Thursday, September 10, 2026
Thursday, September 10, 2026

Ayyappa Pindi ಧ್ಯಾನ ಕಾರ್ಯಕ್ರಮಕ್ಕೆ ಐದು ಸಾವಿರಕ್ಕೂ ಅಧಿಕ ಜನರಾಗಮನ. ಯಶಸ್ವಿ,ಅರ್ಥಪೂರ್ಣ- ಡಾ.ಅಯ್ಯಪ್ಪ ಪಿಂಡಿ

Date:

Ayyappa Pindi ಸಾರ್ವಜನಿಕರ ಒಳಿತಿಗಾಗಿ, ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ದೇಶಾದ್ಯಂತ ಧ್ಯಾನ ಕಾರ್ಯಕ್ರಮ ನಡೆಸುತ್ತಿದ್ದೇವೆ ಎಂದು ಅಂತರಾಷ್ಟ್ರೀಯ ಧ್ಯಾನ ತರಬೇತುದಾರ ಡಾ. ಅಯ್ಯಪ್ಪ ಪಿಂಡಿ ಹೇಳಿದರು.
ವಿಶ್ವ ಧ್ಯಾನ ದಿನದ ಅಂಗವಾಗಿ ಪೆಸಿಟ್ ಕಾಲೇಜಿನ ಸಭಾಂಗಣದಲ್ಲಿ ಪಿಎಸ್‌ಎಸ್‌ಎಂ, ಪಿರಮಿಡ್ ವರ್ಲ್ಡ್ ಫೌಂಡೇಷನ್, ಪ್ರೇರಣಾ ಎಜುಕೇಷನಲ್ ಆಂಡ್ ಸೋಶಿಯಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಶಿವಮೊಗ್ಗ ನಾದ ಧ್ಯಾನ ಚಕ್ರ 7 ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಯಾವುದೇ ಕಾರ್ಯಕ್ರಮದ ಯಶಸ್ಸಿಗೆ ಸಾರ್ವಜನಿಕರ ಸಹಕಾರ ಮುಖ್ಯ. ಧ್ಯಾನ ಕಾರ್ಯಕ್ರಮಕ್ಕೆ ಐದು ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿರುವುದು ಕಾರ್ಯಕ್ರಮದ ಯಶಸ್ಸಿಗೆ ಸಾಕ್ಷಿ ಎಂದು ತಿಳಿಸಿದರು.
ಶಿವಮೊಗ್ಗ ನಾದ ಧ್ಯಾನ ಚಕ್ರ ಕಾರ್ಯಕ್ರಮ ನಡೆಸಲು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಉಚಿತವಾಗಿ ಪ್ರೇರಣಾ ಸಭಾಂಗಣ ನೀಡಿರುವುದು ವಿಶೇಷವಾಗಿದೆ. ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಅಭಿನಂದನೆಗಳು ಎಂದರು.
ಶಾಂತಲಾ ಸ್ಪೇರೋಕಾಸ್ಟ್ ಶಾಂತಲಾ ಗ್ರೂಪ್ ಮ್ಯಾನೇಜಿಂಗ್ ಡೈರೆಕ್ಟರ್ ಡಿ.ಎಸ್.ಚಂದ್ರಶೇಖರ್ ದಂಪತಿಗೆ ಸನ್ಮಾನಿಸಲಾಯಿತು. ನಂತರ ಡಿ.ಎಸ್.ಚಂದ್ರಶೇಖರ್ ಮಾತನಾಡಿ, 25 ವರ್ಷದಿಂದ ಪ್ರಾಣಾಯಾಮ ಮಾಡುತ್ತಿದ್ದು, ವಿಶೇಷ ಅನುಭವ ನೀಡುತ್ತದೆ. ಧ್ಯಾನದಿಂದ ನಮ್ಮ ದೇಹದ ಪ್ರತಿಯೊಂದು ಅಂಗಾಂಗಗಳು ಆರೋಗ್ಯದಿಂದ ಇರುತ್ತವೆ. ಪ್ರತಿ ದಿನ 20 ನಿಮಿಷ ಧ್ಯಾನ ಮಾಡಬೇಕು ಎಂದು ತಿಳಿಸಿದರು.
Ayyappa Pindi ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ಧ್ಯಾನದ ಅಭ್ಯಾಸದಿಂದ ಸದಾ ಲವಲವಿಕೆಯಿಂದ ಇರಲು ಸಾಧ್ಯ ಆಗುತ್ತದೆ ಎಂದರು.
ರಾಷ್ಟ್ರಮಟ್ಟದ ವಾದ್ಯಗಾರರು ಮೂರು ಗಂಟೆ ವಿಶೇಷ ಸಂಗೀತ ನುಡಿಸಿದರು. ಮಮತಾ ರುದ್ರೇಶ್, ಜಯಾ ಸುರೇಶ್, ನಾಗೇಂದ್ರ, ಶೋಭಾ ಶಿರೂರ, ಮಲ್ಲಿಕಾರ್ಜುನ, ಶ್ರೀಕಾಂತ, ವಿನಾಯಕ ಹೆಗಡೆ ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...