೆಗೆ ಪೂರ್ಣ ಪ್ರಮಾಣದಲ್ಲಿ ನೀರಾವರಿ ಆಗಿರುವುದಿಲ್ಲ. ಇದುವರೆಗೆ 146 ಪುನರ್ವಸತಿ ಕೇಂದ್ರಗಳಿಗೆ ಅಧಿಕಾರಿಗಳು ಸರಿಯಾಗಿ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಏನಾಗಿದೆ ಎಂದು ನೋಡಿಲ್ಲ. ಇನ್ನೂ 20 ವರ್ಷಗಳ ಕಳೆದರೆ ಅಲ್ಲಿನ ಜನ ಘೇರಾವು ಹಾಕುವ ಪರಿಸ್ಥಿತಿ ಬರಬಹುದು. ಆಣೆಕಟ್ಟು ವಿಸ್ತರಣೆಯಿಂದಾಗಿ ಬಾಧಿತವಾದ ಗ್ರಾಮಗಳಲ್ಲಿನ ಸಂತ್ರಸ್ಥರ ಪರಿಸ್ಥಿತಿ ಸರಿ ಇಲ್ಲ ಎಂದು ಸದಸ್ಯರಾದ ಪಿ ಎಚ್ ಪೂಜಾರ ಹಾಗೂ ನಿರಾಣಿ ಹಣಮಂತ ರುದ್ರಪ್ಪ ಅವರು ಸದನದಲ್ಲಿ ನೋವು ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...