Shimoga News ಚಿರಂತನ ಯೋಗ ಮತ್ತು ಸಂಗೀತ ಟ್ರಸ್ಟ್ ನಿಂದ ಕರ್ನಾಟಕ ಸಂಘ ಶಿವಮೊಗ್ಗ, ಕರ್ನಾಟಕ ಸುಗಮ ಸಂಗೀತ ಪರಿಷತ್ ಜಿಲ್ಲಾ ಘಟಕದಿಂದ ಡಾ. ಅಪ್ಪಗೆರೆ ತಿಮ್ಮರಾಜು ಅವರ ಸಾರಥ್ಯದಲ್ಲಿ ಡಿಸೆಂಬರ್ 24 ಮತ್ತು 25ರಂದು ಕರ್ನಾಟಕ ಸಂಘದ ಸಭಾಂಗಣದಲ್ಲಿ “ಜಾಣರ ಪದ-ಜನಪದ” ಜಾನಪದ ಗೀತಗಾಯನ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ.
Shimoga News ಡಿಸೆಂಬರ್ 24ರಂದು ಬೆಳಗ್ಗೆ 10.15ಕ್ಕೆ ಶಿಬಿರವನ್ನು ಜಿಲ್ಲಾ ಲೇಖಕಿಯರ ಸಂಘದ ಸಂಸ್ಥಾಪಕಿ ಎಸ್.ವಿ.ಚಂದ್ರಕಲಾ ಉದ್ಘಾಟಿಸುವರು. ಚಿರಂತನ ಯೋಗ ಮತ್ತು ಸಂಗೀತ ಟ್ರಸ್ಟ್ ಸ್ಥಾಪಕ ಅಧ್ಯಕ್ಷೆ ಶಾಂತಾ ಎಸ್.ಶೆಟ್ಟಿ ಅಧ್ಯಕ್ಷತೆ ವಹಿಸುವರು. ಡಾ. ಅಪ್ಪಗೆರೆ ತಿಮ್ಮರಾಜು ಶಿಬಿರದ ನೇತೃತ್ವ ವಹಿಸುವರು. ಎಚ್.ಆರ್.ಶಂಕರನಾರಾಯಣ ಶಾಸ್ತ್ರಿ, ಎಚ್.ಎಸ್.ರಮಾಶಾಸ್ತ್ರಿ ಪಾಲ್ಗೊಳ್ಳುವರು.
ಡಿಸೆಂಬರ್ 25ರಂದು ಸಂಜೆ 4.30ಕ್ಕೆ ಸಮಾರೋಪ ಸಮಾರಂಭದಲ್ಲಿ ಪತ್ರಕರ್ತ ಎಸ್.ಚಂದ್ರಕಾಂತ್, ಸಮಾಜ ಸೇವಕ ಕೆ.ಇ.ಕಾಂತೇಶ್, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಭಾಗವಹಿಸುವರು.
ಫೋಟೊ: ಡಾ. ಅಪ್ಪಗೆರೆ ತಿಮ್ಮರಾಜು
