Thursday, September 10, 2026
Thursday, September 10, 2026

Seva Sindhu ವಿಕಲಚೇತನರ ರಿಯಾಯಿತಿ ಬಸ್ ಪಾಸ್ / ನವೀಕರಣಕ್ಕೆ ಅರ್ಜಿ ಆಹ್ವಾನ.

Date:

Seva Sindhu 2026ನೇ ಸಾಲಿಗೆ ವಿಕಲಚೇತನರ ರಿಯಾಯಿತಿ ಬಸ್ ಪಾಸ್‌ಗಳ ವಿತರಣೆ/ನವೀಕರಣಕ್ಕೆ “ಸೇವಾ ಸಿಂಧು” ಆನ್‌ಲೈನ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ದಿ.30/12/2025 ರಿಂದ ದಿ.28/02/2026 ರವರೆಗೆ https://serviceonline.gov.in.karnataka/URL ಬಳಸಿ ಅರ್ಜಿ ಸಲ್ಲಿಸುವುದು ಕಡ್ಡಾಯ. ನಿಗದಿಪಡಿಸಿದ ದಿನಾಂಕದ ಒಳಗೆ ಪಾಸ್‌ಗಳ ವಿತರಣೆ/ನವಿಕರಿಸಬೇಕಾಗಿರುತ್ತದೆ.
ಹೊಸದಾಗಿ ವಿಕಲಚೇತನರ ಬಸ್‌ಪಾಸ್ ಪಡೆಯಲು ವಿಭಾಗೀಯ ನಿಯಂತ್ರಣಾಧಿಕಾರಿಗಳು ಶಿವಮೊಗ್ಗ ವಿಭಾಗ ಎಂಬ ಕೌಂಟರ್ ಆಯ್ಕೆ ಮಾಡುವುದು ಹಾಗೂ 2025ನೇ ಸಾಲಿನಲ್ಲಿ ಪಾಸ್ ಪಡೆದಿರುವ ಫಲಾನುಭವಿಗಳು ಪಾಸ್ ನವೀಕರಣಕ್ಕಾಗಿ ಘಟಕ ವ್ಯವಸ್ಥಾಪಕರ ಕೌಂಟರ್ ಆಯ್ಕೆ ಮಾಡಲು ಸೂಚಿಸಿದೆ.
Seva Sindhu ಫಲಾನುಭವಿಗಳು ಪಾಸ್ ಪಡೆಯಲು ಬರುವಾಗ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಯವರಿಂದ ದೃಢೀಕರಿಸಿದ ಮಾನ್ಯತೆ ಇರುವ ವಿಕಲಚೇತನರ ಗುರುತಿನ ಚೀಟಿ ಪುಸ್ತಕ ಅಥವಾ ಯುಡಿಐಡಿ ಸ್ಮಾರ್ಟ್ ಕಾರ್ಡ್, ಡಿಸೆಬಿಲಿಟಿ ಸರ್ಟಿಫಿಕೇಟ್, ಫಲಾನುಭವಿಗಳ ಇತ್ತೀಚಿನ 3 ಭಾವಚಿತ್ರ, 2025ನೇ ಸಾಲಿನಲ್ಲಿ ಪಡೆದಿರುವ ವಿಕಲಚೇತನರ ಮೂಲ ಪಾಸ್(ನವೀಕರಣಕ್ಕಾಗಿ), ಆಧಾರ್ ಕಾರ್ಡ್ ಅಥವಾ ರೇಷನ್ ಕಾರ್ಡ್ ನೀಡಬೇಕು(ಈ ಎಲ್ಲಾ ದಾಖಲಾತಿಗಳು ಜೆಪಿಜಿ ಅಥವಾ ಪಿಡಿಎಫ್ ನಮೂನೆಯಲ್ಲಿ ಅಡಕಗೊಂಡಿರಬೇಕು). ಪಾಸ್ ಶುಲ್ಕ ರೂ.660 ಗಳನ್ನು ನಗದು ಮೂಲಕ ಪಾವತಿಸಬೇಕೆಂದು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...