Wednesday, December 24, 2025
Wednesday, December 24, 2025

Karnataka Skill Development Authority ಸಮಯ ಪಾಲನೆ- ಸಂವಹನ, ವ್ಯಕ್ತಿತ್ವ ವಿಕಸನ& ವೃತ್ತಿ ಕೌಶಲ್ಯ ಕಾರ್ಯಾಗಾರ.

Date:

Karnataka Skill Development Authority ಕರ್ನಾಟಕ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಲಿಪಿಕ ನೌಕರರ, ವಾಹನ ಚಾಲಕರ ಮತ್ತು ಗ್ರೂಪ್ ಡಿ ನೌಕರರ ಸಂಘ, ಬೆಂಗಳೂರು ಹಾಗೂ ಶಿವಮೊಗ್ಗ ಜಿಲ್ಲಾ ಶಾಖೆ ಇವರ ಸಂಯುಕ್ತಾಶ್ರಯದಲ್ಲಿ ಡಿ. 27 ರಂದು ಬೆಳಗ್ಗೆ 10.00ಕ್ಕೆ ಶಿವಮೊಗ್ಗದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಸಮಯ ಪಾಲನೆ -ಸಂವಹನ, ವ್ಯಕ್ತಿತ್ವ ವಿಕಸನ ಮತ್ತು ವೃತ್ತಿ ಕೌಶಲ್ಯ ಕಾರ್ಯಾಗಾರ ಹಾಗೂ 2025-29ನೇ ಸಾಲಿಗೆ ನೂತನವಾಗಿ ಆಯ್ಕೆಯಾಗಿರುವ ಶಿವಮೊಗ್ಗ ಜಿಲ್ಲೆ, ವಿಶೇಷ ಘಟನ ಮತ್ತು ಜಿಲ್ಲೆಯ ಎಲ್ಲಾ ತಾಲೂಕು ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ, ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ಬೋಧಕೇತರ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ನಿವೃತ್ತ ಬೋಧಕೇತರ ನೌಕರರಿಗೆ ಸನ್ಮಾನ ಸಮಾರಂಭ ಹಾಗೂ ಶಿವಮೊಗ್ಗ ಜಿಲ್ಲಾ ಸಂಘದ ಮಹಾಸಭೆಯನ್ನು ಆಯೋಜಿಸಲಾಗಿದೆ.
ಈ ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ Karnataka Skill Development Authority ಉದ್ಘಾಟಿಸುವರು. ಕ.ರಾ.ಸಾ.ಶಿ.ಇ.ಲಿ.ನೌ.,ವಾ.ಚಾ.ಮತ್ತು ಗ್ರೂ.ಡಿ.ನೌಕರರ ಸಂಘದ ಜಿಲ್ಲಾಧ್ಯಕ್ಷ ಕಿರಣ್ ಎಸ್.ಕೆ. ಅಧ್ಯಕ್ಷತೆ ವಹಿಸುವರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಪದಗ್ರಾಹಿ ಪದಾಧಿಕಾರಿಗಳಿಗೆ ಸನ್ಮಾನ ಮಾಡಲಿದ್ದಾರೆ. ಕ.ರಾ.ಸ.ನೌ.ಸಂ.ಜಿಲ್ಲಾಧ್ಯಕ್ಷ ಅರ್.ಮೋಹನ್ ಕುಮಾರ್ ನಿವೃತ್ತ ಬೋಧಕೇತರ ನೌಕರರಿಗೆ ಸನ್ಮಾನ ಮಾಡಲಿದ್ದಾರೆ. ಕ.ರಾ.ಸಾ.ಶಿ.ಇ.ಲಿ.ನೌ.,ವಾ.ಚಾ.ಮತ್ತು ಗ್ರೂ.ಡಿ.ನೌಕರರ ಸಂಘದ ರಾಜ್ಯಾಧ್ಯಕ್ಷ ನವೀನ ಎಸ್.ಆರ್. ಇವರು ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಿದ್ದಾರೆ. ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಸಿದ್ದಬಸಪ್ಪ ಬಿ.ಇವರು ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ರಾಜ್ಯ ಮತ್ತು ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳು ಪಾಲ್ಗೊಳ್ಳಲಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Rajyotsava  ತೀರ್ಥಹಳ್ಳಿಯಲ್ಲಿ ವರ್ಣಮಯ ಕನ್ನಡ ರಾಜ್ಯೋತ್ಸವ

Karnataka Rajyotsava ತೀರ್ಥಹಳ್ಳಿಯ ಪ್ರತಿಷ್ಠಿತ ಮಲೆನಾಡು ಯುವಕರ ಸೇವಾ ಸಂಸ್ಥೆಯಿಂದ ಆಯೋಜಿಸಿದ್ದ ಕನ್ನಡ...

Shimoga News ಕನ್ನಡ ಬಾರದ ಸರ್ಕಾರಿ ನೌಕರರಿಗಾಗಿ ಅಂಚೆಮೂಲಕ ಕನ್ನಡ ಶಿಕ್ಷಣ ಯೋಜನೆ: ಅರ್ಜಿಗಳ ಆಹ್ವಾನ

Shimoga News ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಮತ್ತು ಮೈಸೂರಿನ ಭಾರತೀಯ...

J.S. Chidananda Gowda ನಾಡಿಗೆ ಅನ್ನನೀಡುವ ರೈತನನ್ನ ಎಲ್ಲರೂ ಗೌರವಿಸಬೇಕು- ಜೆ.ಎಸ್.ಚಿದಾನಂದ ಗೌಡ.

J.S. Chidananda Gowda ಪಟ್ಟಣದ ಪುರಸಭೆ ಮುಂಭಾಗದ ವೃತ್ತಕ್ಕೆ ರೈತ ವೃತ್ತ...

Shimoga News ದೇಶದಲ್ಲೇ ಕರ್ನಾಟಕವು ಪ್ರವಾಸಿಗರನ್ನ ಆಕರ್ಷಿಸುತ್ತಿದೆ- ಎನ್.ಗೋಪಿನಾಥ್.

Shimoga News ಪ್ರಾಕೃತಿಕ ಹಾಗೂ ಐತಿಹಾಸಿಕವಾಗಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶವಿರುವ ಜಿಲ್ಲೆ...