Monday, July 13, 2026
Monday, July 13, 2026

ಇಂದಿನ ಕವಿತೆ… ಕವಿ: ಡಾ. ರವಿ. ಎಮ್. ಸಿದ್ಲಿಪುರ

Date:

ಯಾರೋ ಗೀಚಿದ ಹಳೆಯ ನಕ್ಷೆಯಲಿ
ನೆಲದ ಒಡಲು ಸೀಳಿ ಹೋಗಿದೆ,
ತನ್ನ ಸೀಮೆಯ ದಾಟದಂತೆ ಗಾಳಿಗೆ
ಸಂಪ್ರದಾಯದ ಬೇಲಿ ಬಿದ್ದಿದೆ.

ಒಂದೇ ಮಣ್ಣಿನಲಿ ಮೊಳೆತ ಎರಡು ಕುಡಿಗಳು
ಬಣ್ಣ ಬೆರೆಸಿ ಅರಳಲೆಂದು ಹಂಬಲಿಸಿದರೆ,
ತಾಯಿ ಬೇರೇ ಸರ್ಪವಾಗಿ ಎದೆಯುಬ್ಬಿಸಿ
ಹಸಿರು ಉಸಿರನ್ನೇ ಹಿಸುಕಿ ನಕ್ಕಿದೆ.

ಬಿಳಿ ಬಟ್ಟೆಯ ಮಡಿಕೆ ಮಲಿನವಾಗಬಾರದೆಂದು
ಕೆಂಪು ರಕ್ತವನ್ನೇ ಸುರಿದು ತೊಳೆದವರು,
ಮರ್ಯಾದೆಯ ಮುರುಕು ಪೇಟದ ಅಡಿಯಲ್ಲಿ
ತಮ್ಮದೇ ಕುಡಿಯ ಹೆಣವ ಹೂತಿಟ್ಟರು.

ಮನೆಯ ಹಜಾರದಲ್ಲಿ ಈಗ ನೀರವ ಮೌನ
ಸಿಂಹಾಸನವೇರಿ ವಿಜೃಂಭಿಸುತ್ತಿದೆ,
ಗೌರವದ ಹಳೆಯ ಗೋಡೆಗಳ ಮೇಲೆ
ಕಂದಮ್ಮಗಳ ಆರ್ತನಾದ ಚಿತ್ರವಾಗಿ ಉಳಿದಿದೆ.

ಜಾತಿಯ ಜೇಡರಬಲೆಯಲ್ಲಿ ಸಿಲುಕಿದ ಕನಸು
ರೆಕ್ಕೆ ಬಡಿದು ಬಡಿದು ಸುಸ್ತಾಗಿದೆ,
ಪ್ರೀತಿ ಸತ್ತ ಸಮಾಧಿಯ ಮೇಲೆ ನಿಂತು
ಜಗವಿದು ಇನ್ನೂ ‘ಗೌರವ’ದ ಪಾಠ ಓದಿದೆ..

ಡಾ. ರವಿ ಎಂ. ಸಿದ್ಲಿಪುರ, ಇವರು ಶಿವಮೊಗ್ಗೆಯವರು. ಕುವೆಂಪು ವಿಶ್ವವಿದ್ಯಾಲಯದಿಂದ ಎಂ.ಎ., ಪತ್ರಿಕೋದ್ಯಮದಲ್ಲಿ ಡಿಪ್ಲೊಮೋ ಮತ್ತು ‘ಕನ್ನಡ ಮಹಾಭಾರತ ಕಾವ್ಯಗಳಲ್ಲಿ ಪ್ರಭುತ್ವ, ಯುದ್ಧ ಮತ್ತು ಜನತೆ’ ಎಂಬ ಸಂಶೋಧನೆಗೆ ಪಿಎಚ್.ಡಿ. ಪದವಿಯನ್ನು ಪಡೆದಿದ್ದಾರೆ. ಇವರ ಲೇಖನಗಳು ವಿವಿಧ ಮಾಸ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ‘ಪರ್ಯಾಯ’, ‘ವಿಮರ್ಶೆ ಓದು’ ಮತ್ತು ‘ಶಾಸನ ಓದು’ ಎಂಬ ಪುಸ್ತಕಗಳನ್ನು ರಚಿಸಿದ್ದಾರೆ. ಪತ್ರಕರ್ತರಾಗಿ ಕೆಲಸ ಮಾಡಿದ ಅನುಭವವಿರುವ ಇವರು, ಪ್ರಸ್ತುತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B. Y. Raghavendra ಕೆರೆ ತುಂಬಿಸಿದ ಏತ ನೀರಾವರಿ: ಉಡುಗಣಿ- ತಾಳಗುಂದ- ಹೊಸೂರು ಗ್ರಾಮಸ್ಥರ ಕಣ್ಣಲ್ಲಿ ಆನಂದ ಭಾಷ್ಪ

B. Y. Raghavendra ಶಿಕಾರಿಪುರ ತಾಲೂಕಿನ ಕೃಷಿ ರಂಗದ ಇತಿಹಾಸದಲ್ಲೇ ಅತ್ಯಂತ...

U.T. Khader ತೀರ್ಥಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಸಚಿವ ಖಾದರ್ ಭೇಟಿ: ಪ್ರತೀ ವಾರ್ಡಿನ ರೋಗಿಗಳೊಂದಿಗೆ ಕ್ಷೇಮ ವಿಚಾರಣೆ

U.T. Khader ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ...

Klive Special Article ಸಕಲ ವಿದ್ಯಾಸಂಪನ್ನ, ಮಹಾಮಹಿಮ ಶ್ರೀವಿಜಯೀಂದ್ರ ತೀರ್ಥರು. ...

ದಿನದ ಒಳ್ಳೆಯಮಾತು(ಯತಿಗಳ ಸ್ಮರಣೆ) ವಿಜಯೀಂದ್ರತೀರ್ಥ ಗುರುಸಾರ್ವಭೌಮರು Klive Special Article ಶ್ರೀವಿಜಯೀಂದ್ರತೀರ್ಥಗುರುಗಳು ಕಲಿಯುಗ ಕಲ್ಪತರು...