Thursday, September 10, 2026
Thursday, September 10, 2026

Shri Shivaganga Yoga Kendra ಧ್ಯಾನಗಳಲ್ಲಿ 112ಕ್ಕಿಂತಲೂ ಜಾಸ್ತಿ ವಿಧಾನಗಳಿವೆ- ವಿರಕ್ತಮಠದ ಹಾಲಯ್ಯ.

Date:

Shri Shivaganga Yoga Kendra ಆನಾಪಾನಸತಿ ಧ್ಯಾನ ಅಂದರೆ ನಮ್ಮ ದೇಹದ ಒಳಗೆ ಸಹಜವಾಗಿ ಬರುವ ಉಸಿರು ಮತ್ತು ದೇಹದಿಂದ ಹೊರಗೆ ಹೋಗುವ ಸಹಜವಾದ ಉಸಿರನ್ನು ಗಮನಪೂರ್ವಕವಾಗಿ ಬಹುಎಚ್ಚರಿಕೆಯಿಂದ ಅರಿಯುವುದು ಎಂದು ವಿರಕ್ತಮಠದ ಹಾಲಯ್ಯ ಹೇಳಿದರು.

ಶಿವಗಂಗಾ ಯೋಗಕೇಂದ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಆನಾಪಾನಸತಿ ಧ್ಯಾನ ಪದ್ಧತಿಯು ಈಗಲೂ ಸಹ ಹಲವಾರು ಧ್ಯಾನ ಕ್ರಮಗಳಿಗೆ ಮೊದಲ ಮೆಟ್ಟಿಲಾಗಿದೆ. ಧ್ಯಾನದಲ್ಲಿ 112ಕ್ಕಿಂತಲೂ ಜಾಸ್ತಿ ವಿಧಾನಗಳು ಇವೆ ಎಂದು ತಿಳಿಸಿದರು.

ಗೌತಮ ಬುದ್ಧ ಸಂಶೋಧಿಸಿದ ಹೊಸ ಧ್ಯಾನದ ದಾರಿ ಎಂದರೆ ಅದು ವಿಪಶ್ಯನ. ವಿಪಶ್ಯನ ಎನ್ನುವುದು ಪಾಳಿ ಶಬ್ಧದ ಮೂಲ ರೂಪ. ಪಶ್ಯನ ಎಂದರೆ ನೋಡುವುದು ವಿಪಶ್ಯನ ಅಂದ್ರೆ ವಿಶೇಷವಾಗಿ ನೋಡುವುದು. ನಮ್ಮ ದೇಹದಲ್ಲಿ ಉಂಟಾಗುವ ಸಂವೇದನೆಗಳನ್ನ ನಿರಂತರವಾಗಿ ಗಮನಪೂರ್ವಕವಾಗಿ ದೃಷ್ಟ ಭಾವದಿಂದ ಗಮನಿಸುವುದೇ ಆಗಿದೆ. ಅದನ್ನು ವಿಪಶ್ಯನ ಧ್ಯಾನ ಎನ್ನುತ್ತಾರೆ ಎಂದರು.

Shri Shivaganga Yoga Kendra ಧ್ಯಾನ ಮಾಡುವುದರಿಂದ ನಮ್ಮ ಮನೋಮಂದಿರದ ಆಳದಲ್ಲಿ ಹುದುಗಿರುವ ಎಲ್ಲ ತರದ ಮನೋಕ್ಲೇಶಗಳು, ಭ್ರಾಂತಿಗಳು, ಅಸುರಿ ಗುಣಗಳು ಮಾಯವಾಗುತ್ತ ಬೇರು ಸಮೇತ ಹೊರಗೆ ಬರುತ್ತವೆ. ಅಂದರೆ ನಮ್ಮ ಮನಸ್ಸು ಸಂಪೂರ್ಣವಾಗಿ ನಿರ್ಮಲವಾಗುತ್ತದೆ. ತನ್ಮೂಲಕ ನಮ್ಮ ದೇಹದ ಮತ್ತು ಮನಸ್ಸಿನ ಮೇಲಾಗುವ ಕಾಯಿಲೆಗಳ ಪ್ರಭಾವವು ಕಡಿಮೆಯಾಗುತ್ತದೆ. ನಮ್ಮ ಆರೋಗ್ಯ ಸಹಜವಾಗಿ ಸುಧಾರಣೆಯಾಗುತ್ತದೆ. ಎಲ್ಲ ತರದ ಮನೋದೈಹಿಕ ಕಾಯಿಲೆಗಳು ಮನೋ ಮೂಲ ಹೊಂದಿರುವ ತೊಂದರೆಗಳು ನಿವಾರಣೆಯಾಗುತ್ತವೆ.

ಇಂತಹ ಅಮೂಲ್ಯವಾದ ಮತ್ತು ಅತಿ ಸರಳವಾದ, ಎಲ್ಲಾ ಜಾತಿ, ಮತ, ಪಂಥ, ಧರ್ಮ, ಭಾಷೆ, ದೇಶ, ಜನಾಂಗದವರು ಸಹ ಅನುಸರಿಸಬಹುದಾಗಿದೆ. ಸಾರ್ವಕಾಲಿಕ ಧ್ಯಾನದ ಕ್ರಮವನ್ನ ನಾವು ಅನುಸರಿಸುತ್ತ ನಮ್ಮ ಎಲ್ಲ ಕಷ್ಟ ಸಂಕೋಲೆಗಳಿಂದ ಮುಕ್ತಿಯನ್ನು ಹೊಂದಬೇಕು ಎಂದು ಹೇಳಿದರು.

ಶಿವಗಂಗಾ ಯೋಗ ಕೇಂದ್ರದಲ್ಲಿ ಆಯೋಜಿಸಿದ್ದ ವಿಶ್ವ ಧ್ಯಾನ ದಿನಾಚರಣೆಯಲ್ಲಿ ಜಿ.ವಿಜಯಕುಮಾರ್, ಕಾಟನ್ ಜಗದೀಶ್, ಜಿ.ಎಸ್.ಓಂಕಾರ್, ವಿಜಯ ಬಾಯರ್, ಟ್ರಸ್ಟಿ ಹಾಲಪ್ಪ, ಶಿವಗಂಗಾ ಯುವ ಕೇಂದ್ರದ ಕಾರ್ಯದರ್ಶಿ ಚಂದ್ರಶೇಖರಯ್ಯ ಹಾಗೂ ಟ್ರಸ್ಟಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.

38 ಶಾಖೆಗಳಿಂದ ಯೋಗ ಶಿಬಿರಾರ್ಥಿಗಳು ಧ್ಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಒಂದು ಗಂಟೆ ಧ್ಯಾನ ಮಾಡುವುದರ ಜೊತೆಗೆ ವಿಶ್ವ ಧ್ಯಾನ ದಿನಾಚರಣೆಯ ಮಹತ್ವವನ್ನು ಅರಿತರು. ಕಾರ್ಯಕ್ರಮದಲ್ಲಿ ಎಲ್ಲಾ ಶಾಖೆಗಳ ಯೋಗ ಶಿಕ್ಷಕರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...